ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಗ್ರಾಮಗಳ ರಸ್ತೆ ಸರಿಪಡಿಸಿ


Team Udayavani, Jan 16, 2021, 1:14 PM IST

Fix the road to the villages that connect to the highway

ಆಲೂರು: ತಾಲೂಕಿನಲ್ಲಿ ಹಾದುಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಕ್ಕಪಕ್ಕದ ಜಮೀನು, ನಿವೇಶನಕ್ಕೆ ಈಗ ಬಂಗಾರದ ಬೆಲೆ ಬಂದಿದೆ. ಆದರೆ, ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಮಾತ್ರ ತೀವ್ರವಾಗಿ ಹದಗೆಟ್ಟಿದ್ದು, ಸಂಚಾರಕ್ಕೆ ತೀವ್ರ ತೊಂದರೆ ಆಗಿದೆ. ಇತ್ತೀಚೆಗೆ ಹೆದ್ದಾರಿಯಲ್ಲಿನ ತಿರುವುಗಳನ್ನು ನೇರವಾಗಿ ಮಾಡಲಾಗುತ್ತದೆ.

ಅಲ್ಲದೆ, ದ್ವಿಪಥವಾಗಿದ್ದ ಹೆದ್ದಾರಿಯನ್ನು ಚತುಷ್ಪಥ ಮಾಡುತ್ತಿರುವ ಕಾರಣ, ಕೆಲವು ಗ್ರಾಮಗಳು ಹೆದ್ದಾರಿಗೆ ಹತ್ತಿರವಾಗಿದೆ. ಹೀಗಾಗಿ ಆ ಗ್ರಾಮದಲ್ಲಿನ ಜಮೀನಿಗೆ, ಸೈಟುಗಳಿಗೆ ಭಾರೀ ಮೌಲ್ಯ ಬಂದಿದೆ. ಬಾಚನಹಳ್ಳಿ, ಸಿಂಗಾಪುರ, ನೇರಲಕೆರೆ, ಚೌಲಗೆರೆ, ಭರತವಳ್ಳಿ, ಕಂದಲಿ, ಮಾವನೂರು, ಭೈರಾಪುರ, ತಿಮ್ಮನಹಳ್ಳಿ, ಸೇರಿದಂತೆ ಹಲವು ಗ್ರಾಮಗಳ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಈ ಮೊದಲು ಒಂದು ಎಕರೆ ಭೂಮಿಗೆ 20-25 ಲಕ್ಷ ರೂ. ಬೆಲೆ ಇತ್ತು.

ಈಗ ಒಂದು ಎಕರೆ ಭೂಮಿ ಬೆಲೆ 6 ಕೋಟಿ ರೂ.ಗೂ ಹೆಚ್ಚಿದೆ. ಈ ಹಿಂದೆ ಕೇವಲ ಸಾವಿರ ರೂ.ಗೂ ಯೋಚನೆ ಮಾಡುತ್ತಿದ್ದವರು ಈಗ ಕೋಟ್ಯಧಿಪತಿಗಳಾಗಿದ್ದಾರೆ. ಅಲ್ಲದೆ, ರೂಪಾಯಿ ಲೆಕ್ಕದಲ್ಲಿ ಮಾತನಾಡುತ್ತಿದ್ದವರು, ಕೋಟಿ ಲೆಕ್ಕದಲ್ಲಿ ಮಾತನಾಡುತ್ತಿದ್ದಾರೆ. ಈ ಹೆದ್ದಾರಿ ಪಕ್ಕದ ಗ್ರಾಮಗಳ ಜನರ ಜೀವನವೇ ಬದಲಾಗಿದೆ. ನಗರೀಕರಣದ ವಾತಾವರಣ ಬೀರಿದೆ. ರಸ್ತೆಗೆಂದು ಜಮೀನು ಕಳೆದು ಕೊಂಡವರಿಗೂ ಉತ್ತಮ ಪರಿಹಾರ ಸಿಕ್ಕಿರು ವುದರಿಂದ ಇವರೆಲ್ಲರ ಬದುಕು ಬಂಗಾರವಾಗಿದೆ.

ಇದನ್ನೂ ಓದಿ:2ನೇ ಡೋಸ್ ಪಡೆಯಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನಿರ್ಲಕ್ಷ್ಯ ಬೇಡ: ಪ್ರಧಾನಿ

ಮೂಲ ಸೌಲಭ್ಯ ಇಲ್ಲ: ಹೆದ್ದಾರಿಸಮೀಪವಿರುವ ಹಲವು ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವುದು ರಾಷ್ಟ್ರೀಯ ಹೆದ್ದಾರಿಪ್ರಾಧಿಕಾರದ ಜವಾಬ್ದಾರಿಯಾಗಿದೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿಗೆ ಸೇರಿರುವ ಗ್ರಾಮಗಳ ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆ ಆಗಿದೆ.

ಹೆದ್ದಾರಿಗೆ ಹೊಂದಿಕೊಂಡ ಭರತವಳ್ಳಿ ಗ್ರಾಮದಲ್ಲಿ 100-120 ಕುಟುಂಬಗಳಿದ್ದು, ಸಾವಿರದಷ್ಟು ಜನಸಂಖ್ಯೆ ಇದೆ. ಗ್ರಾಮಕ್ಕೆ ಅಗತ್ಯವಿರುವ ಕೆಲ ಸೌಲಭ್ಯಗಳಿಂದ ವಂಚಿತವಾಗಿದೆ. ಹೆದ್ದಾರಿಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಲಿಂಕ್‌ ರಸ್ತೆಯನ್ನು ಜಲ್ಲಿಯಿಂದ ನಿರ್ಮಾಣ ಮಾಡಿರುವುದರಿಂದ ತಿರುಗಾಡಲು ತೊಂದರೆಯಾಗಿದೆ. ರಸ್ತೆಗೆ ತಕ್ಕಂತೆ ಮೋರಿ ನಿರ್ಮಾಣವಾಗಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಗತ್ಯ ಸೌಲಭ್ಯ ಒದಗಿಸಬೇಕು ಎನ್ನುತ್ತಾರೆ ಸ್ಥಳೀಯ ನಿವಾಸಿಗಳಾದ ಪುಟ್ಟೇಗೌಡ, ರಮೇಶ್‌ ರವರು.

ಟಿ.ಕೆ.ಕುಮಾರಸ್ವಾಮಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.