ಬಿತ್ತನೆ ಆಲೂಗಡ್ಡೆ ಖರೀದಿಗೆ ರೈತರ ಹಿಂದೇಟು

ಮಳೆ ಕೊರತೆ, ಅಂಗಮಾರಿ ರೋಗದ ಭಯ: ಈ ವರ್ಷ ಬಿತ್ತನೆ ಪ್ರಮಾಣ ಶೇ.50ರಷ್ಟು ಕಡಿಮೆಯಾಗುವ ಸಂಭವ

Team Udayavani, May 27, 2019, 8:42 AM IST

hasan-tdy-1..

ಹಾಸನದ ಎಪಿಎಂಸಿ ಪ್ರಾಂಗಣದಲ್ಲಿ ಆಲೂಗಡ್ಡೆ ಮಾರಾಟ ಭಾನುವಾರ ನೀರಸವಾಗಿತ್ತು.

ಹಾಸನ: ನಗರದ ಎಪಿಎಂಸಿ ಪ್ರಾಂಗಣದಲ್ಲಿ ಬಿತ್ತನೆ ಆಲೂಗಡ್ಡೆ ವ್ಯಾಪಾರ ಆರಂಭವಾಗಿ ಎರಡು ವಾರ ಗಳಾಗುತ್ತಾ ಬಂದರೂ ಆಲೂಗಡ್ಡೆ ಖರೀದಿಗೆ ರೈತರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಂದಿನ ವರ್ಷಗಳಂತೆ ಆಲೂಗಡ್ಡೆ ಖರೀದಿಗೆ ರೈತರು ಬಾರದಿದ್ದರಿಂದ ಆಲೂಗಡ್ಡೆ ವಹಿವಾಟಿನ ಮೇಲೆ ಮಂಕು ಕವಿದಿದೆ.

ಮೇ 16 ರಂದು ಆಲೂಗಡ್ಡೆ ಮಾರುಕಟ್ಟೆ ಆರಂಭ ವಾದಾಗ ಕ್ವಿಂಟಲ್ ಆಲೂಗಡ್ಡೆ ದರ 1,450 ರಿಂದ 1,600 ರೂ. ಇದ್ದದ್ದು, ಈಗ 1,250 ರಿಂದ 1,350 ರೂ.ಗೆ ಕುಸಿದಿದೆ. ಆದರೂ ರೈತರು ಆಲೂಗಡ್ಡೆ ಖರೀ ದಿಗೆ ಮುಂದಾಗುತ್ತಿಲ್ಲ. ಇದರ ಪರಿಣಾಮ ಜಿಲ್ಲೆಯಲ್ಲಿ ಬಿತ್ತನೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನು ಎರಡು ವಾರಗಳಲ್ಲಿ ಆಲೂಗಡ್ಡೆ ಬಿತ್ತನೆ ಮುಗಿಯಬೇಕು. ಆದಕ್ಕೂ ಮೊದಲು ರೈತರು ಆಲೂಗಡ್ಡೆ ಖರೀದಿಸಿ ನಾಲ್ಕೈದು ದಿನ ನೆಲದಲ್ಲಿ ಹರಡಿ ಮೊಳಕೆ ಬರುವುದನ್ನು ಖಾತರಿಪಡಿಸಿಕೊಂಡು ಆನಂತರ ಬೀಜೋಪಚಾರ ಮಾಡಿ ಬಿತ್ತನೆ ಮಾಡ ಬೇಕು. ಇಲ್ಲದಿದ್ದರೆ ಶೀತಲಗೃಹದಲ್ಲಿರಿಸಿದ ಆಲೂಗಡ್ಡೆ ಯನ್ನು ಮಾರುಕಟ್ಟೆಯಲ್ಲಿ ಖರೀದಿಸಿದ ಮರುದಿನವೇ ಬಿತ್ತನೆ ಮಾಡಿದರೆ ಕೊಳೆತು ಹೋಗುತ್ತದೆ. ಹಾಗಾಗಿ ಆಲೂಗಡ್ಡೆ ಬಿತ್ತನೆ ಮಾಡುವ ರೈತರು ಈ ಸಮಯಕ್ಕಾಗಲೇ ಆಲೂಗಡ್ಡೆ ಖರೀದಿಸಬೇಕಾಗಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಶೇ.25 ರಷ್ಟೂ ಆಲೂಗಡ್ಡೆ ವಹಿವಾಟು ನಡೆದಿಲ್ಲ ಎಂದು ವರ್ತಕರು ಬೇಸರ ವ್ಯಕ್ತಪಡಿಸುತ್ತಾರೆ. ಹಿಂದಿನ ವರ್ಷಕ್ಕೆ ಹೋಲಿಸಿ ದರೆ ಈ ಬಾರಿ ಆಲೂಗಡ್ಡೆ ಬಿತ್ತನೆ ಶೇ.50 ರಷ್ಟು ಕಡಿಮೆಯಾಗಲಿದೆ ಎಂದೂ ಅಭಿಪ್ರಾಯಪಡುತ್ತಾರೆ.

ಕೈಕೊಟ್ಟ ಪೂರ್ವ ಮುಂಗಾರು: ಈ ಬಾರಿ ಪೂರ್ವ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬರಲಿಲ್ಲ. ಅತಿ ಹೆಚ್ಚು ಆಲೂಗಡ್ಡೆ ಬಿತ್ತನೆ ಮಾಡುತ್ತಿದ್ದ ಅರಸೀಕೆರೆ ತಾಲೂಕು ಗಂಡಸಿ, ಬಾಗೇಶಪುರ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಕುಂಠಿತವಾಗಿದ್ದರಿಂದ ಆ ಭಾಗದ ರೈತರು ಆಲೂಗಡ್ಡೆ ಬಿತ್ತನೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮುಂದಾಗಿಲ್ಲ. ಹಾಸನ ತಾಲೂಕು ದುದ್ದ, ಸಾಲ ಗಾಮೆ, ಕಸಬಾ ಹೋಬಳಿಯಲ್ಲೂ ಈ ಬಾರಿ ಮಳೆ ಕೊರತೆ ಎದುರಾಗಿದ್ದರಿಂದ ಆಲೂಗಡ್ಡೆ ಬಿತ್ತನೆಗೆ ರೈತರು ಮನಸ್ಸು ಮಾಡುತ್ತಿಲ್ಲ.

ಆಲೂ ಬದಲು ಶುಂಠಿ ಬೆಳೆಯಲು ಚಿಂತನೆ: ಬೋರ್‌ವೆಲ್ಗಳಿರುವ ರೈತರು ಆಲೂಗಡ್ಡೆ ಬದಲು ಶುಂಠಿ ಬೆಳೆಯಲು ಮುಂದಾಗಿದ್ದಾರೆ. ಶುಂಠಿಗೆ ಈಗ ಉತ್ತಮ ಧಾರಣೆ ಇದೆ. 60 ಕೇಜಿ ಶುಂಠಿಗೆ ಈಗ 5ರಿಂದ 6ಸಾವಿರ ರೂ. ಬೆಲೆ ಇದೆ. ಹಾಗಾಗಿ ಆಲೂ ಗಡ್ಡೆ ಬದಲು ಶುಂಠಿ ಬೆಳೆಯಲು ಮುಂದಾಗಿದ್ದಾರೆ.

ಕಳೆದ ವರ್ಷ ಜಿಲ್ಲೆಯ 11ಸಾವಿರ ಎಕರೆಯಲ್ಲಿ ಆಲೂಗಡ್ಡೆ ಬಿತ್ತನೆಯಾಗಿತ್ತು. ಈ ವರ್ಷ 13ಸಾವಿರ ಎಕರೆಯಲ್ಲಿ ಆಲೂಗಡ್ಡೆ ಬಿತ್ತನೆಯಾಗಬಹದೆಂದು ತೋಟಗಾರಿಕೆ ಇಲಾಖೆ ನಿರೀಕ್ಷಿಸಿತ್ತು. ಆದರೆ ನಿರೀಕ್ಷೆಯ ಶೇ.50 ರಷ್ಟೂ ಪ್ರಮಾಣದಲ್ಲೂ ಆಲೂಗಡ್ಡೆ ಬಿತ್ತನೆ ಯಾಗುವುದು ಕಷ್ಟ ಎಂಬ ಪರಿಸ್ಥಿತಿ ಇದೆ.

ಜಿಲ್ಲಾಡಳಿತದಿಂದ ವ್ಯವಸ್ಥೆ: ಜಿಲ್ಲಾಡಳಿತವೇನೋ ಆಲೂಗಡ್ಡೆ ವಹಿವಾಹಿಟಿಗೆ ಉತ್ತಮ ವ್ಯವಸ್ಥೆ ಮಾಡಿತ್ತು. ಸರ್ಕಾರ ಶೇ.50ರಷ್ಟು ಸಹಾಯಧನವನ್ನೂ ನೀಡುತ್ತಿದೆ. ಅದಕ್ಕಾಗಿ ಮಾರುಕಟ್ಟೆಯಲ್ಲಿಯೇ ತೋಟ ಗಾರಿಕೆ ಮತ್ತು ಕಂದಾಯ ಇಲಾಖೆಯ ಮೂಲಕ ಸಕಲ ವ್ಯವಸ್ಥೆಯನ್ನೂ ಮಾಡಿದೆ. ಆಲೂಗಡ್ಡೆ ಬೀಜೋ ಪಾಚಾರಕ್ಕೆ ಹಾಗೂ ಔಷಧಿಗೆ ಶೇ.50ರಷ್ಟು ಸಹಾಯ ಧನವನ್ನೂ ತೋಟಗಾರಿಕೆ ನೀಡಲು ಮುಂದಾಗಿದೆ. ಸಹಾಯಧನ ನೀಡುವ ಬಗ್ಗೆ ವ್ಯಾಪಕ ಪ್ರಚಾರವನ್ನೂ ಕೈಗೊಳ್ಳಲಾಗುತ್ತಿದೆ. ಆದರೂ ರೈತರು ಮಾತ್ರ ಆಲೂ ಗಡ್ಡೆ ಬಿತ್ತನೆಗೆ ಹಿಂದೇಟು ಹಾಕುತ್ತಿದ್ದಾರೆ. ರೈತರಿಗೆ ಸಲಹೆ ಹಾಗೂ ಸಬ್ಸಿಡಿ ದರದಲ್ಲಿ ಔಷಧಿ ನೀಡಲು ತೋಟಗಾರಿಕೆ ಇಲಾಖೆ ಮಾರುಕಟ್ಟೆಯಲ್ಲಿ ತೆರೆದಿರುವ ಮಳಿಗೆಗಳತ್ತ ರೈತರು ಮುಖ ಮಾಡುತ್ತಿಲ್ಲ. ಹಾಗಾಗಿ ಇಲಾಖೆಯ ಅಧಿಕಾರಿಗಳು, ನೌಕರರು ಮಳಿಗೆಯಲ್ಲಿ ಕಾಲ ಕಳೆಯುತ್ತಾ ಕೂತಿದ್ದಾರೆ.

ಕಳೆದ ವರ್ಷ ಪೂರ್ವ ಮುಂಗಾರು ಆಶಾದಾಯಕ ವಾಗಿದ್ದು, ಆಲೂಗಡ್ಡೆ ಬಿತ್ತನೆಗೆ ಆಶಾದಾಯಕ ವಾತಾವರಣವಿತ್ತು. ಆದರೆ ಮಲೆನಾಡು ಮತ್ತು ಆರೆ ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಳೆ ನಿರೀಕ್ಷೆ ಮೀರಿ ಸುರಿದಿದ್ದರಿಂದ ಬಿತ್ತನೆ ಮಾಡಿದ್ದ ಆಲೂಗಡ್ಡೆ ಹೊಲದಲ್ಲಿಯೇ ಕೊಳೆತು ಹೋಗಿ ರೈತರು ನಷ್ಟ ಅನುಭವಿಸಿದರು. ಬಯಲು ಸೀಮೆಯಲ್ಲೂ ಅಂಗಮಾರಿ ರೋಗ ಬೆಳೆಗೆ ಬಾಧಿಸಿತು. ಬೆಳೆ ನಷ್ಟವಾದರೂ ರೈತರಿಗೆ ಬೆಳೆ ವಿಮೆ ಬರಲಿಲ್ಲ. ಸತತ ನಷ್ಟ ಅನುಭವಿಸುತ್ತಾ ಬಂದಿರುವ ಹಾಸನ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರು ಈಗ ಆಲೂಗಡ್ಡೆ ಬೆಳೆಯ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಂತಿದೆ.

ಶೀತಲಗೃಹದ ಬಳಿಯೇ ವಹಿವಾಟು: ಹಾಸನ ಎಪಿಎಂಸಿ ಪ್ರಾಂಗಣದಲ್ಲಿ ಬಿತ್ತನೆ ಆಲೂಗಡ್ಡೆ ವಹಿವಾಟು ಕುಂಠಿತವಾಗಲು ವರ್ತಕರು ಶೀತಲಗೃಹದ ಬಳಿಯೇ ರೈತರಿಗೆ ನೇರವಾಗಿ ಆಲೂಗಡ್ಡೆ ಮಾರಾಟ ಮಾಡುತ್ತಿರುವುದೂ ಕಾರಣ ಎಂದು ಹೇಳಲಾಗುತ್ತಿದೆ. ಶೀತಲಗೃಹದಿಂದ ಎಪಿಎಂಸಿ ಪ್ರಾಂಗಣಕ್ಕೆ ಆಲೂಗಡ್ಡೆ ತರಲು ಒಂದು ಚೀಲಕ್ಕೆ (50 ಕೇಜಿ) ಅಂದರೆ ಲಾರಿ ಬಾಡಿಗೆ 8 ರೂ. ಒಂದು ಕ್ವಿಂಟಲ್ಗೆ 16 ರೂ. ಎಪಿಎಂಸಿ ಸೆಸ್‌ 14 ರೂ. ಹಾಗೂ ಅನ್‌ಲೋಡ್‌ಗೆ ಹಮಾಲಿಗಳಿಗೆ ಒಂದು ಚೀಲಕ್ಕೆ 5 ರೂ. ಕೊಡಬೇಕು. ಶೀತಲಗೃಹದ ಬಳಿಯೇ ರೈತರಿಗೆ ಮಾರಾಟ ಮಾಡಿದರೆ ಒಂದು ಕ್ವಿಂಟಲ್ಗೆ 40 ರೂ. ಉಳಿಯುತ್ತದೆ. ಹಾಗಾಗಿ ಬಹಳಷ್ಟು ವರ್ತಕರು ಶೀತಲಗೃಹದ ಬಳಿಯೇ ರೈತರಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಎಷ್ಟು ಪ್ರಮಾಣದ ಆಲೂಗಡ್ಡೆ ಮಾರಾಟವಾಯಿತು ಎಂಬ ಲೆಕ್ಕ ಸಿಗುವುದಿಲ್ಲ. ಎಪಿಎಂಸಿಗೂ ನಷ್ಟವಾಗುತ್ತಿದೆ.

● ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.