ಬೇಲೂರು: ಎರಡನೇ ದಿನಕ್ಕೆ ಕಾಲಿಟ್ಟ  ರೈತರ ಪ್ರತಿಭಟನೆ


Team Udayavani, Oct 12, 2022, 3:43 PM IST

ಬೇಲೂರು: ಎರಡನೇ ದಿನಕ್ಕೆ ಕಾಲಿಟ್ಟ  ರೈತರ ಪ್ರತಿಭಟನೆ

ಬೇಲೂರು: ಕಾಫಿ ಬೆಳೆಗಾರರ ಹಲವು ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ 2 ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ಆರಂಭಗೊಂಡ ಪ್ರತಿಭಟನೆ ಅಂತ್ಯದಲ್ಲಿ ತಹಶೀಲ್ದಾರ್‌ ಕಚೇರಿ ಮುಂದೆ ಧರಣಿ ನಡೆಸಿದ್ದಲ್ಲದೆ, ರಾತ್ರಿ ತಹಶೀಲ್ದಾರ್‌ ಕಚೇರಿ ಗೇಟಿನ ಬಳಿ ಮಲಗುವ ಮೂಲಕ ಅಹೋರಾತ್ರಿ ಧರಣಿ ನಡೆಸಿದರು.

ಮಂಗಳವಾರ ಆರಂಭಗೊಂಡ ಧರಣಿ ವೇಳೆ, ಶಾಸಕ ಕೆ.ಎಸ್‌.ಲಿಂಗೇಶ್‌, ರಾಜ್ಯ, ಕೇಂದ್ರ ಸರ್ಕಾ ರ ಹಾಗೂ ಚೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆದರಿಕೆ ನಿಲ್ಲಿಸಿ: ರೈತ ಸಂಘದ ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಬಳ್ಳೂರುಸ್ವಾಮಿಗೌಡ ಮಾತನಾಡಿದರು. ಕಾಫಿ ಬೆಳೆಗಾರರ ಪಂಪ್‌ಸೆಟ್‌ ಗಳಿಗೆ ಅನಗತ್ಯ ಬಿಲ್ಲನ್ನು ಹಾಕುವು ದು, ದಂಡದ ಜೊತೆಗೆ ಬಡ್ಡಿ ಕಟ್ಟುವಂತೆ ಒತ್ತಾಯಿಸಿ ಮಲೆನಾಡ ಭಾಗದಲ್ಲಿ ವಿಜಿಲೆ ನ್ಸ್‌ ಅವರನ್ನು ಇಟ್ಟುಕೊಂಡು ಕಾಫಿ ಬೆಳೆಗಾರರನ್ನು ಬೆದರಿಸುವುದನ್ನು ನಿಲ್ಲಿಸಬೇಕು. ಕಾಫಿ ಬೆಳೆಗಾರರಿಗೆ 10 ಎಚ್‌ಪಿ. ವರಗೆ ಉಚಿತ ವಿದ್ಯುತ್‌ ಕೊಡುವ ನೆಪದಲ್ಲಿ ಡೈರೆಕ್ಟರ್‌ ಬೆನಿಫಿಟ್‌ ಟ್ರಾನ್ಸ್‌ಫ‌ರ್‌ (ಡಿಬಿಟಿ) ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಸ್ಪಂದಿಸದ ಜನಪ್ರತಿನಿಧಿಗಳು: ರೈತರು ಧರಣಿ ನಡೆಸುತ್ತಿದ್ದರೂ ಶಾಸಕರಾದಿಯಾಗಿ ಯಾವುದೆ ಜನಪ್ರತಿ ನಿಧಿಗಳು ಆಗಮಿಸಿಲ್ಲ. ವಿಪಕ್ಷದಲ್ಲಿ ರುವ ಶಾಸಕರು ರೈತರಿಗೆ ಬೆಂಬಲ ನೀಡುವ ಆಲೋಚನೆ ಇಲ್ಲದಿರುವುದನ್ನು ನೋಡಿದರೆ ಆಡಳಿತ ಪಕ್ಷದೊಂದಿಗಿನ ಹೊಂದಾಣಿಕೆ ಶಂಕೆ ಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಪರಿಶೀಲಿಸಿದೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಚೆಸ್ಕಾಂ ಮುಖ್ಯ ಎಂಜಿನಿಯರ್‌ ಮಹಾದೇವಸ್ವಾಮಿ ಪ್ರಸಾದ್‌ ಮಾತನಾಡಿದರು.

ರೈತರು ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ. ಮಾಹಿತಿ ಸಂಗ್ರಹಿಸಲಾಗಿದೆ. ಪಂಪ್‌ ಸೆಟ್‌ಗೆ ವಿದ್ಯುತ್‌ ಸಂಪ ರ್ಕ ಸ್ಥಗಿತಗೊಳಿಸಿಲ್ಲ. ಸರ್ಕಾರದ ಅನುದಾನ ರೈತರಿಗೆ ನೇರವಾಗಿ ತಲುಪಿಸಲು ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಳೆಗಾರರು ಬಾಕಿಯಿರುವ ಹಣ ಕಂತಿನ ಮೇಲೆ ಪಾವತಿಸಲು ಅವಕಾಶವಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಮಡಿಕೇರಿ ರೈತರು ಅಹವಾಲು ನೀಡಿದ್ದಾರೆ. ಡಿಬಿಟಿ ರದ್ದು ಪಡಿಸುವುದು ನಮ್ಮ ವ್ಯಾಪ್ತಿಗೆ ಬರಲ್ಲ. ಸರ್ಕಾರದ ಗಮನಕ್ಕೆ ತರಲಾಗುವುದು. ರೈತರಿಂದ ಬೇಡಿಕೆ ಅರ್ಜಿ ಪಡೆ ಯುವಂತೆ ವ್ಯವಸ್ಥಾಪಕ ನಿರ್ದೇಶಕರೂ ತಿಳಿಸಿದ್ದಾರೆ. ಸರ್ಕಾರವೂ ರೈತರ ಸಮಸ್ಯೆಯನ್ನು ಪರಿಶೀಲಿ ಸಲಿದೆ. ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದರು ಪ್ರತಿಭನೆಕಾರರನ್ನು ಮನೋವಲಿಸಲು ತಹಶೀಲ್ದಾರ್‌ ರಮೇಶ್‌, ಚಸ್ಕಾಂ ಅಧೀಕ್ಷಕ ಸುನಿಲ್‌ ಕುಮಾರ್‌, ಎಇಇ ಚಂದ್ರಮ್ಮ ಪ್ರಯತ್ನಿಸಿದರು.

ಪ್ರತಿಭಟನೆಯಲ್ಲಿ ತಾ.ಅಧ್ಯಕ್ಷ ಬೋಗಮಲ್ಲೇಶ್‌, ಬಸವರಾಜು, ಶಿವಾನಂ ದ್‌, ಗೋಂದಶೆಟ್ಟಿ, ಶ್ರೀನಿವಾಸ್‌, ಕೆ.ಪಿ.ಕುಮಾರ್‌, ಅದ್ಧೂರಿ ಚೇತನ ಕುಮಾರ್‌, ಶ್ರೀ ನಿವಾಸ್‌, ಧರ್ಮಪಾಲ್‌, ಬಿ.ಸಿ.ನಾಗರಾಜ್‌, ಬಸವೇಗೌಡ, ಮೋಕ್ಷ ರಾಜು, ಕಿರ್ಕಿ ಹಳ್ಳಿ ರಮೇಶ್‌, ಪ್ರಸನ್ನ, ಸೋಮಶೇಖರ್‌, ಸುಮಂತ್‌, ಬೆಣ್ಣಿನಮನೆ ಶ್ರೀನಿವಾಸ್‌, ತಾರಾನಾಥ್‌, ಕಂದಾ ವರ ಮೊಗಣ್ಣಗೌಡ, ರಾಜಶೇಖರ್‌, ಸುನಿಲ್‌, ದೇವೇಗೌಡರು, ಸೋಮೇಗೌಡ, ಶ್ರೀಧರ್‌, ಸಚಿನ್‌, ಲಿಂಗೇಗೌಡ ಇತ ರರಿದ್ದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.