ರೈತರ ಸಾಲ ಮನ್ನಾ ಹಣದ ದುರುಪಯೋಗ ಆರೋಪ


Team Udayavani, Jul 16, 2019, 3:00 AM IST

raitara

ಹಾಸನ: ರೈತರ ಕೃಷಿ ಸಾಲ ಮನ್ನಾ ಆದ ನಂತರ ರೈತರಿಗೆ ಹೊಸ ಸಾಲ ನೀಡುವ ಮೊತ್ತವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಹಾಸನ ಜಿಲ್ಲಾ ಸಹಕಾರ ಬ್ಯಾಂಕ್‌ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್‌ ಆರೋಪಿಸಿದರು.

ಹೊಸ ತಂಡ ರಚನೆ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ 197 ಕೃಷಿ ಪತ್ತಿನ ಸಹಕಾರ ಸಂಘಗಳಲ್ಲೂ ಸಾಲ ಮನ್ನಾದ ಮೊತ್ತ ಪಾವತಿ ಅಥವಾ ಹೊಸ ಸಾಲದ ವಿತರಣೆಯ ಬಗ್ಗೆ ತನಿಖೆ ನಡೆಸಲಾಗುವುದುದು. ಈ ಸಂಬಂಧ ಶೀಘ್ರದಲ್ಲಿಯೇ ಸಮಿತಿ ಅಥವಾ ತಂಡವನ್ನು ರಚನೆ ಮಾಡಲಾಗುವುದು ಎಂದರು.

502 ಕೋಟಿ ರೂ. ಸಾಲ ಮನ್ನಾ: ಹಾಸನ ಜಿಲ್ಲೆಯಲ್ಲಿ ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿದ್ದ ಕೃಷಿ ಸಾಲದಲ್ಲಿ ಒಂದು ಲಕ್ಷ ರೂ.ವರೆಗಿನ ಮೊತ್ತವನ್ನು ಮನ್ನಾ ಮಾಡಿದ್ದು, ಅದರಂತೆ ಹಾಸನ ಜಿಲ್ಲೆಯ ಸಹಕಾರ ಕೇಂದ್ರ ಬ್ಯಾಂಕ್‌ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಿದ್ದ ಕೃಷಿ ಸಾಲದಲ್ಲಿ 1,19,814 ರೈತರ 502 ಕೋಟಿ ರೂ. ಸಾಲ ಮನ್ನಾ ಆಗಿದೆ.

ಆ ಪೈಕಿ ಇದುವರೆಗೂ 90,470 ರೈತರ ಸಾಲ ಮನ್ನಾದ 375 ಕೋಟಿ ರೂ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಬಂದಿದ್ದು, ಇನ್ನೂ 136 ಕೋಟಿ ರೂ. ಬರಬೇಕಾಗಿದೆ. ಇನ್ನೂ 5,600 ಅರ್ಹ ಫ‌ಲಾನುಭವಿಗಳ ಸಾಲ ಮನ್ನಾ ಆದೇಶ ಬರಬೇಕಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಸಾಲ ಮನ್ನಾದ ಮೊತ್ತ ಅರ್ಹ ರೈತರು ಪಡೆದುಕೊಳ್ಳಲು ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆದು ಎಟಿಎಂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ವಿವರ ನೀಡಿದರು.

ಸಂಚಾರಿ ಎಟಿಎಂ ಸೌಲಭ್ಯ: ಸಾಲ ಮನ್ನಾ ಮೊತ್ತವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ( ಕಾರ್ಯದರ್ಶಿ) ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕ್ಷೇತ್ರಾಧಿಕಾರಿಗಳು ಪರಿವೀಕ್ಷಣೆ ನಡೆಸಲು ಸೂಚಿಸಿದ್ದು, ಉಳಿತಾಯ ಖಾತೆ ತೆರೆದು ಎಟಿಎಂ ಕಾರ್ಡ್‌ಗಳ ಮೂಲಕವೇ ಸಾಲ ಮನ್ನಾ ಮತ್ತು ಹೊಸ ಸಾಲದ ಮೊತ್ತವನ್ನು ಪಾವತಿಸಲು ಸೂಚನೆ ನೀಡಲಾಗಿದೆ.

ಎಟಿಎಂ ಇಲ್ಲದ ಶಾಖೆಗಳಲ್ಲಿ ಸಂಚಾರಿ ಎಟಿಎಂ ವಾಹನ ಬಳಸಿ ಸಾಲದ ಮೊತ್ತ ವಿತರಿಸಲಾಗಿದೆ ಎಂದರು. ಜಿಲ್ಲೆಯ ಎಲ್ಲ ಪ್ರಾಥಮಿಕ ಸಹಕಾರ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ರೀತಿನ ಪಾಸ್‌ ಪುಸ್ತಕ ವಿತರಣೆ ಮಾಡಲು ನಿರ್ಧರಿಸಿದ್ದು, ಸಾಲ ಮನ್ನಾದ ಫ‌ಲಾನುಭವಿಗಳ ಪಟ್ಟಿಯನ್ನು ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಸರ್ಕಾರಿ ಕಟ್ಟಡಗಳ ಬಳಿ ಪ್ರಕಟಿಸಲಾಗುವುದು.

ಸಹಕಾರಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರನ್ನು ಸಾಲ ಮನ್ನಾದ ಮೇಲ್ವಿಚಾರಣೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು. ಬ್ಯಾಂಕಿನ ಆಡಳಿತ ಮಂಡಳಿ ಉಪಾಧ್ಯಕ್ಷ ಎಚ್‌.ಸಿ.ಗಿರೀಶ್‌, ನಿರ್ದೇಶಕರುಗಳಾದ ಪುಟ್ಟಸ್ವಾಮಿಗೌಡ, ಹೊನ್ನವಳ್ಳಿ ಸತೀಶ್‌, ಜಯರಾಂ, ಲೋಕೇಶ್‌, ವ್ಯವಸ್ಥಾಪಕ ನಿರ್ದೇಶಕ ದಯಾನಂದ್‌ ಅವರೂ ಉಪಸ್ಥಿತತರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.