ಸೋತು ಗೆದ್ದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಮಂಜುಳಾ
Team Udayavani, Dec 31, 2020, 12:26 PM IST
ಸಕಲೇಶಪುರ: ಪರಿಶಿಷ್ಟ ಜಾತಿ ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ತಾಪಂ ಮಾಜಿ ಅಧ್ಯಕ್ಷೆಯೊಬ್ಬರು ಸೋತು ಗೆದ್ದಿರುವ ವಿಶೇಷ ಪ್ರಸಂಗ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ನಡೆದಿದೆ.
ಒಂದೇ ವಾರ್ಡ್ನಲ್ಲಿ 2 ಸದಸ್ಯ ಸ್ಥಾನ ಇದ್ದು, ಅದರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಿಂತ ಮಂಜುಳಾ ಹೆಚ್ಚು ಮತ ಪಡೆದಿದ್ದರಿಂದ ಚುನಾವಣೆ ಅಧಿಕಾರಿಗಳು ಮಂಜುಳಾ ಅವರನ್ನೇ ವಿಜಯಿ ಎಂದು ಘೋಷಿಸಿದರು.
2015ರ ಸಾಲಿನಲ್ಲಿ ತಾಪಂ ಅಧ್ಯಕ್ಷೆ ಆಗಿದ್ದ ಮಂಜುಳಾ, ಗ್ರಾಪಂ ಚುನಾವಣೆಯಲ್ಲಿ ಎಸ್ಸಿ ಮಹಿಳೆಗೆ ಮೀಸಲಾಗಿದ್ದ ಬೆಳಗೋಡು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರು 146 ಮತ ಪಡೆದರೆ, ಎದುರಾಳಿ ಪ್ರೇಮಾ 147 ಮತ ಪಡೆದು ಗೆಲುವು ಸಾಧಿಸಿದ್ದರು. ಇದರಿಂದ
ಸಮಾಧಾನಗೊಳ್ಳದ ಮಂಜುಳಾ ಮರು ಮತಗಳ ಎಣಿಕೆಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಅದೇ ವಾರ್ಡ್ ನ ಸಾಮಾನ್ಯ ಅಭ್ಯರ್ಥಿ ನಿಸಾರ್ (117) ತನ್ನ ಪ್ರತಿಸ್ಪರ್ಧಿ ವಿರುದ್ಧ ಹೆಚ್ಚು ಪಡೆದರೂ ಮಂಜುಳಾಗಿಂತ ಕಡಿಮೆ ಮತ ಪಡೆದಿದ್ದರಿಂದ
ಮೀಸಲಾತಿ ನಿಯಮದಂತೆ ಸೋಲುಂಡರು.
ಇದನ್ನೂ ಓದಿ:ಕೋಲಾರ : ಖಾಸಗಿ ಕಂಪನಿ ಎಚ್ಆರ್ ಈಗ ಗ್ರಾಮ ಪಂಚಾಯತ್ ಸದಸ್ಯ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ