![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಶಿಕ್ಷಕರು, ವಿದ್ಯಾರ್ಥಿಗಳ ಶ್ರಮದಿಂದ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ
Team Udayavani, May 5, 2019, 3:00 AM IST
![shikshakaru](https://www.udayavani.com/wp-content/uploads/2019/05/shikshakaru-357x465.jpg)
ಅರಸೀಕೆರೆ: ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ 5 ನೇಸ್ಥಾನದಲ್ಲಿದ್ದ ಅರಸೀಕೆರೆ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. 18 ಅಂಶಗಳ ಕಾರ್ಯಕ್ರಮಗಳು ಮತ್ತು ಶಿಕ್ಷಕ ವೃಂದದ ವಿಶೇಷ ಕಾಳಜಿ ಹಾಗೂ ವಿದ್ಯಾರ್ಥಿಗಳ ಆಸಕ್ತಿಯೇ ಕಾರಣ ಎಂದು ಅರಸೀಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮುದಾಯ ನಿರೀಕ್ಷೆಯಂತೆ ನಾವು ಶೇ.85 ಫಲಿತಾಂಶವನ್ನು ಪಡೆಯುವಲ್ಲಿ ಸಫಲರಾಗಿದ್ದೇವೆ ಎಂದು ಹೇಳಿದರು.
ಶಿಕ್ಷಕರ ವಿಶೇಷ ಕಾಳಜಿ: ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 3,273 ವಿದ್ಯಾರ್ಥಿಗಳ ಪೈಕಿ 2,934 ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದು, ಶೇ.85 ಫಲಿತಾಂಶ ಬಂದಿದೆ. ಇದಕ್ಕೆ ಪ್ರಮುಖ ಕಾರಣ ಶಾಲಾ ಶಿಕ್ಷಕರು ಶಾಲಾ ಅವಧಿಯ ನಂತರವೂ ವಿಶೇಷ ಕಾಳಜಿ ವಹಿಸಿ ತರಗತಿಗಳನ್ನು ತೆಗೆದು ಕೊಂಡು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಮೂಲಕ ಅಂತಹ ವಿದ್ಯಾರ್ಥಿಗಳು ಉನ್ನತ ಶ್ರೇಣಿಗಳಲ್ಲಿ ತೇರ್ಗಡೆ ಹೊಂದಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ಕೂಡ ಹೆಚ್ಚಿನ ಆಸಕ್ತಿಯಿಂದ ಪಾಠ ಮನನ ಮಾಡಿಕೊಂಡು ಶಿಕ್ಷಕರ ಪರಿಶ್ರಮವನ್ನು ಸಾರ್ಥಕಗೊಳಿಸಿದ್ದಾರೆ. ಶಿಕ್ಷಕ ಸಮೂಹದ ಸಹಕಾರಕ್ಕೆ ತಾವು ಆಭಾರಿಯಾಆಗಿರುವುದಾಗಿ ಹೇಳಿದರು.
ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮ: ಶಿಕ್ಷಕರಿಗೆ ವಿಷಯವಾರು ತರಬೇತಿ, ತಾಯಂದಿರ ಸಭೆ, ಗಣಿತ, ಇಂಗ್ಲಿಷ್, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಬಗ್ಗೆ ಶಿಕ್ಷಕರ ಕಾರ್ಯಾಗಾರ, ಮತ್ತು ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ತರಬೇತಿ ಅಂತರ ಶಾಲಾ ಶಿಕ್ಷಕರಿಂದ ಮಕ್ಕಳ ಓದಿನ ಮಟ್ಟ ತಿಳಿಯುವ ಪ್ರಯತ್ನ, ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳ ದತ್ತು ನೀಡಿಕೆ, ಸೇರಿದಂತೆ 18 ಅಂಶಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.
ಗುಣಮಟ್ಟಕ್ಕೆ ಆದ್ಯತೆ: ಕೇವಲ ತೇರ್ಗಡೆಗೆ ಮಹತ್ವ ನೀಡದೇ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿತ್ತು . ತಾಲೂಕಿನ 88 ಶಾಲೆಗಳಲ್ಲಿ 21 ಶಾಲೆಗಳು ಶೇ.100 ಫಲಿತಾಂಶ ನೀಡಿವೆ. ಇವುಗಳಲ್ಲಿ ಸರ್ಕಾರಿ ಶಾಲೆಗಳು 13, ಅನುದಾನಿತ ಶಾಲೆಗಳು 2, ಅನುದಾನ ರಹಿತ ಶಾಲೆಗಳು 6, ಶೇ.100 ಫಲಿತಾಂಶ ಪಡೆದುಕೊಂಡಿದ್ದು,
ಚಿಂದೇನಹಳ್ಳಿ ಗಡಿ ಸರ್ಕಾರಿ ಶಾಲೆ ಶೇ.98, ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು 2 ಮತ್ತು ಕೊಳಗುಂದ ಸರ್ಕಾರಿ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ. ಶಿಕ್ಷಣ ಇಲಾಖೆ ಉನ್ನತಮಟ್ಟದ ಅಧಿಕಾರಿಗಳು ನೀಡಿದ ಸಲಹೆ ಸೂಚನೆಗಳು ಹಾಗೂ ಮಾರ್ಗದರ್ಶನ ಈ ಸಾಧನೆಗೆ ಕಾರಣವಾಗಿದೆ ಎಂದು ಬಿಇಒ ಮೋಹನ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.