ತಾಲೂಕಿನ ರೈತರಿಗೆ ವರದಾನವಾದ ಫ‌ಸಲ್‌ ಬಿಮಾ


Team Udayavani, Oct 6, 2019, 3:00 AM IST

talukina

ಚನ್ನರಾಯಪಟ್ಟಣ: 2017-18 ಸಾಲಿನಲ್ಲಿ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯಲ್ಲಿ ತಾಲೂಕಿಗೆ 1.14 ಕೋಟಿ ರೂ.ಗಳನ್ನು 2,604 ಮಂದಿ ರೈತರ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರ ಜಮಾ ಮಾಡಿದೆ. ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯಲ್ಲಿ ವಿಮೆ ಹಣ ಪಾವತಿ ಮಾಡಿದ್ದ ತಾಲೂಕಿನ ಬಹುತೇಕ ರೈತರಿಗೆ ಈಗಾಗಲೆ ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಮೆ ಪರಿಹಾರವನ್ನು ಸಕಾಲಕ್ಕೆ ಪ್ರತಿ ವರ್ಷವೂ ನೀಡುತ್ತಿದ್ದು, ಪ್ರಸಕ್ತ ವರ್ಷ ವಿಮೆ ಪರಿಹಾರ ಹಣ ಹೆಚ್ಚು ನೀಡಿದೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ರೈತರು ನೀಡಿರುವ ರಾಷ್ಟ್ರೀಕೃತ ಬ್ಯಾಂಕಿನ ಖಾತೆಗೆ ವಿಮೆ ಪರಿಹಾರ ಹಣ ಜಮಾ ಮಾಡಲಾಗಿದೆ.

ಮುಸುಕಿನ ಜೋಳ, ರಾಗಿ, ಆಲೂಗಡ್ಡೆ, ಹುರಳಿ, ಹೆಸರು, ಅಲಸಂದೆ, ಭತ್ತ ಸೇರಿದಂತೆ ವಿವಿಧ ಬೆಳೆಗಳಿಗೆ ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆಯಲ್ಲಿ ಸಾವಿರಾರು ರೈತರು ವಿಮೆ ಮಾಡಿಸಿದ್ದರು. ರೈತರು ಖಾತೆ ಹೊಂದಿರುವ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬ್ಯಾಲೆನ್ಸ್‌ ಮಾಹಿತಿ ಪಡೆದಾಗ ಹಣ ತಮ್ಮ ಖಾತೆಗೆ ಸಂದಾಯವಾ ಗಿರುವುದು ತಿಳಿದಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಹಣ ಜಮೆ ಆಗಿರವಬಹುದೆಂದು ತಿಳಿದ ರೈತರು ಕೃಷಿ ಇಲಾಖೆ ಸಂಪರ್ಕಿಸಿದಾಗ ಬೆಳೆವಿಮೆ ಪರಿಹಾರ ಹಣ ಬಂದಿರುವುದಾಗಿ ತಿಳಿಸಿದ್ದಾರೆ.

2016-17ರಲ್ಲಿ 67.89 ಲಕ್ಷ ರೂ.: 2016-17 ರಲ್ಲಿ ತಾಲೂಕಿನ ಕಸಬಾ ಹೋಬಳಿಯಲ್ಲಿ 544 ರೈತರಿಗೆ 12.67 ಲಕ್ಷ ರೂ., ದಂಡಿಗನಹಳ್ಳಿ ಹೋಬಳಿ 1383 ರೈತರ ಖಾತೆಗೆ 12.75 ಲಕ್ಷ ರೂ., ನುಗ್ಗೇಹಳ್ಳಿ ಹೋಬಳಿ 625 ರೈತರಿಗೆ 14.58 ಲಕ್ಷ, ಬಾಗೂರು 583 ಮಂದಿಗೆ 11.84 ಲಕ್ಷ ರೂ., ಶ್ರವಣಬೆಳಗೊಳ ಹೋಬಳಿಯ 168 ಕೃಷಿಕರಿಗೆ 12.03 ಲಕ್ಷ ರೂ., ಹಿರೀಸಾವೆ ಹೋಬಳಿ 55 ರೈತರ ಖಾತೆಗೆ 4.02 ಲಕ್ಷ ರೂ. ಬೆಳೆ ವಿಮೆ ಪರಿಹಾರ ದೊರೆಯುವ ಮೂಲಕ ಒಟ್ಟಾರೆಯಾಗಿ 67.89 ರೂ. ಕೇಂದ್ರ ಸರ್ಕಾರ ನೀಡಿದೆ.

2017-18ರಲ್ಲಿ 1.14 ಕೋಟಿ ಪರಿಹಾರ: ತಾಲೂಕಿನ ಕಸಬಾ ಹೋಬಳಿಯಲ್ಲಿ 336 ರೈತರು 250 ಎಕರೆ ಪ್ರದೇಶಕ್ಕೆ 52 ಸಾವಿರ ವಿಮೆ ಪ್ರೀಮಿಯಂ ಕಟ್ಟಿದ್ದು 27.86 ಲಕ್ಷ ರೂ. ಬೆಳೆವಿಮೆ ಪರಿಹಾರ ಹಣ ದೊರೆತಿದೆ. ದಂಡಿಗನಹಳ್ಳಿ ಹೋಬಳಿಯಲ್ಲಿ 880 ರೈತರು 756 ಎಕರೆ ಪ್ರದೇಶಕ್ಕೆ 1.34 ಲಕ್ಷ ರೂ. ಪ್ರೀಮಿಯಂ ಕಟ್ಟಿದ್ದು 4.64 ಲಕ್ಷ ರೂ. ಬೆಳೆವಿಮೆ ಪರಿಹಾರ ದೊರೆತಿದೆ, ಬಾಗೂರು 486 ರೈತರು 425 ಎಕರೆಗೆ 64 ಸಾವಿರ ಪ್ರೀಮಿಯಂ ಕಟ್ಟಿದ್ದು 13.58 ಲಕ್ಷ ರೂ. ಪರಿಹಾರ ದೊರೆತಿದೆ.

ಹಿರೀಸಾವೆ ಹೋಬಳಿ 379 ರೈತರು 295 ಎಕರೆ ಪ್ರದೇಶಕ್ಕೆ 54 ಸಾವಿರ ಪ್ರೀಮಿಯಂ ಕಟ್ಟಿದ್ದು 3.19 ಲಕ್ಷ ಪರಿಹಾರ ದೊರೆತಿದೆ, ನುಗ್ಗೇಹಳ್ಳಿ 415 ರೈತರು 328 ಎಕರೆಗೆ 62 ಸಾವಿರ ವಿಮೆ ಹಣ ಕಟ್ಟಿದ್ದು 9.84 ಲಕ್ಷ ರೂ. ದೊರೆತಿದೆ ಶ್ರವಣಬೆಳಗೊಳ ಹೋಬಳಿಯಲ್ಲಿ 108 ರೈತರು 95 ಎಕರೆ ಪ್ರದೇಶಕ್ಕೆ 20 ಸಾವಿರ ವಿಮೆ ಹಣ ಕಟ್ಟಿದ್ದು 54.89 ಲಕ್ಷ ರೂ. ಬೆಳೆವಿಮೆ ಪರಿಹಾರ ದೊರೆತಿದೆ.

ಪ್ರಸಕ್ತ ವರ್ಷವೂ ವಿಮೆ ಮಾಡಿಸಿದ್ದಾರೆ: ತಾಲೂಕಿನ ಆರು ಹೋಬಳಿಯಿಂದ 1,507 ರೈತರು 3,300 ಎಕರೆ ಪ್ರದೇಶಕ್ಕೆ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯಲ್ಲಿ 4.33 ಲಕ್ಷ ರೂ. ವಿಮೆಯ ಪ್ರೀಮಿಯಂ ಕಟ್ಟಿದ್ದಾರೆ. ತಾಲೂಕಿನಲ್ಲಿ ದಂಡಿಗನಹಳ್ಳಿ ಹೋಬಳಿ ಅತಿ ಹೆಚ್ಚು 1383 ಎಕರೆ ಕೃಷಿ ಭೂಮಿಗೆ ಪ್ರೀಮಿಯಂ ನೀಡಿದ್ದರೆ ಶ್ರವಣಬೆಳಗೊಳ ಅತಿ ಕಡಿಮೆ 168 ಎಕರೆ ಪ್ರದೇಶಕ್ಕೆ ಬೆಳೆವಿಮೆ ಮಾಡಿಸಿದ್ದಾರೆ.

ಸಮೀಕ್ಷೆ ನಡೆಯುತ್ತಿದೆ: ಪ್ರಸಕ್ತ ವರ್ಷ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯ ಸಮೀಕ್ಷೆ ಈಗಾಗಲೇ ನಡೆಯುತ್ತಿದ್ದು ಎಷ್ಟು ಪ್ರಮಾಣದಲ್ಲಿ ಬೆಳೆ ಹಾಳಾಗಿದೆ ಎಂಬ ವರದಿಯನ್ನು ಹೋಬಳಿಯ ರೈತ ಸಂಪರ್ಕ ಕೇಂದ್ರಗಳು ತಾಲೂಕಿನ ಕೃಷಿ ಇಲಾಖೆ ಮೂಲಕ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರ ಕಚೇರಿಗೆ ವರದಿ ನೀಡಿದ ಮೇಲೆ ಡಿಸೆಂಬರ್‌ ಅಂತ್ಯಕ್ಕೆ ವಿಮೆಯ ಪರಿಹಾರ ಹಣ ನೇರವಾಗಿ ವಿಮೆ ಮಾಡಿಸಿರುವ ರೈತರು ಖಾತೆಗೆ ಜಮೆಯಾಗಲಿದೆ.

ಎಲ್ಲೆಲ್ಲಿ ಎಷ್ಟು ಮಂದಿ ಬೆಳೆ ವಿಮೆ ಮಾಡಿಸಿದ್ದಾರೆ: ಹಾಸನ ಜಿಲ್ಲೆಯಲ್ಲಿ ಅರಸೀಕೆರೆ ತಾಲೂಕಿನಲ್ಲಿ 10,922 ಮಂದಿ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಸಕಲೇಶಪುರ ತಾಲೂಕಿನಲ್ಲಿ 2,860 ಮಂದಿ ರೈತರು ವಿಮೆ ಮಾಡಿಸಿದ್ದಾರೆ. ಚನ್ನರಾಯಪಟ್ಟಣದಿಂದ 1,507 ರೈತರು, ಬೇಲೂರು-990,ಆಲೂರು-199, ಅರಕಲಗೂರು-134, ಹಾಸನ-129, ಹೊಳೆನರಸೀಪುರ-79 ಮಂದಿ ರೈತರು ಬೆಳೆ ವಿಮೆ ಮಾಡಿಸಿದ್ದಾರೆ.

ಪ್ರಸಕ್ತ ವರ್ಷ ಉತ್ತಮ ಮಳೆಯಾಗುತ್ತಿದೆ. ಬೆಳೆವಿಮೆ ಮಾಡಿಸುವು ಅಗತ್ಯವಿಲ್ಲ ಎಂದು ಹಲವು ಮಂದಿ ರೈತರು ಆಲೋಚನೆಯಲ್ಲಿದ್ದರು. ಆದರೆ ಮುಸುಕಿನ ಜೋಳೆ ಹಾಗೂ ರಾಗಿ ಬೆಳೆಗೆ ಸೈನಿಕ ಹುಳು ಹಾವಳಿ ಹೆಚ್ಚಿದ್ದು, ಬೆಳೆ ನಾಶವಾಗುತ್ತಿದೆ. ಹಾಗಾಗಿ ರೈತರು ತಮ್ಮ ಬೆಳೆಗೆ ವಿಮೆ ಮಾಡಿಸುವ ಮೂಲಕ ಕೃಷಿಯಲ್ಲಿ ಮುಂದಾಗುವ ನಷ್ಟಕ್ಕೆ ಪರಿಹಾರ ಪಡೆಯಲು ಆಸಕ್ತಿ ವಹಿಸಿದ್ದಾರೆ.
-ಎಫ್.ಕೆ.ಗುರುಸಿದ್ದಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ

ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆ ರೈತರ ಸಂಕಷ್ಟಕ್ಕೆ ವರವಾಗುತ್ತಿದೆ. ಆದರೆ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಅಪಪ್ರಚಾರದಿಂದ ಹೆಚ್ಚು ರೈತರು ವಿಮೆ ಮಾಡಿಸಲು ಮುಂದಾಗುತ್ತಿಲ್ಲ. ಕಳೆದ 3 ವರ್ಷದಿಂದ ಕೇಂದ್ರ ಸರ್ಕಾರ ಸಕಾಲಕ್ಕೆ ವಿಮೆ ಹಣವನ್ನು ನೇರವಾಗಿ ಬ್ಯಾಂಕ್‌ ಖಾತೆಗೆ ಜಮೆ ಮಾಡುತ್ತಿದೆ. ರೈತರು ಸ್ವಯಂ ಪ್ರೇರಣೆಯಿಂದ ಬೆಳೆವಿಮೆ ಮಾಡಿಸ ಬೇಕು.
-ನಾಗರಾಜು, ಅಣ್ಣೇನಹಳ್ಳಿ ಗ್ರಾಮದ ಕೃಷಿಕ

* ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.