ಇಂದಿನಿಂದ 25 ಸಾವಿರ ಲೀ. ಹಾಲು ಉಚಿತ ವಿತರಣೆ
Team Udayavani, Apr 4, 2020, 12:51 PM IST
ಹಾಸನ: ಜಿಲ್ಲೆಯಲ್ಲಿ ಅಧಿಸೂಚಿತ ಹಾಗೂ ಗುರುತಿಸಲ್ಪಟ್ಟ ಕೊಳಗೇರಿಗಳ ನಿವಾಸಿಗಳು ಹಾಗೂ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಶನಿವಾರದಿಂದ ಏ.14 ರವರೆಗೆ ಉಚಿತವಾಗಿ 25 ಸಾವಿರ ಲೀ. ಹಾಲು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹಾಲು ವಿತರಿಸಲು ಸೂಚಿಸಲಾಗಿದ್ದು, ಪ್ರತಿ ತಾಲೂಕುಗಳಲ್ಲಿ ತಹಶೀಲ್ದಾರ್ರ ನೇತೃತ್ವದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳು ಇದರ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಲೋಪವಿಲ್ಲದಂತೆ ವಿತರಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ತಾಲೂಕುವಾರು ಒಟ್ಟು 29ಸಾವಿರ ಲೀ.ಗೆ ಬೇಡಿಕೆ ಸಲ್ಲಿಸಲಾಗಿದೆ. ಆದರೆ ಜಿಲ್ಲೆಗೆ 25 ಸಾವಿರ ಲೀ. ಹಾಲು ವಿತರಣೆಯ ಗುರಿ ನಿಗದಿ ಪಡಿಸಲಾಗಿದ್ದು, ಬೆಳಗ್ಗೆ 6 ಗಂಟೆ ಒಳಗೆ ಹಾಲು ಪೂರೈಕೆಯಾಗಲಿದ್ದು 8 ಗಂಟೆ ಒಳಗೆ ಅದನ್ನು ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಅರಸಿಕೆರೆ 4,050 ಲೀ., ಅರಕಲಗೂಡು 2,750ಲೀಟರ್. ಆಲೂರು 900 ಲೀ. ಬೇಲೂರು – 3,500 ಲೀ. ಚನ್ನರಾಯಪಟ್ಟಣ 3,300 ಲೀ. ಹಾಸನ 6,300 ಲೀ. ಹೊಳೆ ನರಸೀಪುರ 3,000 ಲೀ. ಹಾಗೂ ಸಕಲೇಶಪುರ ತಾಲೂಕಿಗೆ 1,200 ಲಿಟರ್. ಹಾಲು ಉಚಿತವಾಗಿ ವಿತರಣೆ ಮಾಡಲು ರವಾನೆಯಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ