ವೈದ್ಯರಿಂದ ಪರಿಸರ ಜಾಗೃತಿ ಜಾಥಾ


Team Udayavani, Jun 17, 2019, 3:56 PM IST

hasan-tdy-3..

ಸಕಲೇಶಪುರ ಪಟ್ಟಣದ ಹಳೇ ಬಸ್‌ ನಿಲ್ದಾಣದ ಸಮೀಪ ವೈದ್ಯರು ಹಾಗೂ ಪರಿಸರ ಪ್ರೇಮಿಗಳಿಂದ ಪರಿಸರ ಸಂರಕ್ಷಣೆ ಕುರಿತು ಬೃಹತ್‌ ಜನ ಜಾಗೃತಿ ಜಾಥಾ ನಡೆಸಲಾಯಿತು.

ಸಕಲೇಶಪುರ: ಮಲೆನಾಡಿನಲ್ಲಿ ವಿವಿಧ ಯೋಜನೆ ಗಳಿಂದ ನಾಶವಾಗುತ್ತಿರುವ ಅರಣ್ಯ, ಗುಡ್ಡ, ಬೆಟ್ಟ, ನದಿ, ಹಳ್ಳ, ಝರಿ, ಜಲಪಾತಗಳ ಪರಿಸರ ಸಂರಕ್ಷಣೆಗಾಗಿ ಜಿಲ್ಲೆಯ 150ಕ್ಕೂ ಹೆಚ್ಚು ವೈದ್ಯರು ಹಾಗೂ ಪರಿಸರ ಪ್ರೇಮಿಗಳಿಂದ ಭಾನುವಾರ ಸಕಲೇಶಪುರದಲ್ಲಿ ಬೃಹತ್‌ ಜನ ಜಾಗೃತಿ ಜಾಥಾ ನಡೆಸಲಾಯಿತು.

ಪರಿಸರ ಸಂರಕ್ಷಣೆ ವ್ಯಂಗ್ಯ ಚಿತ್ರ ಪ್ರದರ್ಶನ: ಪಟ್ಟಣದ ಪ್ರಮುಖ ಬೀದಿಯಲ್ಲಿ ಜಾಥಾ ಮಾಡಿದ ನಂತರ ಕ್ರಾಫ‌ರ್ಡ್‌ ಆಸ್ಪತ್ರೆ ಆವರಣದಲ್ಲಿ ಹಲವು ಸಸಿಗಳನ್ನು ನೆಡಲಾಯಿತು. ನಂತರ ರೋಟರಿ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪರಿಸರ ಸಂರಕ್ಷಣೆ ಕುರಿತು ವ್ಯಂಗ ಚಿತ್ರಕಾರ ಶಿವರಾಮ್‌ ಅವರ ಚಿತ್ರಗಳನ್ನು ಪ್ರದರ್ಶಿಸಲಾಯಿತು. ಮತ್ತೂಬ್ಬ ಚಿತ್ರಕಾರ ಶರದ್‌ ಕುಲಕರ್ಣಿಯವರ ಪರಿಸರ ಸಂರಕ್ಷಣೆ ಕುರಿತ ಚಿತ್ರಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕ ಡಾ.ಅನೂಪ್‌ ಜನಾದ‌ರ್ನ್‌ ಮಾತನಾಡಿ, ಪಶ್ಚಿಮಘಟ್ಟದ ರಕ್ಷಿತ ಅರಣ್ಯ ಗುಡ್ಡ, ಬೆಟ್ಟಗಳು ಕೆಲವು ಯೋಜನೆಗಳಿಂದ ಹಂತ ಹಂತವಾಗಿ ನಾಶವಾಗುತ್ತಿವೆ. ಇದರಿಂದ ಒಂದೆಡೆ ಮರಗಳು ನಾಶವಾದರೆ ಮತ್ತೂಂದೆಡೆ ಭೂ ಪದರದ ನೈಸರ್ಗಿಕ ವ್ಯವಸ್ಥೆ ಹಾಳಾಗಿ ಭೂ ಸವಕಳಿ ಉಂಟಾಗುತ್ತಿದೆ. ಇದರ ಪರಿಣಾಮವೇ ಹವಾಮಾನ ವೈಪರೀತ್ಯಕ್ಕೆ ಪ್ರಮುಖ ಕಾರಣವಾಗಿದೆ ಎಂದರು.

ಕೆಂಪುಹೊಳೆ, ನೇತ್ರಾವತಿ ನದಿಗಳು ಸಹ ಬತ್ತಿ ಹೋಗಿದ್ದನ್ನು ನೋಡಿಕೊಂಡು ಪ್ರಜ್ಞಾವಂತರಾದ ನಾವುಗಳು ಮೌನಕ್ಕೆ ಶರಣಾದರೆ ಮುಂದೆ ಭಾರೀ ಗಂಡಾಂತರ ಎದುರಿಸ ಬೇಕಾಗುತ್ತದೆ. ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ಜಿಲ್ಲೆಯ ವೈದ್ಯರುಗಳಿಂದ ಈ ಜಾಥಾ ಆಯೋಜಿಸಲಾಗಿದೆ ಎಂದರು.

500 ಸಸಿ ವಿತರಣೆ: ದಂತ ವೈದ್ಯ ಕಿಶೋರ್‌ ಮಾತನಾಡಿ, ಕೇವಲ ಕಾಟಾಚಾರಕ್ಕೆ ಈ ಕಾರ್ಯಕ್ರಮವನ್ನು ಮಾಡುತ್ತಿಲ್ಲ. ಇಂದು ಸುಮಾರು 500ಕ್ಕೂ ಹೆಚ್ಚು ಸಸಿಗಳನ್ನು ವಿತರಿಸಲಾಗು ತ್ತಿದೆ. ಕೇವಲ ಸಸಿಗಳನ್ನು ನೆಟ್ಟರೆ ಸಾಲದು ಸಾಲುಮರದ ತಿಮ್ಮಕ್ಕನಂತೆ ಪೋಷಿಸಿ ಬೆಳೆಸಬೇಕು. ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗಾಗಿ ಸ್ವಲ್ಪ ಹಣವನ್ನು ಮೀಸಲಿಟ್ಟು ಹಲವು ಪರಿಸರ ಸಂರಕ್ಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ.ಮೋಹನ್‌ ದಾಸ್‌ ಶೆಟ್ಟಿ, ದಂತ ವೈದ್ಯ ರವಿಕಿರಣ್‌, ಡಾ.ನವೀನ್‌ ಚಂದ್ರ ಶೆಟ್ಟಿ, ರೋಟರಿ ಸಂಸ್ಥೆ ಪದಾಧಿಕಾರಿಗಳಾದ ಆರ್‌.ಎನ್‌ ಕೃಷ್ಣಮೂರ್ತಿ, ವಿಜಯ್‌ ಕುಮಾರ್‌ ಜೈನ್‌, ಪರಿಸರವಾದಿ ಕಿಶೋರ್‌, ಡಾ.ಲೀಲಾವತಿ ಜನಾರ್ದನ್‌ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.