ರ್ಯಾಪಿಡ್ ಆ್ಯಂಟಿಜೆನ್ ಕಿಟ್ ನೀಡಿ
Team Udayavani, Jul 24, 2020, 8:24 AM IST
ಚನ್ನರಾಯಪಟ್ಟಣ: ತಾಲೂಕಿಗೆ ರಾಜ್ಯ ಸರ್ಕಾರದಿಂದ 6 ಸಾವಿರ ರ್ಯಾಪಿಡ್ ಆ್ಯಂಟಿಜೆನ್ ಕಿಟ್ ವಿತರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ಆಗ್ರಹಿಸಿದ್ದಾರೆ.
ತಾಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಈವರೆಗೆ ಸರ್ಕಾರ ಕೇವಲ 200 ರ್ಯಾಪಿಡ್ ಆ್ಯಂಟಿಜೆನ್ ಕಿಟ್ ನೀಡಿದೆ, ಇದರೊಂದಿಗೆ ಹೆಚ್ಚುವರಿಯಾಗಿ ಕಿಟ್ ನೀಡಿದರೆ, ಆರ್ಥಿಕ ಹೊರೆ ತಪ್ಪಿಸಲು ಅನುಕೂಲವಾಗಲಿದೆ. ತಾಲೂಕಿನಲ್ಲಿ ದಿನೇ ದಿನೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಿಟ್ ಅಗತ್ಯವಿದೆ ಎಂದರು. ಸರ್ಕಾರಿ ಅಧಿಕಾರಿಗಳಿಂದ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ. ಅಧಿಕಾರಿಗಳ ಜೊತೆಯಲ್ಲಿ ಜನಪ್ರತಿನಿಧಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮುಂದಾಗಬೇಕು, ರಸ್ತೆಯಲ್ಲಿ ಸಂಚಾರ ಮಾಡುವ ವ್ಯಕ್ತಿ ಮಾಸ್ಕ್ ಧರಿಸದಿದ್ದರೆ ಅವರಿಗೆ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದು ತಿಳಿಸಿದರು.
ಮಾನವರಲ್ಲಿ ರೋಗ ನಿರೋಧ ಶಕ್ತಿ ಹೆಚ್ಚಿಸುವ ಆಯುಷ್ ಔಷಧಿಯನ್ನು ರಾಜ್ಯದ ಪ್ರತಿ ಮನೆಗೆ ಉಚಿತವಾಗಿ ವಿತರಣೆ ಮಾಡುವ ಮೂಲಕ ಮುಂದಿನ ತಲೆಮಾರಿಗೆ ಆಯುಷ್ ಚಿಕಿತ್ಸೆ ಬಗ್ಗೆ ಮನವರಿಗೆ ಮಾಡಬೇಕಾಗಿದೆ ಎಂದು ಹೇಳಿದರು.
ಆಯುಷ್ ಔಷಧಿಯನ್ನು ಸರ್ಕಾರಿ ಇಲಾಖೆಗಳಾದ ನ್ಯಾಯಾಬೆಲೆ ಅಂಗಡಿ, ಸರ್ಕಾರಿ ಸ್ವಾಮ್ಯದ ಹಾಲು ಉತ್ಪಾದಕರ ಸಹಕಾರ ಸಂಘ, ಕೃಷಿ ಪತ್ತಿನ ಸಹಕಾರ ಸಂಘ, ಅಂಗನವಾಡಿಗಳ ಮೂಲಕ ರಾಜ್ಯದ ಪ್ರತಿ ಕುಟುಂಬದ ಎಲ್ಲಾ ಸದಸ್ಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಲು ಆಯುಷ್ ಔಷಧಿ ನೀಡಲಿ ಎಂದರು.
ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಆ್ಯಂಬುಲೆನ್ಸ್ ಕೊರತೆ ಉಂಟಾಗಲಿದೆ. ಹಾಗಾಗಿ ಖಾಸಗಿ ಶಾಲಾ ಕಾಲೇಜುಗಳ ವಾಹನವನ್ನು ಜಿಲ್ಲಾಡಳಿತ ಪಡೆದು ಅವುಗಳ ಮೂಲಕ ರೋಗಿಗಳನ್ನು ಆಸ್ಪತ್ರೆಗೆ ಕರೆ ತರುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ತಹಶೀಲ್ದಾರ್ ಜೆ.ಬಿ.ಮಾರುತಿ, ತಾಪಂ ಇಒ ಚಂದ್ರಶೇಖರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು