ರೈತನ ಮನೆಗೆ ಅಧಿಕಾರಿಗಳನ್ನು ಕಳುಹಿಸಿ ದಬ್ಬಾಳಿಕೆ: ತಹಶೀಲ್ದಾರ್ ಮೇಲೆ ಆರೋಪ ಮಾಡಿದ ರೈತ


Team Udayavani, Dec 7, 2021, 3:57 PM IST

ರೈತನ ಮನೆಗೆ ಅಧಿಕಾರಿಗಳನ್ನು ಕಳುಹಿಸಿ ದಬ್ಬಾಳಿಕೆ: ತಹಶೀಲ್ದಾರ್ ಮೇಲೆ ಆರೋಪ ಮಾಡಿದ ರೈತ

ಆಲೂರು ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ಹೊತ್ನಹಳ್ಳಿಪುರ ಗ್ರಾಮದ ದೇವರಾಜೇಗೌಡ ಮನೆ ಹತ್ತಿರ ಅಧಿಕಾರಿಗಳ ದಂಡು

ಆಲೂರು : ತಹಶೀಲ್ದಾರ್ ಶಿರೀನ್ ತಾಜ್ ಅಧಿಕಾರಿಗಳ ಮೂಲಕ ರೈತನ ಮೇಲೆ ವಿನಾಕಾರಣ ದಬ್ಬಾಳಿಕೆ ನಡೆಸಿ ಕಿರುಕುಳ ನೀಡುತ್ತಿರುವ ಘಟನೆ ಆಲೂರು ತಾಲ್ಲೂಕಿನಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊತನಹಳ್ಳಿಪುರ ಗ್ರಾಮದ ಜವರೇಗೌಡರ ಮಗ ದೇವರಾಜೇಗೌಡ  ಎಂಬುವವರು ಗ್ರಾಮದ ಸ.ನಂ 54 ರಲ್ಲಿ 9 ಎಕರೆ 5 ಗುಂಟೆ ಪೈಕಿ 50-15 ಅಡಿ ಜಾಗದಲ್ಲಿ 1982 ರಲ್ಲಿ ಸರ್ಕಾರದಿಂದ ನೀಡಿದ ಜನತಾ ಮನೆ ಮಾಡಿ ಅದಕ್ಕೆ ಬೈರಾಪುರ ಗ್ರಾಮ ಪಂಚಾಯಿತಿಯಲ್ಲಿ ಅದಕ್ಕೆ ತಗಲುವ ಕಂದಾಯ ವಗೈರೆಗಳನ್ನು ಕಟ್ಟಿಕೊಂಡು ಬಂದಿರುತ್ತಾರೆ ಅದರೆ ಇತ್ತೀಚಿಗೆ ವ್ಯಕ್ತಿಯೊಬ್ಬ ಮೌಖಿಕವಾಗಿ ದೂರು ನೀಡಿದ್ದಾರೆ ಎನ್ನುವ ಕಾರಣ ನೀಡಿ ತಹಶೀಲ್ದಾರ್ ಶಿರೀನ್ ತಾಜ್ ಅವರು ಕಂದಾಯ ಇಲಾಖೆ  ಅಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳನ್ನು ರೈತ ದೇವರಾಜೇಗೌಡ ಮನೆ ಹತ್ತಿರ ಕಳುಹಿಸಿ ಕಿರುಕುಳ  ನೀಡುತ್ತಿದ್ದಾರೆ ಎಂದು ರೈತ ದೇವರಾಜೇಗೌಡ ಎಂದು ತನ್ನ ಅಳಲು ತೋಡಿಕೊಂಡರು.

ರೈತ ದೇವರಾಜೇಗೌಡ ಮಾತನಾಡಿ ಗ್ರಾಮದ ಸ.ನಂ 54 ರ 9 ಎಕರೆ 5 ಗುಂಟೆ ಜಮೀನಿನಲ್ಲಿ ಗ್ರಾಮಸ್ಥರೆಲ್ಲರೂ ಅವರಿಗೆ ಬೇಕಾದಷ್ಟು ಹಂಚಿಕೊಂಡು ಜೀವನ ನಡೆಸುತ್ತಿದ್ದಾರೆ ಅವರಂತೆ ನನಗೂ ಕೂಡ 1982 ರಲ್ಲಿ ಗ್ರಾಮಸ್ಥರು ಜಮೀನು ಹಂಚಿಕೊಟ್ಟಿದ್ದರು ಅದರಲ್ಲಿ ಸರ್ಕಾರದಿಂದ ನೀಡಿರುವ ಜನತಾಮನೆ ಮಾಡಿಕೊಂಡು ಜೀವನ ನಡೆಸುತ್ತಿದ್ದೆವು ಅದರೆ ಇತ್ತೀಚಿನ ಮಳೆಯಿಂದ ಮನೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ಮನೆಯನ್ನು ದುರಸ್ತಿ ಮಾಡಲಾಗುತ್ತಿದೆ ತಾಲ್ಲೂಕು ತಹಶೀಲ್ದಾರ್ ಅವರು ಅಧಿಕಾರಿಗಳನ್ನು ರಾತ್ರೋರಾತ್ರಿ ಮನೆ ಹತ್ತಿರ ಕಳುಹಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ತಾಲ್ಲೂಕಿನಲ್ಲಿ ಕೆರೆಕಟ್ಟೆಗಳು ಒತ್ತುವರಿಯಾಗಿವೆ,ಕಾಡಾನೆ ಸಮಸ್ಯೆಯಿದೆ,ಅಕಾಲಿಕ ಮಳೆಯಿಂದ ಮನೆಯನ್ನು ಕಳೆದುಕೊಂಡಿದ್ದಾರೆ,ಕಛೇರಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ತಹಶೀಲ್ದಾರ್ ಶಿರೀನ್ ತಾಜ್ ಅವರು  ಅವುಗಳನ್ನು ಸರಿಪಡಿಸುವುದನ್ನು ಬಿಟ್ಟು ಗ್ರಾಮಗಳಲ್ಲಿ ಸಹಬಾಳ್ವೆ ನೆಮ್ಮದಿಯಿಂದ ಜೀವನ ನಡೆಸುತ್ತಿರುವ ರೈತರನ್ನು ಒಬ್ಬರ ಮೇಲೆ ಇನ್ನೊಬ್ಬರನ್ನು ಎತ್ತಿಕಟ್ಟುತ್ತಿದ್ದಾರೆ ಹೇಮಾವತಿ ಪುನರ್ವಸತಿಯಿಂದ ಜಮೀನು ಕಳೆದು ಕೊಂಡ ರೈತರಿಗೆ ಬ್ಯಾಬ ಪಾರೆಷ್ಟ್ ನಲ್ಲಿ ಜಮೀನು ನೀಡಿ ನಾಲ್ಕು ದಶಕಗಳೇ ಕಳೆದಿವೆ ಅವರಿಗೆ ಸರಿಯಾದ ರಸ್ತೆ ಇಲ್ಲದೇ ಅವರು ನರಕಯಾತನೆ ಅನುಭವಿಸುತ್ತಿದ್ದಾರೆ ಅವರಿಗೆ ಮೊದಲು ರಸ್ತೆ ಶಾಶ್ವತ ಪರಿಹಾರ  ಕಂಡುಹಿಡಿಯಲಿ ಅದು ಬಿಟ್ಟು ರೈತರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆ ಇವರ ವರ್ತನೆ ಇದೇರೀತಿ ಮುಂದುವರಿದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಸಂಸದರಿಗೆ ದೂರು ನೀಡಬೇಕಾಗುತ್ತೆ ಗ್ರಾಮದ ಮುಖಂಡ ಮಂಜೇಗೌಡ ಎಚ್ಚರಿಸಿದರು.

ಈ ಬಗ್ಗೆ ತಹಶಿಲ್ದಾರರ್ ಶಿರೀನ್ ತಾಜ್ ಮಾತನಾಡಿ ಯಾರೋ ಒಬ್ಬರು ಲಿಖಿತ ರೂಪದಲ್ಲಿ ದೂರು ನೀಡಿಲ್ಲ ಮೌಖಿಕವಾಗಿ ದೂರು ನೀಡಿದ್ದಾರೆ ಅದರಂತೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಪಡೆಯಲಾಗಿದೆ ಎಂದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.