ಕಾಡಾನೆಗಳ ಕಾಟ: ಆತಂಕ..!
Team Udayavani, Dec 2, 2021, 3:29 PM IST
ಸಕಲೇಶಪುರ: ತಾಲೂಕಿನ ಬಾಗೆ ಅರಸುನಗರ ಸಮೀಪ ಕಾಡಾನೆಯೊಂದು ಬಂದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರು ಕಾಡಾನೆಯನ್ನು ನೋಡಲು ಮುಗಿಬಿದ್ದ ಘಟನೆ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಬೆಳ ಗೋಡು ಹೋಬಳಿ ಯಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು, ಕಾಡಾನೆಗಳು ಎಲ್ಲೆಂ ದರಲ್ಲಿ ಸಂಚರಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಂತೆ ಇರುವ ಬಾಗೆ ಅರಸುನಗರ ಸಮೀಪದ ಕಾಫಿ ತೋಟವೊಂದರಲ್ಲಿ ಕಾಡಾನೆ ಕಾಣಿಸಿಕೊಂಡಿದ್ದರಿಂದ ಜನರಲ್ಲಿ ಕೆಲ ಸಮಯ ಆತಂಕ ದೃಷ್ಟಿಸಿತ್ತು. ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವಾಹನ ಸವಾರರು ವಾಹನವನ್ನು ನಿಲ್ಲಿಸಿ, ಕಾಡಾನೆಯನ್ನು ನೋಡಲು ಮುಂದಾದರು.
ಒಟ್ಟಾರೆಯಾಗಿ ಬೆಳಗೋಡು ಹೋಬಳಿಯಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು, ಸರ್ಕಾರ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಗಳು ಸಂಭವಿಸುವುದರಲ್ಲಿ ಅನುಮಾನವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್