ಕೊಬ್ಬರಿ ಖರೀದಿಸಲು ಆಗ್ರಹಿಸಿ ದಿಢೀರ್‌ ಪ್ರತಿಭಟನೆ


Team Udayavani, Apr 30, 2023, 3:54 PM IST

tdy-17

ಅರಸೀಕೆರೆ: ನಫೆಡ್‌ ಖರೀದಿ ಕೇಂದ್ರದ ಅಧಿಕಾರಿಗಳು ರೈತರಿಂದ ಕೊಬ್ಬರಿ ಖರೀದಿಸದೆ ಕಳೆದ 10ದಿನ ಗಳಿಂದ ರೈತರನ್ನು ಸತಾಯಿಸುತ್ತಿದ್ದು, ಇದ ರಿಂದ ಮನೆ-ಮಠ ಬಿಟ್ಟು ರೈತರು ಮಾರುಕಟ್ಟೆಯಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೊಬ್ಬರಿ ಖರೀದಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಎಪಿಎಂಸಿ ಗೇಟ್‌ ಮುಂಭಾಗ ರೈತರು ದಿಢೀರ್‌ ಪ್ರತಿಭಟನೆ ನಡೆಸಿದರು.

ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆ ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದ ಹಿನ್ನೆಲೆ ಸರ್ಕಾರ ನಫೆಡ್‌ ಕೇಂದ್ರದ ಮೂಲಕ ಬೆಂಬಲ ಬೆಲೆಯಲ್ಲಿ ರೈತರಿಂದ ಕೊಬ್ಬರಿ ಖರೀದಿಸಲು ಪ್ರಾರಂಭಿಸಿದೆ. ಆದರೆ ಇಲ್ಲಿನ ಅಧಿಕಾರಿಗಳು ಇಲ್ಲದ ಸಬೂಬು ಹೇಳಿಕೊಂಡು ಹತ್ತು ಹದಿನೈದು ದಿನಗಳಿಂದ ರೈತರಿಂದ ಕೊಬ್ಬರಿ ಖರೀದಿಸದೆ ತೀವ್ರ ತೊಂದರೆ ನೀಡುತ್ತಿದ್ದಾರೆ. ಕೂಡಲೇ ಖರೀದಿ ಪ್ರಾರಂಭಿಸದಿದ್ದರೇ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರವಾದ ಪ್ರತಿಭಟನೆ ನಡೆಸುವುದಾಗಿ ರೈತ ಪ್ರತಿಭಟನಾಕಾರರು ಎಚ್ಚರಿಸಿದರು.

6 ಲಕ್ಷಕ್ಕೂ ಹೆಚ್ಚು ತೆಂಗಿನ ಮರ ನಾಶ: ರೈತ ಸಂಘದ ರಾಜ್ಯ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನ ಕುಮಾರ್‌ ಮಾತನಾಡಿ, ಕಳೆದ 7ತಿಂಗಳ ಹಿಂದೆ 19 ಸಾವಿರ ಹಾಸುಪಾಸಿನಲ್ಲಿದ್ದ ಕೊಬ್ಬರಿ ಬೆಲೆ ಈಗ 9000ಕ್ಕೆ ಇಳಿದಿದೆ. ನಫೆಡ್‌ ಖರೀದಿ ಕೇಂದ್ರದ ಮೂಲಕ 11,700 ರೂ.ಬೆಲೆಗೆ ಕೊಬ್ಬರಿ ಖರೀದಿಸಲಾಗುತ್ತಿದೆ. ಆದರೂ ಈ ಬೆಲೆ ಏನೇನು ಸಾಲದಾಗಿದೆ. ತಾಲೂಕಿನಲ್ಲಿ ಅಂತರ್ಜಲ ಕುಸಿತದಿಂದ ಕಳೆದ ವರ್ಷ 6 ಲಕ್ಷಕ್ಕೂ ಹೆಚ್ಚು ತೆಂಗಿನ ಮರಗಳು ನಾಶವಾಗಿದೆ. ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂಕಷ್ಟದಲ್ಲಿ ನಫೆಡ್‌ ಕೇಂದ್ರದಲ್ಲಿ ಕೊಬ್ಬರಿ ಖರೀದಿಸಲು ಚೀಲ ಇಲ್ಲ. ಸಾಗಾಣಿಕೆ ಮಾಡಲು ಲಾರಿ ಇಲ್ಲ ಎನ್ನುವ ಸಬೂಬು ಹೇಳಿಕೊಂಡು ರೈತರನ್ನು ಹತ್ತು-ಹದಿನೈದು ದಿನ ಕಾಯುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಣಮಟ್ಟ ಕೊರತೆ ಹೊರೆ: ಖಾಲಿ ಚೀಲದಿಂದ ಹಿಡಿದು ಕೊಬ್ಬರಿ ಗುಣಮಟ್ಟ ಪರೀಕ್ಷಿಸುವವರೆಗೆ ಹಾಗೂ ಲಾರಿಗೆ ಲೋಡ್‌ ಮಾಡುವವರೆಗೆ ಎಲ್ಲಾ ವೆಚ್ಚವನ್ನು ರೈತರೆ ನೀಡಬೇಕಾಗಿದೆ. ಅಲ್ಲದೆ ಉತ್ತಮ ಗುಣಮಟ್ಟದ ಕೊಬ್ಬರಿಯನ್ನೆ 1 ಕ್ವಿಂಟಲ್‌ನಲ್ಲಿ 20 ಕೆ.ಜಿ ಕೊಬ್ಬರಿ ತಿರಸ್ಕರಿಸುವ ಮೂಲಕ ರೈತರಿಗೆ ನಷ್ಟ ಉಂಟುಮಾಡುತ್ತಿದ್ದಾರೆ. ನಫೆಡ್‌ ಅಧಿಕಾರಿಗಳನ್ನು ಗಮನಿಸುವವರಿಗೆ ಯಾವುದೇ ಗ್ರೇಡ್‌ ತಿರಸ್ಕಾರವಿಲ್ಲದೆ ಸಮಯ ಎಷ್ಟಾದರೂ ಕೊಬ್ಬರಿ ಖರೀದಿಸುತ್ತಾರೆ ಎಂದು ಆರೋಪಿಸಿದರು. ರೈತರ ಪ್ರತಿಭಟನೆಯಿಂದ ಎಚ್ಚೆತ್ತ ಅಧಿಕಾರಿಗಳು ಲಾರಿ ಗುತ್ತಿಗೆದಾರರು ಕರೆಸಿ ನಾಳೆಯಿಂದಲೇ ಈಗಾ ಗಲೇ ಖರೀದಿಯಾಗಿರುವ ಕೊಬ್ಬರಿ ಸಾಗಾಣಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಸಂಚಾಲಕ ಅಯ್ಯೂಬ್‌ ಪಾಷಾ, ಜಿಲ್ಲಾ ಕಾರ್ಯಧ್ಯಕ್ಷ ಎಜಾಜ್‌ ಪಾಷಾ,ಮಹಮ್ಮದ್‌ ದಸ್ತಗೀರ್‌, ವಕೀಲರಾದ ವೆಂಕಟೇಶ್‌, ಶಾಂತಮ್ಮ, ರಂಗಸ್ವಾಮಿ, ಹನುಮಂತು, ರಾಮಚಂದ್ರ, ಸೋಮಣ್ಣ, ಚಂದ್ರಪ್ಪ, ರಮೇಶ್‌, ತಿಮ್ಮಪ್ಪ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.