ಎಂಜಿನಿಯರಿಂಗ್‌ ಕಾಲೇಜು ಮುಚ್ಚಿದರೆ ಧರಣಿ


Team Udayavani, Jun 27, 2020, 5:59 AM IST

nginiring-revanna

ಹಾಸನ: ತಾಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳನ್ನು ಹಾಸನದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿಗೆ ವರ್ಗಾಯಿಸುವಂತೆ ಸರ್ಕಾರ ಆದೇಶ ನೀಡುವ ಮೂಲಕ ಇಲ್ಲಿನ ಕಾಲೇಜು  ಮುಚ್ಚುವ ಹೊನ್ನಾರ ನಡೆಯುತ್ತಿದೆ. ಒಂದು ವೇಳೆ ಮೊಸಳೆಹೊಸಹಳ್ಳಿ ಕಾಲೇಜು ಮುಚ್ಚಿದರೆ ಸಿಎಂ ಮನೆ ಮುಂದೆ ಧರಣಿ ಕೂರಲಾಗುವುದು ಎಂದು ಶಾಸಕ ಎಚ್‌.ಡಿ. ರೇವಣ್ಣ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜಿ. ವೆಂಕಟೇಶಯ್ಯ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ ಈ  ಉಲ್ಲೇಖವಿದೆ ಎಂದರು. ಮೊಸಳೆ ಹೊಸಹಳ್ಳಿ ಕಾಲೇಜಿನಲ್ಲಿ 173 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಕಾಲೇಜಿನಿಂದ ಗ್ರಾಮೀಣ ಭಾಗದ ಸಾಕಷ್ಟು ಬಡ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಅನುಕೂಲವಾಗಿದೆ ಎಂದು  ಹೇಳಿದರು.

ದ್ವೇಷದ ರಾಜಕಾರಣ: ದ್ವೇಷದ ರಾಜಕಾರಣದಿಂದ ಕಾಲೇಜನ್ನು ಹಾಸನದ ಎಂಜಿನಿಯರ್‌ ಕಾಲೇಜಿಗೆ ವಿಲೀನ ಗೊಳಿಸುವ ಹುನ್ನಾರ ನಡೆಸಲಾಗಿದೆ, ಯಾವುದೇ ಕಾರಣಕ್ಕೂ ಕಾಲೇಜು ಇಲ್ಲಿಂದ ಸ್ಥಳಾಂತ ಆಗಲು ಬಿಡುವುದಿಲ್ಲ,  ರಾಜ್ಯದಲ್ಲಿ ಹದಿಮೂರು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಇವೆ ಮೊಸಳೆ ಹೊಸಹಳ್ಳಿ ಕಾಲೇಜಿಗಿಂತಲೂ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿರುವ ಕಾಲೇಜು  ಗಳನ್ನು ಬಿಟ್ಟು ನನ್ನ ಕ್ಷೇತ್ರದ ಕಾಲೇಜನ್ನೇ ಗುರಿ ಮಾಡಲಾಗಿದೆ  ಎಂದರು.

ನಮಗೂ ಕಾಲ ಬರಲಿದೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಾಶ್ವತವಾಗಿ ಇರುವುದಿಲ್ಲ. ನಮಗೂ ಕಾಲ ಬರಲಿದೆ. ಇಳಿ ವಯಸ್ಸಿನಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ದ್ವೇಷದ ರಾಜಕಾರಣ ಮಾಡಬಾರದು, ಈ ಕಾಲೇಜು  ಮುಚ್ಚುವುದ ಹಿಂದೆ ಹಾಗೂ ಸಿಎಂಗೆ ಇಲ್ಲಸಲ್ಲದನ್ನು ಕಿವಿಗೆ ತುಂಬಲಾಗುತ್ತಿದೆ. ಇದಕ್ಕೆ ಕಾಲವೇ ಉತ್ತರ ನೀಡಲಿದೆ ಎಂದು ತಿಳಿಸಿದರು.

ಬೀದಿಗಿಳಿದು ಹೋರಾಟ: ಶಿಕ್ಷಣ ಸಚಿವರು ಕಾಲೇಜು ಸ್ಥಳಾಂತರಿಸಲು ಮಾಡಲು ದ್ವೇಷದ ರಾಜಕಾರಣ ಮಾಡಬಾರದು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಅನೇಕ ಕಾಮಗಾರಿಗಳು ನಿಂತು ಹೋಗಿವೆ. ನಿರಾವರಿ ಇಲಾಖೆಯ ಯಾವುದೇ ಕೆಲಸ ನಡೆದಿಲ್ಲ. ಈ ಎಲ್ಲಾ ವಿಚಾರ ಕುರಿತು ಸಿಎಂಗೆ ಪತ್ರ ಬರೆಯಲಾಗುವು ದು ಸಕಾರಾತ್ಮಕ ಪ್ರತಿಕ್ರಿಯೆ ಸಿಗದಿದ್ದರೆ ರಸ್ತೆಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ರೈತರ ಒಕ್ಕಲೆಬ್ಬಿಸುವ ಹುನ್ನಾರ: ರಾಜ್ಯ ಸರ್ಕಾರ ಭೂ ಮಾಫಿಯಾ, ರಿಯಲ್‌ ಎಸ್ಟೇಟ್‌, ಖಾಸಗಿ ಶಿಕ್ಷಣ ಸಂಸ್ಥೆಗಳು, ಕೈಗಾರಿ ಕೋದ್ಯಮಿಗಳ, ಬಿಲ್ಡರ್‌ ಜತೆ ಶಾಮೀಲಾಗಿದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಾಮಾಣಿಕ ಅಧಿಕಾರಿಗಳಿಗೆ ತೊಂದರೆ: ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ. ಚನ್ನರಾಯಪಟ್ಟಣದ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಒಬ್ಬರು ಅಲ್ಲಿಗೆ ವರ್ಗಾವಣೆ ಮಾಡಿಸಿಕೊಳ್ಳಲು ತಾವು  1.50 ಲಕ್ಷ ರೂ. ಕೊಟ್ಟಿರುವುದಾಗಿ ಹೇಳುತ್ತಾರೆ. ಸಕಲೇಶಪುರದಲ್ಲಿಯೂ ಪ್ರಮಾಣಿಕ ಅಧಿಕಾರಿಗಳನ್ನು ಕೆಲಸ ಮಾಡಲು ಬಿಡುತ್ತಿಲ್ಲ. ಯಾವುದೇ ಕಾಮಗಾರಿಗೂ ಅನುಮೋದನೆ ಪಡೆಯಬೇಕಾದರೆ 5 ರಿಂದ 10 ಪರ್ಸೆಂಟ್‌ ಕಮಿಷನ್‌  ನೀಡಬೇಕಿದೆ. ಸಮ್ಮಿಶ್ರ ಸರ್ಕಾರದ ಆಡಳಿತವಾಧಿಯಲ್ಲಿ ನಮ್ಮನ್ನು ಪರ್ಸಂಟೇಜ್‌ ಸರ್ಕಾರ ಎಂದು ಟೀಕಿಸುತ್ತಿದ್ದರು, ಈಗ ಯಾವುವು ಪರ್ಸೆಂಟೆಸ್‌ ಸರ್ಕಾರ ಎಂಬುದರ ಬಗ್ಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ರೇವಣ್ಣ  ವ್ಯಂಗ್ಯವಾಡಿದರು.

ಹಾಸನ ಗಂಡು ಮೆಟ್ಟಿದ ನಾಡು, ನಮ್ಮ ಜಿಲ್ಲೆಯವರನ್ನು ಎದುರು ಹಾಕಿಕೊಂಡರೆ ಯಾವ ಸರ್ಕಾರವು  ಉಳಿಯುವುದಿಲ್ಲ. ಹಿಂದೆ ದೊಡ್ಡಹಳ್ಳಿ ಗೋಲಿಬಾರ್‌ ನಡೆದು ಅಂದಿನ ಸರ್ಕಾರ ಉರುಳಿದ್ದು ಎಲ್ಲರಿಗೂ ಗೊತ್ತಿದೆ.
-ಎಚ್‌.ಡಿ. ರೇವಣ್ಣ, ಶಾಸಕ

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.