ಪದೆ-ಪದೇ ಟ್ರ್ಯಾಕ್ಟರ್‌ನಲ್ಲಿ ತಾಂತ್ರಿಕ ದೋಷ


Team Udayavani, May 11, 2022, 4:01 PM IST

ಪದೆ-ಪದೇ ಟ್ರ್ಯಾಕ್ಟರ್‌ನಲ್ಲಿ ತಾಂತ್ರಿಕ ದೋಷ

ಹಾಸನ: ರೈತರಿಗೆ ಟ್ರ್ಯಾಕ್ಟರ್‌ಗಳನ್ನು ಮಾರಾಟ ಮಾಡಿರುವ ವಿವಿಧ ಕಂಪನಿಗಳ ಶೋರೂಂಗಳು ಟ್ರ್ಯಾಕ್ಟರ್‌ಗಳ ದುರಸ್ತಿ ಮಾಡಿಕೊಡದೆ ತೊಂದರೆ ಕೊಡುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

ಜಿಲ್ಲೆಯಲ್ಲಿರುವ ಕ್ಯಾಪ್ಟನ್‌ ಟ್ರ್ಯಾಕ್ಟರ್‌ ಕಂಪನಿಯ ಶೋ ರೂಂ ಸೇರಿದಂತೆ ವಿವಿಧ ಕಂಪನಿಗಳ ಟ್ರ್ಯಾಕ್ಟರ್‌ ಶೋರೂಂ ಮತ್ತು ಫೈನಾನ್ಸ್‌ ಕಂಪನಿಗಳು ರೈತರಿಗೆ ಟ್ರ್ಯಾಕ್ಟರ್‌, ಟಿಲ್ಲರ್‌, ಮಿನಿ ಟ್ರ್ಯಾಕ್ಟರ್‌ ಗಳನ್ನು ಮಾರಾಟ ಮಾಡಿವೆ. ಸಾಲ ಪಡೆದು ತಮ್ಮ ಜಮೀ ನನ್ನು ಅಡಮಾನ ಮಾಡಿ ಚೋಳ ಮಂಡಲಂ ಸೇರಿದಂತೆ ವಿವಿಧ ಹಣಕಾ ಸು ಸಂಸ್ಥೆಗಳಿಂದ ಸಾಲ ಪಡೆ ದು ಶೋರೂಂಗಳಿಂದ ಟ್ರ್ಯಾಕ್ಟರ್‌ಗಳನ್ನು ಖರೀದಿ ಮಾಡಿರುವ ರೈತ ರಿಗೆ ಟ್ರ್ಯಾಕ್ಟರ್‌ಗಳನ್ನು ದುರಸ್ತಿ ಮಾಡದೆ ಮೋಸ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿದರು.

ಮತ್ತೆ ಮತ್ತೆ ರಿಪೇರಿ: ಖರೀದಿಸುವ ಸಂದರ್ಭದಲ್ಲಿ ಶೇ.50ರಷ್ಟು ಮೊತ್ತವನ್ನು ಪಾವತಿಸಿ ಖರೀದಿಸಿರುವ ಟ್ರ್ಯಾಕ್ಟರ್‌ ಗಳನ್ನು ರೈತರು ಬಳಸಿದ ಒಂದೆರೆಡು ತಿಂಗಳಲ್ಲೇ ದುರಸ್ತಿಗೆ ಬರುತ್ತಿವೆ. ದುರಸ್ತಿ ಮಾಡಿಕೊಟ್ಟರೂ ಮತ್ತೆ ಒಂದೆರೆಡು ದಿನಕ್ಕೆ ದುರಸ್ತಿಗೆ ಬರುತ್ತಿದೆ. ಹೆಚ್ಚಿನ ದುರಸ್ತಿಯನ್ನು ಕಂಪನಿಯು ನಿರ್ವಹಿಸಲು ಸಾಧ್ಯವಿಲ್ಲ ಎಂದು ಇಲ್ಲಸಲ್ಲದ ಸಬೂಬು ಹೇಳುತ್ತಿವೆ. ಕೆಲವೊಂದು ಸಂದರ್ಭದಲ್ಲಿ ಶೋ ರೂಂ ನಲ್ಲೇ ವಾಹನವನ್ನು ಇಟ್ಟುಕೊಂಡು ತಿಂಗಳುಗಟ್ಟಲೇ ಅಲೆಸುತ್ತಿದ್ದಾರೆ. ಇದನ್ನು ಕೇಳಿದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕುತ್ತಾರೆ. ನಿಮ್ಮ ಜಮೀನನ್ನು ಸಾಲಕ್ಕೆ ಹರಾಜು ಹಾಕಿ ಕೊಳ್ಳುತ್ತೇವೆ. ನ್ಯಾಯಾಲಯದಲ್ಲಿ ನಿಮ್ಮಗಳ ಮೇಲೆ ದಾವೆ ಹಾಕಿಸುತ್ತೇವೆ ಎಂದು ರೈತರಿಗೆ ಟ್ರ್ಯಾಕ್ಟರ್‌ ಕಂಪನಿಗಳು ಬೆದರಿಕೆ ಹಾಕುತ್ತಿವೆ ಎಂದು ದೂರಿದರು.

ಸಂಸ್ಥೆ ಗಡಿಪಾರಿನ ಎಚ್ಚರಿಕೆ: ಶೋರೂಂ ಮಾಲೀಕರು, ಫೈನಾನ್ಸ್‌ ಕಂಪನಿಗಳು ಕಾನೂನು ರೀತಿಯಲ್ಲಿ ರೈತರಿಗೆ ಸೇವೆಯನ್ನು ನೀಡುವ ಬದಲಾಗಿ ಗೂಂಡಾ ವರ್ತನೆ ತೋರಿಸುತ್ತಿದ್ದಾರೆ. ರೈತರು ಯಾವುದಾದರೂ ಬ್ಯಾಂಕಿ ನಲ್ಲಿ ಅವಶ್ಯಕವಾದ ಸಾಲ ಪಡೆಯಲು ಮುಂದಾದರೆ ಅಂತಹ ಬ್ಯಾಂಕುಗಳಿಗೆ ಚೋಳಮಂಡಲ ದಂತಹ ಫೈನಾನ್ಸ್‌ ಕಂಪನಿಗಳು ಸಾಲ ಕೊಡದಂತೆ ಉದ್ದೇಶ ಪೂರ್ವಕವಾಗಿ ಅಡಚಣೆ ಮಾಡುತ್ತಿ ವೆ. ಇಂತಹ ಟ್ರ್ಯಾಕ್ಟರ್‌ ಶೋರೂಂಗಳು, ಫೈನಾನ್ಸ್‌ ಕಂಪನಿಗಳು ಈ ರೀತಿ ರೈತರಿಗೆ ತೊಂದರೆ ಕೊ ಡುವುದನ್ನು ಮುಂದುವರಿಸಿದರೆ ರಾಜ್ಯದಿಂದ ಹೊರಗಡೆ ಓಡಿಸುವ ಅಭಿಯಾನವನ್ನು ಹಮ್ಮಿಕೊ ಳ್ಳಬೇಕಾದೀತು ಎಂದು ಎಚ್ಚರಿಸಿದರು.

ಬೆದರಿಕೆ ತಂತ್ರ ನಿಲ್ಲಿಸಿ : ಎಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಸರ್ಕಾರದಿಂದಲೇ ರೈತರಿಗೆ ಸಾಲಮನ್ನಾದ ಅರ್ಜಿಗಳು ರವಾನೆ ಯಾಗಿದ್ದವು. ಬ್ಯಾಂಕುಗಳು ಸಾಲದ ವಿವರವನ್ನೂ ಪಡೆದಿದ್ದವು. ಆದರೆ ಬ್ಯಾಂಕುಗಳು ಮಾತ್ರ ಇನ್ನೂ ರೈತರಿಗೆ ನೋಟಿಸ್‌ ಕಳುಹಿಸಿ ಸಾಲಮನ್ನಾ ಆಗಿಲ್ಲ ಎಂದು ಹೇಳುತ್ತಿವೆ. ರೈತರ ಸಾಲ ಮನ್ನಾ ಅಡಚಣೆಗಳನ್ನು ನಿವಾರಿಸಲು ಸಂಬಂಧಿಸಿದ ಇಲಾಖೆಗಳು ಕೂಡಲೇ ಮುಂದಾಗಬೇಕು. ಬ್ಯಾಂಕು ಗಳು ರೈತರಿಗೆ ನೋಟಿಸ್‌ ಕಳುಹಿಸಿ ನ್ಯಾಯಾಲಯಕ್ಕೆ ದಾವೆ ಹೂಡುತ್ತೇವೆ ಎಂಬ ಬೆದರಿಕೆ ಕೂಡ ಲೇ ನಿಲ್ಲಿಸಬೇಕೆಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾಧ್ಯಕ್ಷ ಬಾಬು, ಶಿವರಾಮೇ ಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.