ಮತ್ತೆ ವಾಯುಭಾರ ಕುಸಿತ: ಬೆಳೆಗಾರರಲ್ಲಿ ಆತಂಕ


Team Udayavani, Dec 18, 2020, 8:16 PM IST

ಮತ್ತೆ ವಾಯುಭಾರ ಕುಸಿತ: ಬೆಳೆಗಾರರಲ್ಲಿ ಆತಂಕ

ಸಕಲೇಶಪುರ: ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರಕುಸಿತದಿಂದ ತಾಲೂಕಿನಲ್ಲಿ ಮೋಡ ಮುಸುಕಿದವಾತಾವರಣ ಇದ್ದು, ಯಾವುದೇ ಕ್ಷಣದಲ್ಲಿ ಮಳೆಬೀಳುವ ಸಾಧ್ಯತೆ ಇದೆ. ಇದರಿಂದ ತಾಲೂಕಿನ ಭತ್ತ,ಕಾಫಿ, ಮುಸುಕಿನ ಜೋಳದ ಬೆಳೆಗಾರರಲ್ಲಿ ತೀವ್ರಆತಂಕ ತರಿಸಿದೆ.

ಕಳೆದ ತಿಂಗಳು ಉಂಟಾಗಿದ್ದ ನಿವಾರ್‌ ಚಂಡಮಾರುತದಿಂದ ತಾಲೂಕು ಸೇರಿದಂತೆಜಿಲ್ಲೆಯಲ್ಲಿ ಮಳೆ ಸುರಿದು ಅಪಾರ ಪ್ರಮಾಣದಲ್ಲಿಕೊಯ್ಲಿಗೆ ಬಂದಿದ್ದ ಬೆಳೆ ನಷ್ಟ ಉಂಟು ಮಾಡಿತ್ತು. ಇದಾದ ನಂತರ ಬಂದ ಬುರೆವಿ ಚಂಡಮಾರುತ ಕೂಡ ಒಂದು ವಾರ ತುಂತುರು ಸಹಿತ ಗುಡುಗು, ಸಿಡಿಲಿನೊಂದಿಗೆ ಮಳೆ ತಂದಿತ್ತು. ಇದೀಗ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು,ತಾಲೂಕಿನಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ, ಮೋಡಮುಸುಕಿದ ವಾತಾವರಣ, ತಂಪು ಗಾಳಿ ಕಾಫಿ, ಮೆಣಸು ಬೆಳೆಗಾರರಿಗೆ ಆತಂಕ ತರಿಸಿದೆ.

ಒಣಗಿಸಲು ಬಿಸಿಲೇ ಇಲ್ಲ: ತಾಲೂಕಿನಲ್ಲಿ ಬಹುತೇಕವಾಗಿ ಅರೇಬಿಕಾ ಕಾಫಿ ಕೊಯ್ಲುಮುಗಿದಿದೆ. ರೋಬಾಸ್ಟ ಕಾಫಿ ಕೊಯ್ಲು ಪ್ರಾರಂಭವಾಗಿದೆ. ಕೊಯ್ಲು ಮಾಡಿದ ಕಾಫಿಯನ್ನು ಕಣದಲ್ಲಿ ಒಣಗಿಸಲು ಹಾಕಲಾಗಿದೆ. ಈವರೆಗೂ ಬಿಸಿಲು ಇತ್ತು, ಇದೀಗ ಮೋಡ ಮುಸುಕಿದ ವಾತಾವರಣ ಇರುವುದರಿಂದ ಅರೆಬರೆ ಒಣಗಿದ ಕಾಫಿ ಬೀಜ ಬೂಸ್ಟ್‌ ಬಂದು, ತನ್ನ ಮೂಲ ಸ್ವರೂಪಕಳೆದುಕೊಳ್ಳುವ ಆತಂಕ ಬೆಳೆಗಾರರಿಗೆಕಾಡುತ್ತಿದೆ.ಕಾರ್ಮಿಕರು ಸಿಗುತ್ತಿಲ್ಲ: ಈಗಾಗಲೇ ತಾಲೂಕಿನಲ್ಲಿ ಗ್ರಾಪಂ ಚುನಾವಣಾ ಜ್ವರ ವ್ಯಾಪಿಸಿದೆ. ಇದರಿಂದಾಗಿಕೂಲಿ ಕಾರ್ಮಿಕರು ಸರಿಯಾಗಿ ಕೆಲಸ ಕಾರ್ಯಗಳಿಗೆ ಬರುತ್ತಿಲ್ಲ. ಕಣದಲ್ಲಿ ಹಾಕಿರುವ ಕಾಫಿ ಬೀಜ ಮಳೆಯಿಂದ ರಕ್ಷಿಸಲು ಕಾರ್ಮಿಕರು ದೊರಕುತ್ತಿಲ್ಲ, ಇದರಿಂದ ಬೆಳೆಗಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗುಣಮಟ್ಟ ಕಳೆದುಕೊಳ್ಳುವ ಭೀತಿ: ಒಣಗಿಸಲು ಹಾಕಿರುವ ಕಾಫಿಯನ್ನು ರಕ್ಷಣೆ ಮಾಡದಿದ್ದರೆ, ಮಳೆನೀರು ಬಿದ್ದು ಕಾಫಿಯಲ್ಲಿ ನೀರಿನ ಅಂಶ ಸೇರಿಒಣಗಿಸಲು ಮತ್ತಷ್ಟು ಪರದಾಡಬೇಕಾಗುತ್ತದೆ. ಜೊತೆಗೆಮಳೆ ನೀರು ಸೇರುವುದರಿಂದ ಕಾಫಿಯ ಗುಣಮಟ್ಟವುಹಾಳಾಗಿ ಉತ್ತಮ ದರ ದೊರಕುವುದಿಲ್ಲ.

ಭತ್ತ ಮಣ್ಣು ಪಾಲಾಗುವ ಸಾಧ್ಯತೆ: ಇದೇ ರೀತಿ ಹಲವೆಡೆ ಭತ್ತದ ಗದ್ದೆ ಕೊಯ್ಲು ನಡೆಯುತ್ತಿದೆ. ಕೆಲವರು ಕೊಯ್ಲು ಮಾಡಿದ ಭತ್ತ ಕಣದಲ್ಲಿಒಣಗಿಸಲು ಹಾಕಿದ್ದರೆ, ಇನ್ನು ಕೆಲವರು ಕಾರ್ಮಿಕರ ಸಮಸ್ಯೆಯಿಂದ ಕೊಯ್ಲು ಮಾಡದೇ ಗದ್ದೆಯಲ್ಲೇಬಿಟ್ಟಿದ್ದಾರೆ. ಇದೀಗ ವಾಯುಭಾರ ಕುಸಿತ ಉಂಟಾಗಿದ್ದು, ಒಂದು ವೇಳೆ ಮಳೆ ಸುರಿದರೆ,ಕೊಯ್ಲಿಗೆ ತುಂಬಾ ತೊಂದರೆ ಆಗುತ್ತದೆ, ಮಾಗಿರುವಭತ್ತವೂ ಮಣ್ಣು ಪಾಲಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಎರಡು ಮೂರು ದಿನ ಮೋಡ ಮುಸುಕಿದವಾತಾವರಣ, ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ.

ಕೃಷಿಯಿಂದ ವಿಮುಖರಾಗುವ ಸಾಧ್ಯತೆ:

ಮಳೆಯಿಂದ ಗಿಡದಲ್ಲಿ ಕಟ್ಟಿರುವ ಕಾಫಿ ಉದುರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಅತಿವೃಷ್ಟಿ, ಕಾಡಾನೆಸಮಸ್ಯೆಯಿಂದ ತತ್ತರಿಸಿರುವ ಬೆಳೆಗಾರರು ಇದೀಗಪ್ರತಿಕೂಲದ ವಾತಾವರಣದಿಂದ ಮತ್ತಷ್ಟು ಸಮಸ್ಯೆಗೆ ಸಿಲುಕುವಂತಾಗಿದೆ. ಒಟ್ಟಾರೆಯಾಗಿ ಮಲೆನಾಡಿನಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಫಿ ಬೆಳೆಗಾರರಿಗೆ ಕಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೃಷಿ ಕಾಯಕದತ್ತ ಯುವ ಪೀಳಿಗೆ ವಿಮುಖರಾಗುವ ಸಾಧ್ಯತೆಯಿದೆ.

ವಾಯುಭಾರಕುಸಿತದಿಂದ ವಾತಾವರಣದಲ್ಲಿ ಮತ್ತೆ ಬದಲಾವಣೆ ಆಗಿದೆ.ಕಾಫಿ ಬೆಳೆಗಾರರು ಮಾತ್ರವಲ್ಲದೆ, ಭತ್ತಬೆಳೆದ ರೈತರೂ ತೊಂದರೆಗೆ ಸಿಲುಕುವಂತಾಗಿದೆ. ತಾಲೂಕಿನ ಮಟ್ಟಿಗೆ ಈವೇಳೆ ಮಳೆ ಬೀಳುವುದು ವಿರಳವಾಗಿತ್ತು.ಇಂತಹ ಸಮಯದಲ್ಲಿ ಮಳೆ ಬೀಳುತ್ತಿರುವುದರಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದುಕಷ್ಟಕರವಾಗಿದೆ. ಪ್ರದೀಪ್‌, ಕಾಫಿ ಬೆಳೆಗಾರ, ಕುಡುಗರ ಹಳ್ಳಿ

ಪದೇಪದೆ ವಾತಾವರಣದಲ್ಲಿ ಬದಲಾವಣೆ ಆಗುತ್ತಿರುವುದರಿಂದ ಬೆಳೆಗಾರರಿಗೆ ಬೆಳೆಯನ್ನು ಉಳಿಸಿಕೊಳ್ಳುವುದು ಸವಾಲಾಗಿದೆ. ಮುಂದಿನ ದಿನಗಳಲ್ಲಿ ವಾತಾವರಣದಲ್ಲಿನ ಬದಲಾವಣೆಗೆ ತಕ್ಕಂತೆ ಕೆಲವೊಂದು ಮಾರ್ಪಾಡುಗಳನ್ನು ಬೆಳೆಗಾರರು ಅಳವಡಿಸಿಕೊಳ್ಳಬೇಕಾಗುವ ಅಗತ್ಯವಿದೆ. ತೋ.ಚಾ.ಅನಂತಸುಬ್ಬರಾಯ, ಅಧ್ಯಕ್ಷರು, ಜಿಲ್ಲಾ ಬೆಳೆಗಾರರ ಸಂಘ

 

 

-ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.