ಮುಂಗಾರು ಮಳೆಗಾಗಿ ಮುಗಿಲತ್ತ ರೈತರ ನೋಟ

ತಾಲೂಕಿನಲ್ಲಿ ಬಿತ್ತನೆ ಕಾರ್ಯಕ್ಕೆ ತೀವ್ರ ಹಿನ್ನಡೆ, ಕೃಷಿ ಉತ್ಪಾದನೆಯಲ್ಲಿ ಕುಂಠಿತವಾಗುವ ಸಾಧ್ಯತೆ

Team Udayavani, Jul 12, 2019, 11:38 AM IST

hasan-tdy-2..

ಚನ್ನರಾಯಪಟ್ಟಣ ತಾಲೂಕು ಗದ್ದೇಬಿಂಡೇನಹಳ್ಳಿ ಗ್ರಾಮದ ರೈತ ಕೃಷಿ ಭೂಮಿ ಹದ ಮಾಡಿ ಮುಂಗಾರು ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಚನ್ನರಾಯಪಟ್ಟಣ: ಪೂರ್ಣ ಮುಂಗಾರು ಕೈ ಕೊಟ್ಟ ಪರಿಣಾಮ ದ್ವಿದಳ ಧಾನ್ಯ ರೈತರ ಕೈಸೇರಲಿಲ್ಲ. ಮುಂಗಾರು ಮಳೆ ಉತ್ತಮವಾಗಿ ಸುರಿಯಬಹುದೆಂದು ಆಶಾಭಾವನೆಯಿಂದ ರೈತರು ತಮ್ಮ ಕೃಷಿ ಭೂಮಿ ಹದಮಾಡಿಕೊಂಡು ವರುಣನ ಕೃಪೆಗಾಗಿ ಮುಗಿಲತ್ತ ನೋಡುವಂತಾಗಿದೆ.

ತಾಲೂಕಿನಲ್ಲಿ ವಾಡಿಕೆಯಂತೆ ಮಳೆ ಉತ್ತಮವಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳುವುದಲ್ಲದೇ ಮಳೆ ಆಗಿರುವ ಅಂಕಿ ಅಂಶದ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಕೃಷಿಗೆ ಅಗತ್ಯವಿರುವಷ್ಟು ಮಳೆಯಾಗಿದ್ದು ಬಾಗೂರು ಹಾಗೂ ನುಗ್ಗೇಹಳ್ಳಿ ಹೋಬಳಿಯಲ್ಲಿ ವಾಡಿಕೆಗಿಂತ‌ ಶೇ.10-18 ರಷ್ಟು ಹೆಚ್ಚುವರಿಯಾಗಿ ಮಳೆ ಸುರಿದಿರುವುದಲ್ಲದೇ ಉಳಿದ ನಾಲ್ಕು ಹೋಬಳಿಯಲ್ಲಿ ಕೃಷಿ ಚಟುವಟಿಕೆ ಮಾಡಲು ಯೋಗ್ಯವಾಗುವಷ್ಟು ಮಳೆಯಾಗಿದೆಯಂತೆ.

ಕೃಷಿ ಭೂಮಿಯಲ್ಲಿ ತೇವಾಂಶವಿಲ್ಲ ಎಂದು ರೈತರು ಹೇಳುತ್ತಾರೆ. ಕಳೆದ ಒಂದೆರಡು ತಿಂಗಳಿನಿಂದ ಬಿತ್ತನೆ ಮಾಡಲು ಭೂಮಿ ಹದ ಮಾಡಿ ರೈತ ಸಂಪರ್ಕ ಹಾಗೂ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಖರೀದಿ ಮಾಡಿಕೊಂಡು ವರುಣನ ಆಗಮನಕ್ಕಾಗಿ ಮುಗಿಲತ್ತ ನೋಡುತ್ತಿದ್ದೇವೆ. ತಿಂಗಳಲ್ಲಿ ಒಮ್ಮೆ ಉತ್ತಮ ಮಳೆಯಾದರೆ ಸಾಕು ಅದನ್ನೇ ಮುಂದಿಟ್ಟುಕೊಂಡು ಮುಂಗಾರು ಉತ್ತಮವಾಗಿದೆ ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡುತ್ತಾರೆ ಎಂಬುದು ರೈತರ ವಾದವಾಗಿದೆ.

ಹೋಬಳಿವಾರು ಮಳೆ ವಿವರ: ಕಸಬಾ ಹೋಬಳಿ 220 ಮಿ.ಮೀ.ಗೆ 220 ಮಳೆಯಾಗಿದೆ. ಬಾಗೂರು 207 ಮಳೆಯಾಗಬೇಕಿದ್ದು 244 ಮಿ.ಮೀ. ಬಂದಿದ್ದು ಅಂದರೆ ಶೇ.18 ಮಿ.ಮೀ. ಹೆಚ್ಚುವರಿಯಾಗಿದೆ. ನುಗ್ಗೇಹಳ್ಳಿ 192ಕ್ಕೆ 211 ಅಂದರೆ ಶೇ.10 ರಷ್ಟು ಹೆಚ್ಚು ಮಳೆಯಾಗಿದೆ. ದಂಡಿಗನಹಳ್ಳಿ ಹೋಬಳಿ 222 ಕ್ಕೆ 208 ಶೇ.7 ರಷ್ಟು ಕಡಿಮೆ ಮಳೆಯಾಗಿದೆ. ಹಿರೀಸಾವೆ 173ಕ್ಕೆ 158 ಶೇ.9 ರಷ್ಟು ಮಳೆ ಕೊರತೆಯಾಗಿದೆ, ಶ್ರವಣಬೆಳಗೊಳ 216 ಮಿ.ಮೀ.ಗೆ 209 ರಷ್ಟು ಮಳೆಯಾಗಿದ್ದು ಶೇ.3ರಷ್ಟು ಮಾತ್ರ ಮಳೆ ಕೊರತೆಯಿದೆ. ಒಟ್ಟಾರೆ ತಾಲೂಕಿನಲ್ಲಿ ಕೃಷಿ ಚಟುವಟಿಕೆಗೆ ಅಗತ್ಯ ಮಳೆ 204 ಮಿ.ಮೀ. ಬೇಕಿದ್ದು 208 ಮಿ.ಮೀ. ಮಳೆಯಾಗುವ ಮೂಲಕ ಶೇ.2 ರಷ್ಟು ಅಧಿಕ ಮಳೆ ಸುರಿದಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಅಂಕಿ ಅಂಶ ಸಮೇತ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ಬಿತ್ತನೆ ಪ್ರಮಾಣ ಇಳಿಮುಖ: ತಾಲೂಕಿನಲ್ಲಿ 40,325 ಹೆಕ್ಟೇರ್‌ ಬಿತ್ತನೆ ಆಗಬೇಕಿತ್ತು.ಆದರೆ 19,555 ಹೆಕ್ಟೇರ್‌ ಪ್ರದೇಶದಲ್ಲಿ ತಾಲೂಕಿನ ರೈತರು ಬಿತ್ತನೆ ಮಾಡಿದ್ದಾರೆ. ಮೆಕ್ಕೆಜೋಳ 8,500 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯಿದ್ದು 890 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ, ತೊಗರಿ 400ಕ್ಕೆ 70 ಹಕ್ಟೇರ್‌ ಬಿತ್ತನೆ, ಉದ್ದು 600ಕ್ಕೆ 37.5 ಬಿತ್ತನೆ, ಅಲಸಂದೆ 1,100ಕ್ಕೆ 600, ಹೆಸರು 800ಕ್ಕೆ 140, ಎಳ್ಳು 800ಕ್ಕೆ 13, ಕಬ್ಬು 875 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಬೇಕಿದ್ದು ಹಳೆಯ ಕೂಳೆ ಕಬ್ಬು ಹಾಗೂ ಬಿತ್ತನೆ ಸೇರಿ 155 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ತೋಟಗಾರಿಕೆ ಬೆಳೆಗಳಾದ ಆಲೂಗಡ್ಡೆ 950ಕ್ಕೆ 575, ಟೊಮೆಟೋ 250ಕ್ಕೆ 129, ಈರುಳ್ಳಿ 5ಕ್ಕೆ ಶ್ಯೂನ್ಯ, ಮೆಣಸಿನಕಾಯಿ 100ಕ್ಕೆ 49, ಶುಂಠಿಗೆ ಗುರಿ ನಿಗದಿಯಾಗಿಲ್ಲ ಆದರೂ 300 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ.

ಬೀಜ ಖರೀದಿ ಬಿಲ್ ನೀಡುತ್ತಿಲ್ಲ: ತಾಲೂಕಿನಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಇಲಾಖೆ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರದ ಮೂಲಕ ರಿಯಾಯಿತಿ ದರ‌ದಲ್ಲಿ ರೈತರಿಗೆ ಬಿತ್ತನೆ ಬೀಜವ‌ನ್ನು ವಿತರಣೆ ಮಾಡಲಾಗಿದೆ.

ರೈತರು ಬಿತ್ತನೆಗಾಗಿ ನಾನಾ ಬೀಜವನ್ನು ಕೊಂಡು ಕೊಳ್ಳುವಾಗ ಸರ್ಕಾರ ನಿಯಮದ ಪ್ರಕಾರ ರಿಯಾಯಿತಿ ದರದಲ್ಲಿ ಬೀಜ ಕೊಳ್ಳುವ ರೈತರಿಗೆ ಆಯಾ ರೈತ ಸಂಪರ್ಕ ಕೇಂದ್ರದಿಂದ ವಿತರಣೆ ಬಿಲ್ ನೀಡಬೇಕು ಆದರೆ ಕೆಲವು ಸಲ ಬಿಳಿಹಾಳೆಯಲ್ಲಿ ಬೀಜದ ದರವನ್ನು ನಮೂದಿಸಿ ಕೊಡಲಾಗುತ್ತಿದೆ. ನಕಲಿ ಬೀಜಗಳ ಮಾರಾಟ ಕಂಡು ಬಂದಿಲ್ಲವಾದರೂ ಬಿಲ್ ನೀಡದೇ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಮಳೆಯಿಲ್ಲದೇ ಪರದಾಟ: ಒಣಭೂಮಿ ಹಾಗೂ ನೀರಾವರಿ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ರೈತರು ಮಳೆಯಿಲ್ಲದೇ ಸಂಕಟ ಪಡುತ್ತಿದ್ದಾರೆ, ಬಿತ್ತದೆಯೇ ಸುಮ್ಮನೆ ಕೂತಿದ್ದರೆ ಒಳಿತಾಗುತ್ತಿತ್ತು. ಆದರೆ ಬಿತ್ತನೆ ಮಾಡಿ ಇದ್ದ ಹಣ ಖರ್ಚು ಮಾಡಿ ಕೈ ಸುಟ್ಟುಕೊಳ್ಳುವಂತಾಗಿದೆ ಎನ್ನುತ್ತಿದ್ದಾರೆ. ಬಿತ್ತನೆಗೆ ಹಣ ಖರ್ಚು ಮಾಡಿದ ಕೃಷಿಕರು ನಷ್ಟಕ್ಕೆ ಸಿಲುಕಿದ್ದಾರೆ. ಒಣಹವೆಗೆ ಬೆಳೆ ಬಾಡಿಹೋಗುತ್ತಿದೆ. ಆಷಾಢದ ಗಾಳಿ ಬೀಸುತ್ತಿದ್ದು ಮೋಡ ಕವಿದ ವಾತಾವರಣವಿದೆ ಹೊರತು ಮಳೆ ಬರುತ್ತಿಲ್ಲ.

ಮಳೆ ನಿರೀಕ್ಷೆ: ತಾಲೂಕಿನ ನುಗ್ಗೇಹಳ್ಳಿ ಹಾಗೂ ಬಾಗೂರು ಹೋಬಳಿಯಲ್ಲಿ ಕಳೆದ 10 ದಿವಸದ ಹಿಂದೆ ಉತ್ತಮ ಮಳೆ ಸುರಿದಿದ್ದರಿಂದ ರಾಸುಗಳ ಮೇವು ಬೆಳೆಯಲು ರೈತರು ಮುಂದಾಗಿದ್ದಾರೆ.

ಪೂರ್ಣ ಮುಂಗಾರು ಬೆಳೆಗಳಾದ ಹೆಸರು, ಅಲಸಂದೆ, ಉದ್ದು, ಎಳ್ಳು ಬೆಳೆದಿದ್ದು ಮಳೆ ಕೊರತೆಯಿಂದ ಅವು ರೈತರ ಕೈ ಸೇರುವ ಲಕ್ಷಣಗಳ ಕಾಣುತ್ತಿಲ್ಲ. ಕೊಳವೆ ಬಾವಿ ಹೊಂದಿರುವ ರೈತರು ಬಿತ್ತನೆ ಅವಧಿ ಮೀರಬಾರದು ಎಂದು ಕಡಿಮೆ ತೇವಾಂಶದಲ್ಲಿಯೇ ಅಲೂಗಡ್ಡೆ, ಮೆಕ್ಕಜೋಳ ಬಿತ್ತನೆ ಮಾಡಿ ಮಳೆ ಆಗಮನದ ನಿರೀಕ್ಷೆಯಲ್ಲಿದ್ದಾರೆ.

 

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.