ಪ್ರಧಾನಿ ಮೋದಿಗೆ ಗರ್ವ: ದೇವೇಗೌಡ ಆರೋಪ


Team Udayavani, Feb 10, 2019, 7:20 AM IST

pradhani.jpg

ಹಾಸನ: ಪ್ರಧಾನಿ ಮೋದಿ ಅವರು 5 ವರ್ಷದಲ್ಲೇ ಬಹುದೊಡ್ಡ ಸಾಧನೆ ಮಾಡಿದ್ದೇನೆ ಎಂದು ಮೋದಿ ಅವರು ಬೀಗುತ್ತಿದ್ದಾರೆ. ಹಿಂದೆ ಪ್ರಧಾನಿಯಾಗಿದ್ದವರು ಏನೂ ಮಾಡಿಯೇ ಇಲ್ಲವೇ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತರಾಟೆಗೆ ತೆಗೆದುಕೊಂಡರು.

ಹೊಳೆನರಸೀಪುರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಘೋಷಣೆಯಾದ ದಿನ ಜವಾಹರ್‌ ಲಾಲ್‌ ನೆಹರೂ ಅವರು ಪ್ರಪಂಚವೆಲ್ಲಾ ಮಲಗಿದೆ. ಆದರೆ ಭಾರತ ಎದ್ದಿದೆ ಎಂದಿದ್ದರು. ದೇಶದ ಮೊದಲ ಪ್ರಧಾನಿಯಾಗಿ ನೆಹರೂ ಅವರೂ ಕೊಡುಗೆ ನೀಡಿದ್ದಾರೆ. ಆದರೆ ನರೇಂದ್ರ ಮೋದಿಯವರಿಗೆ ಎಲ್ಲವನ್ನೂ ನಾನೇ ಮಾಡಿದೆ ಎಂಬ ಗರ್ವ ಬೇಡ. ಗರ್ವಭಂಗ ಆಗುತ್ತದೆ ಎಂದೂ ಎಚ್ಚರಿಸಿದರು.

ಮುಖ್ಯಮಂತ್ರಿ ಸ್ಥಾನ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಕೊಟ್ಟ ವರ. ಜೊತೆಗೆ ಶಿಕ್ಷೆಯೂ ಇದೆ. ಅತ್ಯಂತ ನೋವಿನಿಂದ ಮುಖ್ಯಮಂತ್ರಿಯಾಗಿ ದ್ದಾರೆ. ರೈತರ ಕೃಷಿ ಸಾಲ 44 ಸಾವಿರ ಕೋಟಿ ರೂ. ಮನ್ನಾ ಮಾಡುವುದು ಅಷ್ಟು ಸುಲಭವಲ್ಲ. ಆದರೂ ಪ್ರಧಾನಿ ನರೇಂದ್ರಮೋದಿ ಅವರು ಸಾಲಮನ್ನಾದ ಬಗ್ಗೆ ವ್ಯಂಗ್ಯವಾಡುತ್ತಾರೆ.

ನನ್ನನ್ನೂ ಸೋ ಕಾಲ್ಡ್‌ ಸನ್‌ಆಫ್ ದಿ ಸಾಯಿಲ್‌ ಎಂದು ವ್ಯಂಗ್ಯವಾಡುತ್ತಾರೆ. ಮಣ್ಣಿನ ಮಗ ಎಂದು ನಾನು ಘೋಷಿಸಿಕೊಂಡಿಲ್ಲ ಜನರೇ ನನ್ನನ್ನು ಮಣ್ಣಿನ ಮಗ ಎಂದು ಕರೆದಿದ್ದಾರೆ. ಅದನ್ನು ಒಪ್ಪಿಕೊಂಡಿಯೂ ಇದ್ದಾರೆ. ಅದಕ್ಕೆ ವ್ಯಂಗ್ಯ ಬೇಡ. ಪ್ರಧಾನಿ ಹುದ್ದೆಯ ಘನತೆಯ ಚೌಕಟ್ಟು ಮೀರಿ ಹೋಗಬಾರದು. ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಿವಿಮಾತು ಹೇಳಿದರು.

ಪ್ರಜಾಪ್ರಭುತ್ವದ ಅಣಕ: ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಬಜೆಟ್ ಅಧಿವೇಶನವನ್ನು ಕೇವಲ 9 ದಿನ ನಡೆಸಿದ್ದನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ. ಇದು ಪ್ರಜಾಪ್ರಭುತ್ವದ ಅಣಕ. ಸಂಸತ್ತಿನಲ್ಲಿ ನನ್ನ ಕೊನೆಯ ಭಾಷಣ ಕ್ಕೂ ಹೆಚ್ಚು ಸಮಯ ನೀಡಲಿಲ್ಲ. ಸೋಮವಾರ ಸಂಸತ್ತಿನಲ್ಲಿ ಏನು ಹೇಳಬೇಕೋ ಅದನ್ನು ಹೇಳುತ್ತೇನೆ ಎಂದರು.

ಅತ್ಯುತ್ತಮ ಬಜೆಟ್: ಎಚ್.ಡಿ.ಕುಮಾರಸ್ವಾಮಿ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿದ ಹೊರೆ ನಿಭಾಯಿಸಿ ಜನಪ್ರಿಯ ಕಾರ್ಯಕ್ರಮ ಕೊಡಲು ಕಷ್ಟಪಟ್ಟಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲ ಮನ್ನಾವನ್ನೂ ಮಾಡುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.