ಬಂಡೀಪುರದಲ್ಲಿ ರಾತ್ರಿ ಸಫಾರಿ: ಚಿತ್ರನಟ ಧನ್ವೀರ್ ವಿರುದ್ದ ಪ್ರಕರಣ ದಾಖಲು
Team Udayavani, Oct 24, 2020, 6:29 PM IST
ಹುಣಸೂರು: ನಾಗರಹೊಳೆ ಉದ್ಯಾನದ ಮತ್ತಿಗೋಡು ಸಾಕಾನೆ ಶಿಬಿರದ ಆನೆ ಮಹೇಂದ್ರನ ಮೇಲೆ ಕುಳಿತು ವಿಡಿಯೋ ಮಾಡಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಧನ್ವಿರ್ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉದ್ಯಾನದ ಹುಲಿಯೋಜನೆ ನಿರ್ದೇಶಕ ಡಿ ಮಹೇಶ್ ಕುಮಾರ್ ತಿಳಿಸಿದ್ದಾರೆ.
2020ರ ಆಕ್ಟೋಬರ್ 23 ರಂದು ಚಿತ್ರನಟ ಧನ್ವೀರ್ ಸಾಕಾನೆ ಮಹೇಂದ್ರನ ಮೇಲೆ ಕುಳಿತಿರುವ ವಿಡಿಯೋ ವೈರಲ್ ಆಗಿದ್ದು ವನ್ಯಜೀವಿ ಪ್ರೀಯರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಮಾಹಿತಿ ಪಡೆದ ಡಿ.ಸಿ.ಎಫ್. ರವರು ಧನ್ವೀರ್. ವಿಶ್ವಾಸ್ ಐಯ್ಯರ್. ದರ್ಶನ್ ಬಿನ್ ನಂದಕುಮಾರ್ ಮತ್ತಿತರ ಮೂವರ ವಿರುದ್ದ ವನ್ಯಜೀವಿ ಸಂರಕ್ಷಾಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಅನಧಿಕೃತವಾಗಿ ಸರ್ಕಾರಿ ಮೀಸಲು ಅರಣ್ಯದ ಮತ್ತಿಗೋಡು ವಲಯದ ಸಾಕಾನೆ ಮೇಲೆ ಕುಳಿತುಕೊಳ್ಳಲು ಸಹಕರಿಸಿದ ಬಗ್ಗೆ ಶಿಬಿರದ ಉಸ್ತುವಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನೋಟೀಸ್ ನೀಡಲಾಗಿದ್ದು. ಭಾಗಿಯಾಗಿರುವ ಸಿಬ್ಬಂದಿಗಳ ವಿರುದ್ದ ತನಿಖೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದೆಂದು ಉದಯವಾಣಿಗೆ ಡಿ.ಸಿ.ಎಫ್ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ