![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ವಸತಿ ಯೋಜನೆಗೆ ಗ್ರಹಣ: ಕೈ ಸಾಲದಲ್ಲಿ ಬಡವರು
Eclipse for the Housing Scheme: Poor in hand loan
Team Udayavani, May 18, 2019, 3:08 PM IST
![hasan-tdy-1..](https://www.udayavani.com/wp-content/uploads/2019/05/hasan-tdy-1..-6-620x454.jpg)
ಚನ್ನರಾಯಪಟ್ಟಣ ಎಡಿ ಕಾಲೋನಿಯಲ್ಲಿ ಎಸ್ಸಿ ಜನಾಂಗದ ಆಶ್ರಯ ಮನೆ ಫಲಾನುಭವಿಗೆ ಕಳೆದ ಆರು ತಿಂಗಳಿನಿಂದ ಸಹಾಯ ಧನ ಬರದ ಹಿನ್ನೆಲೆಯಲ್ಲಿ ಮನೆ ನಿರ್ಮಾಣ ಸ್ಥಗಿತ ಗೊಳಿಸಲಾಗಿದೆ
ಚನ್ನರಾಯಪಟ್ಟಣ: ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಕಾಲಕ್ಕೆ ಸರ್ಕಾರ ಸಹಾಯ ಧನ ಬಿಡುಗಡೆ ಮಾಡದೆ ಇರುವುದರಿಂದ ಸಾವಿರಾರು ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿವೆ.
ತಾಲೂಕಿನ ಆರು ಹೋಬಳಿಯ 41 ಗ್ರಾಪಂನಿಂದ ಬಸವ ವಸತಿ ಯೋಜನೆ, ಇಂದಿರಾ ಅವಾಸ್, ರಾಜೀವ್ ಗಾಂಧಿ ವಸತಿ ಯೋಜನೆ, ವಿಶೇಷ ಅಭಿವೃದ್ಧಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಬಸವರ ಹೆಚ್ಚವರಿ ಯೋಜನೆ ಹೀಗೆ ಅನೇಕ ಯೋಜನೆಯಲ್ಲಿ ಸೂರಿಲ್ಲದವರು ಮನೆ ನಿರ್ಮಾಣಕ್ಕೆ ಸರ್ಕಾರವನ್ನು ನಂಬಿಕೊಂಡು ಈಗ ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ.
ಎರಡು ಹಂತ ಮುಗಿದರು ಸಹಾಯಧನವಿಲ್ಲ: ಬಡತನ ರೇಖೆಗಿಂತ ಕೆಳಗಿರುವ ಫಲಾನುಭವಿಗಳಿಗೆ ವಿವಿಧ ವಸತಿ ಯೋಜನೆಯಡಿ 1.20 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಫಲಾನುಭವಿ ಮನೆ ನಿರ್ಮಾಣಕ್ಕೆ ತಳಪಾಯ ಹಾಕಿದಾಗ 30 ಸಾವಿರ, ಮನೆ ಗೋಡೆ ಪೂರ್ಣಗೊಂಡಾಗ 30 ಸಾವಿರ, ಮನೆಯ ಚಾವಣಿ ಹಾಕಿದಾಗ 30 ಸಾವಿರ, ಗೋಡೆಯ ಗಿಲೋ ಮಾಡಿ ಪೂರ್ಣ ಕಾಮಗಾರಿ ಮುಗಿಸಿದಾಗ 30 ಸಾವಿರ ಸಹಾಯಧನ ಬಿಡುಗಡೆ ಮಾಡುವ ಮೂಲಕ ನಾಲ್ಕು ಹಂತದಲ್ಲಿ ಫಲಾನುಭವಿ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಆದರೆ ಎರಡು ಹಂತದ ಕಾಮಗಾರಿ ಮುಕ್ತಾಯವಾದರೂ ಬಿಡಿಗಾಸು ಖಾತೆಗೆ ಜಮೆಯಾಗದ ಹಿನ್ನೆಲೆಯಲ್ಲಿ ಮನೆ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.
ಸರ್ಕಾರ ನಂಬಿ ಸಾಲಗಾರರಾದರು: ಸರ್ಕಾರವೇ ಅರ್ಥಿಕವಾಗಿ ಹಿಂದುಳಿದವರು ಎಂದು ಸೂಚಿಸಿದ ಫಲಾನುಭವಿಗಳು ಸೂರು ನಿರ್ಮಿಸಿಕೊಳ್ಳಲು ಇನ್ನೊಬ್ಬರ ಬಳಿ ಕೈಚಾಚಿ ಸಾಲಮಾಡಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದು ಸಾವಿರಾರು ಬಡಕುಟುಂಬ ಬೀದಿಗೆ ಬರುವಂತಾಗಿವೆ. ಅದು ಸರ್ಕಾರವನ್ನು ನಂಬಿ ಸಾಲಗಾರರಾಗಿರುವುದು ವಿಪರ್ಯಾಸದ ಸಂಗತಿ.
ಬಡ್ಡಿ ಸಾಲಕ್ಕೆ ಮೊರೆ: ಸರ್ಕಾರದಿಂದ ಬಿಡುಗಡೆ ಆಗಬೇಕಿದ್ದ ಸಹಾಯಧನ ಸಕಾಲಕ್ಕೆ ಬಿಡುಗಡೆ ಆಗದೆ ಇರುವುದರಿಂದ ಕೈ ಸಾಲಮಾಡಿದ ಹಣಕ್ಕೆ ಹಲವು ಮಂದಿ ಫಲಾನುಭವಿಗಳು ಬಡ್ಡಿತೆತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಬ್ಬಿಣ, ಮರಳು, ಇಟ್ಟಿಗೆ, ಸಿಮೆಂಟ್, ಜಲ್ಲಿ ಹೀಗೆ ಸಾಮಗ್ರಿಯನ್ನು ಸಾಲದಲ್ಲಿ ತಂದು ಮನೆ ನಿರ್ಮಿಸಿಕೊಳ್ಳಲು ಕಡುಬಡವರು ಮುಂದಾದರು. ಈಗ ಸಾಲ ನೀಡಿದವರು ಮನೆ ಬಾಗಿಲಿಗೆ ಬರುತ್ತಿರುವುದರಿಂದ ಮಾನ ಉಳಿಸಿಕೊಳ್ಳಲು ವಿಧಿ ಇಲ್ಲದೆ ಬಡ್ಡಿ ಸಾಲದ ಮೊರೆ ಹೋಗುತ್ತಿದ್ದಾರೆ.
ಪುರಸಭೆವ್ಯಾಪ್ತಿಗೂ ಅನುದಾನವಿಲ್ಲ: ಪುರಸಭೆ ವ್ಯಾಪ್ತಿಯ 27 ವಾರ್ಡ್ಗಳಿಂದ ಕಳೆದ ಸಾಲಿನಲ್ಲಿ ಸುಮಾರು 70 ಫಲಾನುಭವಿಗಳ ಪೈಕಿ 50 ಮಂದಿಗೆ ಅನುದಾನ ಬಿಡುಗಡೆಯಾಗಿದ್ದು ಉಳಿದ 20 ಮಂದಿಗೆ ಅನುದಾನ ನೀಡಿಲ್ಲ, ಪ್ರಸಕ್ತ ಸಾಲಿನಲ್ಲಿ ಸುಮಾರು 277 ಮಂದಿ ಮನೆ ನಿರ್ಮಾಣ ಮಾಡಿಕೊಳ್ಳುವುದಾಗಿ ಅರ್ಜಿ ನೀಡಿದ್ದು ಪುರಸಭೆ ಅಧಿಕಾರಿಗಳು ಪರಿಶೀಲಿಸಿ ಜಿಲ್ಲಾಧಿಕಾರಿ ಕಚೇರಿಗೆ ರವಾನೆ ಮಾಡಿದ್ದಾರೆ.
ಜಿಲ್ಲಾಡಳಿತ ಚುನಾವಣೆ ಬ್ಯುಸಿ: ಸೂರಿಲ್ಲದವರು ಮಳೆಗಾಲದ ಒಳಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಜಿ ನೀಡಿದ್ದು ಇದುವರೆಗೆ ಜಿಲ್ಲಾಡಳಿತದಿಂದ ನಿರ್ಮಾಣ ಮಾಡಿಕೊಳ್ಳಲು ಆದೇಶ ನೀಡಿಲ್ಲ, ಈಗ್ಗೆ ಎರಡು ವರ್ಷದ ಹಿಂದೆ 43 ಮಂದಿ ಫಲಾನುಭವಿಗಳಲ್ಲಿ 25 ಮಂದಿ ಮಾತ್ರ ಮನೆ ನಿರ್ಮಿಸಿದ್ದಾರೆ. ಉಳಿದ 18 ಮಂದಿಗೆ ಈ ವರ್ಷವೂ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ. ಆದರೆ, ಸಕಾಲಕ್ಕೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಈ ವೇಳೆಯಲ್ಲಿ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಇರುವುದರಿಂದ ವಸತಿ ಯೋಜನೆಯ ಫಲಾನುಭವಿಗಳಿಗೆ ಸಹಾಯ ಧನ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳು ಕುಂಟು ನೆಪ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.