ಯೋಧನ ಮನೆಗೆ ಕರೆಂಟ್ ಭಾಗ್ಯ !
ಉದಯವಾಣಿ ಸುದ್ದಿಗೆ ಎಚ್ಚೆತ್ತ ಸೆಸ್ಕ್ ನಿಂದ ಮನೆಗೆ ವಿದ್ಯುತ್ ಸಂಪರ್ಕ
Team Udayavani, Feb 8, 2021, 2:29 PM IST
ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿ ಹೊಂಗಡಹಳ್ಳ ಸಮೀಪದ ಕೊಂತನ ಮನೆ ಗ್ರಾಮದಲ್ಲಿನ ಯೋಧ ಎ.ಒ.ಉಮೇಶ್ ಅವರ ಮನೆಗೆ ಸೆಸ್ಕ್ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.
ಕಳೆದ 9 ವರ್ಷದಿಂದ ಭಾರತೀಯ ಸೇನೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೂಂಛ ಸೆಕ್ಟರ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಮೇಶ್, ಎರಡೂವರೆ ವರ್ಷಗಳ ಹಿಂದೆ ಕುಟುಂಬದವರಿಗೆ ಗ್ರಾಮದಲ್ಲಿ ಮನೆ ಯೊಂದನ್ನು ನಿರ್ಮಿಸಿದ್ದರು. ಆದರೆ, ವಿದ್ಯುತ್ ಸಂಪರ್ಕ ಮಾತ್ರ ದೊರಕಿರಲಿಲ್ಲ. ಮನೆಯಲ್ಲಿ ವಯಸ್ಸಾದ ಅಪ್ಪ ಅಮ್ಮ, ಹೆಂಡತಿ ಮತ್ತು ಚಿಕ್ಕ ಮಗುವಿದ್ದು, ಕಾಡಂಚಿನ ಗ್ರಾಮದಲ್ಲಿ ನಿತ್ಯವೂ ಆತಂಕದಲ್ಲೇ ಜೀವನ ಸಾಗಿಸಬೇಕಿತ್ತು.
ಹಲವಾರು ಬಾರಿ ತಾಲೂಕು ಆಡಳಿತ, ಸ್ಥಳೀಯ ಗ್ರಾಮ ಪಂಚಾಯ್ತಿ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯೋಧನ ಮನೆಗೆ ವಿದ್ಯುತ್ ಸಂಪರ್ಕ ಮಾತ್ರ ಕಲ್ಪಿಸಿರಲಿಲ್ಲ. ಸುಮಾರು ಎರಡು ವರ್ಷಗಳ ಕಾಲ ವಯಸ್ಸಾದ ಯೋಧನ ತಂದೆ ತಾಯಿ ವಿದ್ಯುತ್ ಸಂಪರ್ಕಕ್ಕಾಗಿ ಕಚೇರಿಗಳಿಗೆ ಅಲೆದಾಡಿ ಸುಸ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಉದಯವಾಣಿಯಲ್ಲಿ ಯೋಧನ ಕುಟುಂಬ ಎದುರಿಸುತ್ತಿರುವ ಸಮಸ್ಯೆ ಕುರಿತು “ಯೋಧನ ಮನೆಗಿಲ್ಲ ಕರೆಂಟ್ ಭಾಗ್ಯ’ ಎಂಬ ಶೀರ್ಷಿಕೆಯಡಿ ಜ.2ರಂದು ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿ ಕಾರಿ ಗಿರೀಶ್ ನಂದನ್ ತಕ್ಷಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಸೆಸ್ಕ್ ಅಧಿಕಾರಿಗಳು ಯೋಧನ ಮನೆಗೆ ವಿದ್ಯುತ್ ಬರುವಂತೆ ಮಾಡಿದ್ದಾರೆ. ಇದರಿಂದ ಯೋಧನ ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ.
ಇದನ್ನೂ ಓದಿ :ಬೆಲೆಯ ಸುಳಿಯಲ್ಲಿ ಕಾಫಿ ಬೆಳೆಗಾರರು
ಯೋಧ ಉಮೇಶ್ ಹಾಗೂ ಯುವ ರೈತ ಸಂಘದ ಕಾರ್ಯದರ್ಶಿ ಕೀರ್ತಿ ಕುಮಾರ್ ಉದಯವಾಣಿಯ ಸಾಮಾಜಿಕ ಕಾಳಜಿಯನ್ನು ಶ್ಲಾಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ
ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ
ಸಿನೆಮಾಗಳು ಚಿಂತನೆಗೆ ಪ್ರೇರಣೆಯಾಗಬೇಕು: ಗಿರೀಶ್ ಕಾಸರವಳ್ಳಿ
ಸಂಸದ ಅನಂತಕುಮಾರ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ
ಆಸ್ಟ್ರೇಲಿಯವನ್ನು 7 ವಿಕೆಟ್ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್