ಮೋಡದ ನಡುವೆ ಗ್ರಹಣ ವೀಕ್ಷಣೆ


Team Udayavani, Jun 22, 2020, 7:31 AM IST

modha-grahana

ಹಾಸನ: ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಭಾನುವಾರ ದೇವಾಲಯಗಳೆಲ್ಲಾ ಮುಚ್ಚಿದ್ದರೆ, ಬಹುತೇಕ ಜನರು ಮನೆಯಿಂದ ಹೊರ ಬಾರದಿದ್ದರಿಂದ ಹಾಸನ ನಗರದಲ್ಲಿ ಮಧ್ಯಾಹ್ನದವರೆಗೂ ರಸ್ತೆಗಳೆಲ್ಲಾ ಖಾಲಿಯಾಗಿದ್ದವು. ಸೂರ್ಯಗ್ರಹಣದ ಬಗ್ಗೆ ಜನರಲ್ಲಿ ಮೌಡ್ಯತೆ ನಿವಾರಿಸಲು ಶ್ರಮ ಸಮಾಜ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರವು ಭಾರತ ಜ್ಞಾನ ವಿಜ್ಞಾನ ಸಮಿತಿ (ಬಿಜಿವಿಎಸ್‌) ಸಹಕಾರದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿ ಗ್ರಹಣೋತ್ಸವ  ಕಾರ್ಯಕ್ರಮ ಆಯೋಜಿಸಿತ್ತು.

ಮೌಡ್ಯ ನಿವಾರಣೆಗೆ ಕ್ರಮ: ಈ ಸಂದರ್ಭ ದಲ್ಲಿ ಮಾತನಾಡಿದ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ. ಸಾವಿತ್ರಿ, ಶ್ರಮ ಸಮಾಜ ಜ್ಞಾನ ಅಧ್ಯಯನ ಮತ್ತು ಸಂಶೋಧಕ ಕೇಂದ್ರದ ಅಧ್ಯಕ್ಷ ಧರ್ಮೇಶ್‌  ಹಾಗೂ ಕೆ.ಎಸ್‌.ರವಿಕುಮಾರ್‌, ಗ್ರಹಣ ಎಂಬುದು ಸೌರವ್ಯೂಹದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಖಗೋಳ ಕೌತುಕವಾಗಿದ್ದು, ಈ ಬಗ್ಗೆ ಮೌಡ್ಯ ಹೋಗಲಾಡಿಸಬೇಕಿದೆ.

ಆದರೆ ದೃಶ್ಯ ಮಾಧ್ಯಮಗಳಲ್ಲಿ ಗ್ರಹಣ ಸಂಬಂಧ ಮೌಡ್ಯ  ಬಿತ್ತರಿಸಲಾಗುತ್ತಿವೆ. ಜನರು ಮೂಢ ನಂಬಿಕೆ ಬಿಟ್ಟು ವೈಜ್ಞಾನಿಕ ಮನೋಭಾವ ಬೆಳೆಸಿ ಕೊಳ್ಳಬೇಕಿದೆ ಎಂದರು. ಸೌರ ವಿದ್ಯಮಾನಗಳನ್ನು ಎಲ್ಲರೂ ನೋಡುವ ಮೂಲಕ ಸೌರ ಕೌತುಕಗಳನ್ನು ಅಧ್ಯಯನ ಮಾಡಬೇಕು. ಇಂತಹ ಘಟನೆಗಳನ್ನು ಜನಸಾಮಾನ್ಯರಿಗೆ ವೀಕ್ಷಿಸುವ ಅವಕಾಶ ಮಾಡಿಕೊಟ್ಟಿರುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು.

ವೈಜ್ಞಾನಿಕ ಮನೋಭಾವ ಬೆಳೆಸಿ: 2020 ವೈಜ್ಞಾನಿಕ ಮನೋಧರ್ಮದ ಪರಿಚಾರಕ ರಾದ ಎಚ್‌.ನರಸಿಂಹಯ್ಯ ಅವರ ಜನ್ಮ ಶತಮಾನೋತ್ಸವ ವರ್ಷವಾಗಿದ್ದು, ಈ ಅಂಗವಾಗಿ ಗ್ರಹಣ ವೀಕ್ಷಣೆ ಕಾರ್ಯಕ್ರಮ ಹಯು¾ಕೊಳ್ಳಲಾಗಿದೆ.  ಗ್ರಹಣ ಸೌರವ್ಯೂಹದ ನೆರಳು ಬೆಳಕಿನ ಕೌತುಕವಾಗಿದೆ. ಇದನ್ನು ವೀಕ್ಷಣೆ ಮಾಡುವುದು ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ನೆರವಾಗಲಿದೆ. ಎಚ್ಚೆನ್‌ ಜನ್ಮಶತಮಾನೋತ್ಸವದ ಅಂಗವಾಗಿ ಇದೇ ರೀತಿಯ ವೈಜ್ಞಾನಿಕ ಮನೋಭಾವ  ಬೆಳೆಸುವ ಕಾರ್ಯಕ್ರಮಗಳು ಸೇರಿದಂತೆ ವಿವಿಧ ರೀತಿಯ ಕಾರ್ಯ ಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಹೇಳಿದರು.

ವಿಜ್ಞಾನ ಬರಹಗಾರರಾದ ಅಹಮದ್‌ ಹಗರೆ ಮತ್ತು ಕವಿತಾ ಅವರು ಕಾರ್ಯಕ್ರಮದ ವೇಳೆ ಗ್ರಹಣ ವಿವರ  ನೀಡಿದರು. ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಯಪ್ರಕಾಶ್‌, ಕಾಂತರಾಜು, ಗೋಪಾಲಕೃಷ್ಣ, ಶ್ರಮ ಸಮಾಜ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಕೇಂದ್ರದ ಟ್ರಸ್ಟಿಗಳಾದ ಪೃಥ್ವಿ, ಸತ್ಯನಾರಾಯಣ ಅರವಿಂದ, ವಸಂತಕುಮಾರ್‌,  ದಸಂಸ ಮುಖಂಡರಾದ ಸಂದೇಶ್‌, ಕಲಾವಿದ ಗ್ಯಾರಂಟಿ ರಾಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ಗ್ರಹಣ ವೀಕ್ಷಣೆಗೆ ವ್ಯವಸ್ಥೆ: ಗ್ರಹಣ ವೀಕ್ಷಣೆಗೆ ಭಾರತ ಜ್ಞಾನ ವಿಜ್ಞಾನ ಸಮಿತಿ ಸೋಲಾರ್‌ ಕನ್ನಡಕಗಳ ವ್ಯವಸ್ಥೆ ಮಾಡಿದ್ದರೂ ಮಳೆ ಮತ್ತು ಮೋಡದ ವಾತಾವರಣದಿಂದ ಸೂರ್ಯ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿಲ್ಲ. ಮೋಡದ  ಮರೆಯಲ್ಲಿ ಆಗಾಗ ಕಾಣಿಸುತ್ತಿದ್ದ ಸೂರ್ಯನಿಗೆ ಆವರಿಸಿದ ಗ್ರಹಣ ವೀಕ್ಷಿಸಿ ಸಾರ್ವಜನಿಕರು ಪುಳಕಿತರಾದರು. ಗ್ರಹಣದ ಸಂದರ್ಭದಲ್ಲಿ ಊಟ ತಿಂಡಿ ಮಾಡಬಾರದು ಎಂಬ ಮೌಡ್ಯ ನಿವಾರಿಸಿ ಸಾರ್ವಜನಿಕರಿಗೆ ಜಾಗೃತಿ  ಮೂಡಿಸಲು ಗ್ರಹಣದ ಸಮಯದಲ್ಲಿ ತಿಂಡಿ ಸೇವನೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನಕ್ಕೆ ಸ್ಪಂದಿಸಿದ ಜನರು ಉಪಾಹಾರ ಸೇವಿಸಿ ಸೌರ ಕನ್ನಡ ಗಳ ಮೂಲಕ ಗ್ರಹಣ ವೀಕ್ಷಿಸಿದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.