ನಾಡಧ್ವಜ ಅಂಗೀಕಾರಕ್ಕೆ ಸಂಭ್ರಮ


Team Udayavani, Mar 10, 2018, 4:37 PM IST

has-1.jpg

ಹಾಸನ: ರಾಜ್ಯಕ್ಕೆ ಅಧಿಕೃತ ನಾಡಧ್ವಜವನ್ನು ವಿನ್ಯಾಸಗೊಳಿಸಿರುವ ಸರ್ಕಾರದ ಕ್ರಮದ ಬಗ್ಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಪ್ರಮುಖರು ಸ್ವಾಗತಿಸಿದ್ದು, ಕೇಂದ್ರ ಸರ್ಕಾರದ ಅಂಗೀಕರ ಪಡೆಯಲೂ ತ್ವರಿತ
ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.

ರಾಜ್ಯದಲ್ಲಿ ಕುಂಕುಮ ಹಾಗೂ ಹಳದಿ ಬಣ್ಣದ ಧ್ವಜವನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತಿತ್ತು. ಆದರೆ ಅದಕ್ಕೆ ಯಾವುದೇ ಅಧಿಕೃತ ಮಾನ್ಯತೆ ಇರಲಿಲ್ಲ. ರಾಜ್ಯಕ್ಕೆ ಅಧಿಕೃತ ನಾಡಧ್ವಜದ ಅಗತ್ಯದ ಬಗ್ಗೆ ಹಲವಾರು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆಗಳಲ್ಲಿ ಒತ್ತಾಯಗಳು ಕೇಳಿ ಬರುತ್ತಿದ್ದವು. ಆದರೆ ಸರ್ಕಾರ ಸ್ಪಂದಿಸಿರಲಿಲ್ಲ. ಆದರೆ ಈಗ ಹಳದಿ, ಬಿಳಿ, ಕೆಂಪು ಬಣ್ಣದ ಧ್ವಜದ ಮಧ್ಯದಲ್ಲಿ ಸರ್ಕಾರದ ಲಾಂಛನವನ್ನೂ ಅಳವಡಿ ಸಿರುವ ನಾಡಧ್ವಜವನ್ನು ಅಂತಿಮಗೊಳಿಸಿರುವ ಬಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸಾರಸ್ವತ ಲೋಕದಲ್ಲಂತೂ ಸಂಭ್ರಮ ವ್ಯಕ್ತವಾಗಿದೆ.

ಅರ್ಥಪೂರ್ಣವಾಗಿದೆ: ನಾಟಕಕಾರ, ಹಿರಿಯ ಸಾಹಿತಿ ಬೇಲೂರು ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, ಪ್ರತ್ಯೇಕ ನಾಡಧ್ವಜ
ಬೇಕೆಂಬುದು ಕನ್ನಡಿಗರ ಬಹುದಿನ ಬೇಡಿಕೆಯಾಗಿತ್ತು. ವಿಳಂಬವಾದರೂ ಸರ್ಕಾರ ಸ್ಪಂದಿಸಿದೆ. ಇದು ಸ್ವಾಗತಾರ್ಹ
ಕ್ರಮ. ತ್ರಿವರ್ಣದ ಧ್ವಜದ ವಿನ್ಯಾಸವೂ ಚೆನ್ನಾಗಿದೆ ಹಾಗೂ ಅರ್ಥಪೂರ್ಣವೂ ಆಗಿದೆ. ವಿಶೇಷವಾಗಿ ಸರ್ಕಾರದ
ಲಾಂಛನವೂ ಒಳಗೊಂಡಿರುವುದರಿಂದ ರಾಷ್ಟ್ರ ಧ್ವಜದ ಮಾದರಿ ಯಲ್ಲಿಯೇ ನಾಡಧಜವೂ ರೂಪು ಗೊಂಡಿ
ರುವುದು ಸಂತೋಷ ತಂದಿದೆ ಎಂದರು.

ನಾಡಿನ ಸಂಸ್ಕೃತಿಯ ಪ್ರತೀಕ: ವಕೀಲರೂ ಆದ ಹಿರಿಯ ಸಾಹಿತಿ, ಪ್ರಗತಿಪರ ಚಿಂತಕ ಜ.ಹೊ.ನಾರಾಯಣಸ್ವಾಮಿ
ಅವರು, ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಲಾಭದ ದೃಷ್ಟಿಯಿಂದ ಸರ್ಕಾರ ನಾಡಧ್ವಜ ರೂಪಿಸಿ ಅದರ ಅಂಗೀಕಾರಕ್ಕೆ ಮುಂದಾಗಿರಬಹುದು. ನಾಡು, ನುಡಿಯ ಸಂಬಂಧದ ಕೆಲಸಗಳು ಯಾವ ಸಂದರ್ಭದಲ್ಲಾದರೂ ಸ್ವಾಗತ. ಜಮ್ಮು – ಕಾಶ್ಮೀರ ಮಾತ್ರ ದೇಶದಲ್ಲಿ ಪ್ರತ್ಯೇಕ ಧ್ವಜ ಹೊಂದಿತ್ತು. ಈಗ ಕರ್ನಾಟಕ ಅಧಿಕೃತವಾಗಿ ನಾಡಧ್ವಜ ಹೊಂದುವ ದೇಶದ 2ನೇ ರಾಜ್ಯವಾಗಲಿದೆ. ನಾಡಿನ ಸಂಸ್ಕೃತಿಯ ಪ್ರತೀಕವಾಗಿ ಪ್ರತ್ಯೇಕ ಧ್ವಜ ಹೊಂದುವ ಅಗತ್ಯವಿತ್ತು. ಆ ನಿಟ್ಟಿನಲ್ಲಿ ಈಗ ಚಾಲನೆ ಸಿಕ್ಕಿದೆ ಎಂದರು.

ಅಭಿಮಾನದ ಸಂಕೇತ: ಲೇಖಕಿ ಎನ್‌. ಶೈಲಜಾ ಹಾಸನ ಅವರು, ಪ್ರತಿಯಿಸಿ, ಪತ್ಯೇಕ ಧ್ವಜ ಹೊಂದುವುದು ರಾಷ್ಟ್ರದ ಅಖಂಡತೆಗೆ, ಪ್ರತ್ಯೇಕತೆ ಧಕ್ಕೆ ಆಗಬಹುದೆಂಬ ಆತಂಕವಿದೆ. ಆದರೆ ನಾಡು, ನುಡಿ, ಸಂಸ್ಕೃತಿಯ ಅಭಿಮಾನ ಮೂಡಿಸಲು ಪೂರಕವಾಗಿ ನಾಡಧ್ವಜ ರೂಪಿಸಿರುವುದು ಸ್ವಾಗತಾರ್ಹ. ಕನ್ನಡಿಗರ ಒಗ್ಗಟ್ಟು, ಕರ್ನಾಟಕದ ಅಸ್ಮಿತೆಗೆ
ಅಧಿಕೃತ ನಾಡಧ್ವಜ ಬಳಕೆ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹ. ಇದು ಪ್ರತಿಯೊಬ್ಬ ಕನ್ನಡಿಗರ ಹೆಮ್ಮೆ ಎಂದು ಅಭಿಪ್ರಾಯಪಟ್ಟರು. 

ಒಗ್ಗಟ್ಟಿನ ಸಂಕೇತವಾಗಿದೆ : ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ ಬೇಕೆಂಬುದು ಕನ್ನಡಿಗರ ಬಹಳ ದಿನಗಳ ಹೋರಾಟವಾಗಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಹಳದಿ ಮತ್ತು ಕೆಂಪು ಬಣ್ಣದ ಧ್ವಜವನ್ನೇ ಅಧಿಕೃತ ನಾಡಧ್ವಜ ಎಂದು ಈಗಾಗಲೇ ಬಳಸುತ್ತಿತ್ತು. ಈಗ ಬಿಳಿಯ ಬಣ್ಣವೂ ಸೇರಿ ಸರ್ಕಾರದ ಲಾಂಛನವೂ ಒಳ ಗೊಂಡಿರುವುದರಿಂದ ಅಧಿಕೃತ ಧ್ವಜ, ರಾಷ್ಟ್ರಧ್ವಜದಷ್ಟೆ ಗೌರವದ ನಾಡಧ್ವಜವಾಗುತ್ತಿರುವುದು ಕನ್ನಡಿಗರಿಗೆ ಸಂತೋಷ ತಂದಿದೆ. ವಿನ್ಯಾಸಗೊಳಿಸಿ, ಕೇಂದ್ರ ಸರ್ಕಾರಕ್ಕೆ ಅಂಗೀಕಾರಕ್ಕಾಗಿ ಕಳುಹಿಸಿ ಸರ್ಕಾರ ಕೈ ತೊಳೆದುಕೊಳ್ಳಬಾರದು. 

ಅಂಗೀಕಾರವಾಗುವರೆಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಸನ ಜಿಲ್ಲಾಧ್ಯಕ್ಷ ಸಿ.ಡಿ.ಮನುಕುಮಾರ್‌ ಒತ್ತಾಯಿಸಿದರು. ಶಾಸ್ತ್ರೀಯ ಸ್ಥಾನಕ್ಕೆ ಪೂರಕ ಹಲವು ವರ್ಷಗಳ ಹೋರಾಟದ ನಂತರ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಈಗ ರಾಜ್ಯ ಸರ್ಕಾರ ನಾಡಧ್ವಜವನ್ನೂ ವಿನ್ಯಾಸಗೊಳಿಸಿರುವುದು ಸಂತಸದ ವಿಚಾರ. ಕೇಂದ್ರ ಸರ್ಕಾರ ಅಂಗೀಕರಿಸಿದರೆ ಕನ್ನಡಕ್ಕೆ ಸಿಕ್ಕಿರುವ ಶಾಸ್ತ್ರೀಯ ಸ್ಥಾನಮಾನಕ್ಕೆ ನಾಡಧ್ವಜವೂ ಪೂರಕವಾಗಿ ರಾಷ್ಟ್ರದಲ್ಲಿ ನಾಡಿನ ಅಸ್ಮಿತೆಗೆ ಗರಿ ಮೂಡಿದಂತಾಗುತ್ತದೆ ಎಂಬುದು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಉದಯರವಿ ಅಭಿಪ್ರಾಯ 

ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.