ಮತ್ತೆ ವಾಯುಭಾರ ಕುಸಿತ: ಬೆಳೆಗಾರರಲ್ಲಿ ಆತಂಕ


Team Udayavani, Dec 18, 2020, 8:16 PM IST

ಮತ್ತೆ ವಾಯುಭಾರ ಕುಸಿತ: ಬೆಳೆಗಾರರಲ್ಲಿ ಆತಂಕ

ಸಕಲೇಶಪುರ: ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರಕುಸಿತದಿಂದ ತಾಲೂಕಿನಲ್ಲಿ ಮೋಡ ಮುಸುಕಿದವಾತಾವರಣ ಇದ್ದು, ಯಾವುದೇ ಕ್ಷಣದಲ್ಲಿ ಮಳೆಬೀಳುವ ಸಾಧ್ಯತೆ ಇದೆ. ಇದರಿಂದ ತಾಲೂಕಿನ ಭತ್ತ,ಕಾಫಿ, ಮುಸುಕಿನ ಜೋಳದ ಬೆಳೆಗಾರರಲ್ಲಿ ತೀವ್ರಆತಂಕ ತರಿಸಿದೆ.

ಕಳೆದ ತಿಂಗಳು ಉಂಟಾಗಿದ್ದ ನಿವಾರ್‌ ಚಂಡಮಾರುತದಿಂದ ತಾಲೂಕು ಸೇರಿದಂತೆಜಿಲ್ಲೆಯಲ್ಲಿ ಮಳೆ ಸುರಿದು ಅಪಾರ ಪ್ರಮಾಣದಲ್ಲಿಕೊಯ್ಲಿಗೆ ಬಂದಿದ್ದ ಬೆಳೆ ನಷ್ಟ ಉಂಟು ಮಾಡಿತ್ತು. ಇದಾದ ನಂತರ ಬಂದ ಬುರೆವಿ ಚಂಡಮಾರುತ ಕೂಡ ಒಂದು ವಾರ ತುಂತುರು ಸಹಿತ ಗುಡುಗು, ಸಿಡಿಲಿನೊಂದಿಗೆ ಮಳೆ ತಂದಿತ್ತು. ಇದೀಗ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು,ತಾಲೂಕಿನಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ, ಮೋಡಮುಸುಕಿದ ವಾತಾವರಣ, ತಂಪು ಗಾಳಿ ಕಾಫಿ, ಮೆಣಸು ಬೆಳೆಗಾರರಿಗೆ ಆತಂಕ ತರಿಸಿದೆ.

ಒಣಗಿಸಲು ಬಿಸಿಲೇ ಇಲ್ಲ: ತಾಲೂಕಿನಲ್ಲಿ ಬಹುತೇಕವಾಗಿ ಅರೇಬಿಕಾ ಕಾಫಿ ಕೊಯ್ಲುಮುಗಿದಿದೆ. ರೋಬಾಸ್ಟ ಕಾಫಿ ಕೊಯ್ಲು ಪ್ರಾರಂಭವಾಗಿದೆ. ಕೊಯ್ಲು ಮಾಡಿದ ಕಾಫಿಯನ್ನು ಕಣದಲ್ಲಿ ಒಣಗಿಸಲು ಹಾಕಲಾಗಿದೆ. ಈವರೆಗೂ ಬಿಸಿಲು ಇತ್ತು, ಇದೀಗ ಮೋಡ ಮುಸುಕಿದ ವಾತಾವರಣ ಇರುವುದರಿಂದ ಅರೆಬರೆ ಒಣಗಿದ ಕಾಫಿ ಬೀಜ ಬೂಸ್ಟ್‌ ಬಂದು, ತನ್ನ ಮೂಲ ಸ್ವರೂಪಕಳೆದುಕೊಳ್ಳುವ ಆತಂಕ ಬೆಳೆಗಾರರಿಗೆಕಾಡುತ್ತಿದೆ.ಕಾರ್ಮಿಕರು ಸಿಗುತ್ತಿಲ್ಲ: ಈಗಾಗಲೇ ತಾಲೂಕಿನಲ್ಲಿ ಗ್ರಾಪಂ ಚುನಾವಣಾ ಜ್ವರ ವ್ಯಾಪಿಸಿದೆ. ಇದರಿಂದಾಗಿಕೂಲಿ ಕಾರ್ಮಿಕರು ಸರಿಯಾಗಿ ಕೆಲಸ ಕಾರ್ಯಗಳಿಗೆ ಬರುತ್ತಿಲ್ಲ. ಕಣದಲ್ಲಿ ಹಾಕಿರುವ ಕಾಫಿ ಬೀಜ ಮಳೆಯಿಂದ ರಕ್ಷಿಸಲು ಕಾರ್ಮಿಕರು ದೊರಕುತ್ತಿಲ್ಲ, ಇದರಿಂದ ಬೆಳೆಗಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗುಣಮಟ್ಟ ಕಳೆದುಕೊಳ್ಳುವ ಭೀತಿ: ಒಣಗಿಸಲು ಹಾಕಿರುವ ಕಾಫಿಯನ್ನು ರಕ್ಷಣೆ ಮಾಡದಿದ್ದರೆ, ಮಳೆನೀರು ಬಿದ್ದು ಕಾಫಿಯಲ್ಲಿ ನೀರಿನ ಅಂಶ ಸೇರಿಒಣಗಿಸಲು ಮತ್ತಷ್ಟು ಪರದಾಡಬೇಕಾಗುತ್ತದೆ. ಜೊತೆಗೆಮಳೆ ನೀರು ಸೇರುವುದರಿಂದ ಕಾಫಿಯ ಗುಣಮಟ್ಟವುಹಾಳಾಗಿ ಉತ್ತಮ ದರ ದೊರಕುವುದಿಲ್ಲ.

ಭತ್ತ ಮಣ್ಣು ಪಾಲಾಗುವ ಸಾಧ್ಯತೆ: ಇದೇ ರೀತಿ ಹಲವೆಡೆ ಭತ್ತದ ಗದ್ದೆ ಕೊಯ್ಲು ನಡೆಯುತ್ತಿದೆ. ಕೆಲವರು ಕೊಯ್ಲು ಮಾಡಿದ ಭತ್ತ ಕಣದಲ್ಲಿಒಣಗಿಸಲು ಹಾಕಿದ್ದರೆ, ಇನ್ನು ಕೆಲವರು ಕಾರ್ಮಿಕರ ಸಮಸ್ಯೆಯಿಂದ ಕೊಯ್ಲು ಮಾಡದೇ ಗದ್ದೆಯಲ್ಲೇಬಿಟ್ಟಿದ್ದಾರೆ. ಇದೀಗ ವಾಯುಭಾರ ಕುಸಿತ ಉಂಟಾಗಿದ್ದು, ಒಂದು ವೇಳೆ ಮಳೆ ಸುರಿದರೆ,ಕೊಯ್ಲಿಗೆ ತುಂಬಾ ತೊಂದರೆ ಆಗುತ್ತದೆ, ಮಾಗಿರುವಭತ್ತವೂ ಮಣ್ಣು ಪಾಲಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಎರಡು ಮೂರು ದಿನ ಮೋಡ ಮುಸುಕಿದವಾತಾವರಣ, ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ.

ಕೃಷಿಯಿಂದ ವಿಮುಖರಾಗುವ ಸಾಧ್ಯತೆ:

ಮಳೆಯಿಂದ ಗಿಡದಲ್ಲಿ ಕಟ್ಟಿರುವ ಕಾಫಿ ಉದುರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಅತಿವೃಷ್ಟಿ, ಕಾಡಾನೆಸಮಸ್ಯೆಯಿಂದ ತತ್ತರಿಸಿರುವ ಬೆಳೆಗಾರರು ಇದೀಗಪ್ರತಿಕೂಲದ ವಾತಾವರಣದಿಂದ ಮತ್ತಷ್ಟು ಸಮಸ್ಯೆಗೆ ಸಿಲುಕುವಂತಾಗಿದೆ. ಒಟ್ಟಾರೆಯಾಗಿ ಮಲೆನಾಡಿನಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಫಿ ಬೆಳೆಗಾರರಿಗೆ ಕಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೃಷಿ ಕಾಯಕದತ್ತ ಯುವ ಪೀಳಿಗೆ ವಿಮುಖರಾಗುವ ಸಾಧ್ಯತೆಯಿದೆ.

ವಾಯುಭಾರಕುಸಿತದಿಂದ ವಾತಾವರಣದಲ್ಲಿ ಮತ್ತೆ ಬದಲಾವಣೆ ಆಗಿದೆ.ಕಾಫಿ ಬೆಳೆಗಾರರು ಮಾತ್ರವಲ್ಲದೆ, ಭತ್ತಬೆಳೆದ ರೈತರೂ ತೊಂದರೆಗೆ ಸಿಲುಕುವಂತಾಗಿದೆ. ತಾಲೂಕಿನ ಮಟ್ಟಿಗೆ ಈವೇಳೆ ಮಳೆ ಬೀಳುವುದು ವಿರಳವಾಗಿತ್ತು.ಇಂತಹ ಸಮಯದಲ್ಲಿ ಮಳೆ ಬೀಳುತ್ತಿರುವುದರಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದುಕಷ್ಟಕರವಾಗಿದೆ. ಪ್ರದೀಪ್‌, ಕಾಫಿ ಬೆಳೆಗಾರ, ಕುಡುಗರ ಹಳ್ಳಿ

ಪದೇಪದೆ ವಾತಾವರಣದಲ್ಲಿ ಬದಲಾವಣೆ ಆಗುತ್ತಿರುವುದರಿಂದ ಬೆಳೆಗಾರರಿಗೆ ಬೆಳೆಯನ್ನು ಉಳಿಸಿಕೊಳ್ಳುವುದು ಸವಾಲಾಗಿದೆ. ಮುಂದಿನ ದಿನಗಳಲ್ಲಿ ವಾತಾವರಣದಲ್ಲಿನ ಬದಲಾವಣೆಗೆ ತಕ್ಕಂತೆ ಕೆಲವೊಂದು ಮಾರ್ಪಾಡುಗಳನ್ನು ಬೆಳೆಗಾರರು ಅಳವಡಿಸಿಕೊಳ್ಳಬೇಕಾಗುವ ಅಗತ್ಯವಿದೆ. ತೋ.ಚಾ.ಅನಂತಸುಬ್ಬರಾಯ, ಅಧ್ಯಕ್ಷರು, ಜಿಲ್ಲಾ ಬೆಳೆಗಾರರ ಸಂಘ

 

 

-ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ಎದುರಿಗಿದೆ ಸಮಸ್ಯೆಗಳ ಸರಮಾಲೆ!

ಶಾಸಕರ ಎದುರಿಗಿದೆ ಸಮಸ್ಯೆಗಳ ಸರಮಾಲೆ!

ಅರಸೀಕೆರೆ: ದಶಕ ಕಳೆದರೂ ಯಾತ್ರಿ ನಿವಾಸಕ್ಕಿಲ್ಲಉದ್ಘಾಟನೆ ಭಾಗ್ಯ!

ಅರಸೀಕೆರೆ: ದಶಕ ಕಳೆದರೂ ಯಾತ್ರಿ ನಿವಾಸಕ್ಕಿಲ್ಲಉದ್ಘಾಟನೆ ಭಾಗ್ಯ!

ಶಾಸಕ ಸ್ವರೂಪ್‌ ಎದುರು ಸಾಲು-ಸಾಲು ಸವಾಲು

ಶಾಸಕ ಸ್ವರೂಪ್‌ ಎದುರು ಸಾಲು-ಸಾಲು ಸವಾಲು

ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಪುಸ್ತಕಗಳೇ ಪ್ರೇರಣೆ

ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಪುಸ್ತಕಗಳೇ ಪ್ರೇರಣೆ

ಚನ್ನರಾಯಪಟ್ಟಣಕ್ಕೆ ಮತ್ತೂಮ್ಮೆ ಬರದ ಭೀತಿ!

ಚನ್ನರಾಯಪಟ್ಟಣಕ್ಕೆ ಮತ್ತೂಮ್ಮೆ ಬರದ ಭೀತಿ!

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ