ಬಡವರಿಗೆ ಶಿಕ್ಷಣ, ಆರೋಗ್ಯ ಗಗನ ಕುಸುಮ


Team Udayavani, Feb 25, 2019, 7:29 AM IST

shikshana.jpg

ಅರಸೀಕೆರೆ: ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕಾದ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳು ಇಂದು ಖಾಸಗಿ ರಂಗದ ಕಪಿ ಮುಷ್ಠಿಗೆ ಸಿಲುಕಿ ಬಡವರ್ಗದ ಜನರಿಗೆ ಅನ್ಯಾಯವಾಗುತ್ತಿರುವುದರಿಂದ ಈ ಬಗ್ಗೆ ವರ್ಗ ಸಂಘರ್ಷ ಉಂಟಾಗವ ಸಾಧ್ಯತೆ ಇದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಸಿದರು.

ಅರಸೀಕೆರೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವರ್ಧಮಾನ್‌ ಸ್ಥಾನಕ್‌ ವಾಸಿ ಜೈನ್‌ ಶ್ರಾವಕ ಸಂಘ ಹಾಗೂ ಕಣಚೂರು ಮೆಡಿಕಲ್‌ ಕಾಲೇಜು ಮತ್ತು ಸೊಂಶೋಧನಾ ಕೇಂದ್ರ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ಪ್ರಜೆಗೂ ಅಗತ್ಯವಾಗಿ ಬೇಕಾಗುವ ಶಿಕ್ಷಣ ಮತ್ತು ಆರೋಗ್ಯ ಇಂದು ಬಡವರ್ಗದ ಜನರಿಗೆ ಕೈಗೆಟುಕದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇಂತಹಾ ಸಂದರ್ಭದಲ್ಲಿ ಸ್ವಯಂ ಸೇವಾ ಸಂಘ ಸಂಸ್ಥೆಗಳು ಯಾವುದೇ ಪ್ರತಿಫ‌ಲ ಅಪೇಕ್ಷೆ ಇಲ್ಲದೆ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಪ್ರಶಂಸಿಸಿದರು.

ಆರೋಗ್ಯ ಕ್ಷೇತ್ರಕ್ಕೆ 18 ಸಾವಿರ ಕೋಟಿ ರೂ.: ಪ್ರತಿವರ್ಷ ಸರ್ಕಾರ 18 ಸಾವಿರ ಕೋಟಿ ರೂ.ಗಳನ್ನು ಆರೋಗ್ಯ ಕ್ಷೇತ್ರದ ಸರ್ಕಾರಿ ಆಸ್ಪತ್ರೆ ನಿರ್ವಹಣೆಗೆ ಖರ್ಚು ಮಾಡುತ್ತಿದ್ದು, ವೈದ್ಯರು ಮತ್ತು ಸಿಬ್ಬಂದಿ ವರ್ಗದವರಿಗೆ 17 ಸಾವಿರ ಕೋಟಿ ರೂ. ಸಂಬಳಕ್ಕೆ ವೆಚ್ಚ ಮಾಡುತ್ತಿದ್ದು 1ಸಾವಿರ ಕೋಟಿ ರೂಗಳಲ್ಲಿ ಆಸ್ಪತ್ರೆಗೆ ಬೇಕಾದ ಔಷದ ಮತ್ತು ಉಪಕರಣಗಳನ್ನು ಖರೀದಿಸಿ ಸೌಲಭ್ಯಗಳನ್ನು ನೀಡಲಾಗುತ್ತದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಅತ್ಯಂತ ಕಡಿಮೆ ವೆಚ್ಚದಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲಾಗುತ್ತದೆಯಾದರೂ ಬಡವರ್ಗದ ಜನ ಖಾಸಗಿ ಆಸ್ಪತ್ರೆಗಳತ್ತ ಹೋಗಿ ಸಣ್ಣ-ಪುಟ್ಟ ಕಾಯಿಲೆಗೂ ತಮ್ಮಲಿರುವ ಬಡವೆ-ವಸ್ತುಗಳನ್ನು ಕಳೆದುಕೊಂಡು ಸಾಲಮಾಡಿ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.

ಶೈಕ್ಷಣಿಕ ಕ್ಷೇತ್ರ ದುಬಾರಿ: ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಹಣ ಮಾಡುವ ಉದ್ದೇಶದಿಂದಲೇ ಖಾಸಗಿ ರಂಗ ಪ್ರವೇಶಿಸಿದ್ದು ಬಡವರ್ಗದ ಹಾಗೂ ಮಧ್ಯಮ ವರ್ಗದ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ಗಗನ ಕುಸುಮವಾಗಿದೆ. ಪ್ರತಿವರ್ಷ ಸರ್ಕಾರದ ಸೌಲಭ್ಯಗಳನ್ನು ಪಡೆದು 5,600ಮಂದಿ ವೈದ್ಯಕೀಯ ಶಿಕ್ಷಣ ಮುಗಿಸಿ ಹೊರಬರುತ್ತಿದ್ದಾರೆ. ಈ ಪೈಕಿ ಒಬ್ಬರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಮಾಡಲು ಸಿದ್ಧರಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಹಣದ ಆಸೆಗಾಗಿ ಹೋಗುತ್ತಿರುವ ಪರಿಣಾಮ ರಾಜ್ಯದಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞವೈದ್ಯರ ಕೊರತೆ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಂಬಿಬಿಎಸ್‌ ವೈದ್ಯರ ಕೊರತೆ: ಅರಸೀಕೆರೆ ನಗರ ಸೇರಿದಂತೆ ತಾಲೂಕಿನಲ್ಲಿ 28ಸರ್ಕಾರಿ ಆಸ್ಪತ್ರೆಗಳಿದ್ದು ಗಂಡಸಿ ಹಾಗೂ ಬಾಣಾವರ ಹೋಬಳಿ ಕೇಂದ್ರದ ಆಸ್ಪತ್ರೆಗಳಲ್ಲಿ ಎಂಬಿಬಿಎಸ್‌ ಪದವಿ ಪಡೆದ ವೈದ್ಯರು ಸಿಗದೇ ಆರ್ಯುವೇದ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಅರಸೀಕೆರೆ ನಗರದ ಜೆ.ಸಿ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಾ ವೈದ್ಯರಿಲ್ಲದೇ ಹಾಸನ ಜಿಲ್ಲಾ ಕೇಂದ್ರಕ್ಕೆ ರೋಗಿಗಳನ್ನು ಕಳುಹಿಸುವ ದುಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಬಹುತೇಕ ಆಸ್ಪತ್ರೆಗಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದ್ದು, ನಮ್ಮದೇ ಸರ್ಕಾರವಿದ್ದರೂ ಆಸ್ಪತ್ರೆಗೆ ತಜ್ಞವೈದ್ಯರನ್ನು ನೇಮಕ ಮಾಡಿಕೊಳ್ಳಲಾಗದಂತಹ ವ್ಯವಸ್ಥೆ ಜಾರಿಯಲ್ಲಿರುವುದು ಜನಪ್ರತಿನಿಧಿಗಳ ಕೈಕಟ್ಟಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವರ್ಧಮಾನ್‌ ಸ್ಥಾನಕ್‌ ವಾಸಿ ಜೈನ್‌ ಶ್ರಾವಕ ಸಂಘದ ಅಧ್ಯಕ್ಷ ಮಹಾವೀರ್‌ ಬೋರಾ, ಮಹಿಳಾ ಘಟಕದ ಅಧ್ಯಕ್ಷೆ ವಸಂತಾ ಬಾಯಿ, ಯುವ ಘಟನಕದ ಅಧ್ಯಕ್ಷ ಪುನೀತ್‌, ಕಣಚೂರು ಮೆಡಿಕಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬದ್ರಿನಾಥ್‌,ಮಾನವ ಹಕ್ಕುಗಳ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮಶೇಖರ್‌,ಮಾಜಿ ಅಧ್ಯಕ್ಷ ಚಗನ್‌ಲಾಲ್‌ ಬೋರಾ, ನಗರಸಭಾ ಮಾಜಿ ಅಧ್ಯಕ್ಷ ವಿದ್ಯಾಧರ್‌, ಮಾಜಿ ಉಪಾಧ್ಯಕ್ಷ ಪಾರ್ಥಸಾರಥಿ , ಸದಸ್ಯರಾದ ಗಿರೀಶ್‌, ಬಿಜೆಪಿ ನಗರಾಧ್ಯಕ್ಷ ಮನೋಜ್‌ ಕುಮಾರ್‌,ಎಸ್ಸಿ ಮೋರ್ಚಾ ಅಧ್ಯಕ್ಷ ಶಿವನ್‌ರಾಜ್‌ ಹಾಜರಿದ್ದರು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.