ಚನ್ನಕೇಶವನ ಪಾದಸ್ಪರ್ಶ ಮಾಡದ ಸೂರ್ಯದೇವ

ಕೇಶವನ ಭಕ್ತರಿಗೆ ಪ್ರತಿ ವರ್ಷ ಸೂರ್ಯರಶ್ಮಿ ಪ್ರವೇಶೋತ್ಸವಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

Team Udayavani, Apr 23, 2022, 6:11 PM IST

ಚನ್ನಕೇಶವನ ಪಾದಸ್ಪರ್ಶ ಮಾಡದ ಸೂರ್ಯದೇವ

ಬೇಲೂರು: ಪ್ರತಿ ವರ್ಷದಂತೆ ಈ ಬಾರಿ ಇಲ್ಲಿನ ವಿಶ್ವ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿ ದೇಗುಲದಲ್ಲಿ ಸೂರ್ಯ ರಶ್ಮಿ ಪ್ರವೇಶೋತ್ಸವ ಶುಕ್ರವಾರ ನಡೆಯಿತು. ಸೂರ್ಯ ರಶ್ಮಿಯ ವಾರ್ಷಿಕ ವಿಸ್ಮಯ ವೀಕ್ಷಿಸಿಲು ನೂರಾರು ಭಕ್ತರು ಆಗಮಿಸಿದ್ದರು. ಆದರೆ, ಸೂರ್ಯ ಮಾತ್ರ ಕೇಶವನ ಪಾದಸ್ಪರ್ಶ ಮಾಡದೆ ಇರುವುದು ಕಾದು ಕುಳಿತ ಭಕ್ತರಿಗೆ ನಿರಾಸೆ ಮೂಡಿಸಿತ್ತು.

ಚನ್ನಕೇಶವಸ್ವಾಮಿ ದೇಗುಲದಲ್ಲಿ ಪ್ರತಿ ವರ್ಷ ನಡೆಯುವ ಸೂರ್ಯರಶ್ಮಿ ಪ್ರವೇಶೋತ್ಸವ ಕೂಡ ಪ್ರಮುಖವಾಗಿದೆ. ಕಾಲ ನಿರ್ಣಯದಂತೆ ಏ.22ರಂದು ದೇಗುಲಕ್ಕೆ ಸೂರ್ಯನ ಕಿರಣಗಳು ಪ್ರವೇಶ ಮಾಡುವ ಕಾರಣದಿಂದ ಇಲ್ಲಿನ ಪ್ರಧಾನ ಅರ್ಚಕರಾದ ಶ್ರೀನಿವಾಸಸ್ವಾಮಿ ಭಟ್ಟರ್‌ ಮುಂಜಾನೆಯೇ ಸ್ವಾಮಿಗೆ ವಿವಿಧ ಪೂಜೆಯ ಜೊತೆ ಅಭಿಷೇಕ ನಡೆಸಿ, ಸೂರ್ಯ ಕಿರಣಗಳಿಗೆ ಮುಕ್ತಾವಕಾಶ ಕಲ್ಪಿಸಿದರೂ ಸೂರ್ಯ ಮಾತ್ರ ಚನ್ನಕೇಶವಸ್ವಾಮಿಯಲ್ಲಿ ಕೋಪಗೊಂಡಂತೆ
ರಾಜಗೋಪುರ ದ ಮೂಲಕ ಧ್ವಜಸ್ತಂಭ, ಗುರುಡಗಂಬ, ಬಲೀಪೀಠ ಪ್ರವೇಶದ್ವಾರ, ನವರಂಗ, ಸುಕನಾಸಿಯಿಂದ ನೇರ ಗರ್ಭಗುಡಿಯನ್ನು ಪ್ರವೇಶಿಸಿ, ಚನ್ನಕೇಶವಸ್ವಾಮಿಯ ಪೀಠದ ಕೇಳಭಾಗದಲ್ಲಿನ ಗುರುಡ ವಾಹನದ ಮೇಲೆ ಸ್ವಲ್ಪ ಮಟ್ಟಿಗೆ ತಾಮ್ರವರ್ಣ ದ ಬೆಳಕು ಚೆಲ್ಲಿ ಸೂರ್ಯದೇವ ಹಿಂದೆತಿರುಗಿದನು.

ವಾರ್ಷಿಕ ವಿಸ್ಮಯ: ಈ ಸಂದರ್ಭದಲ್ಲಿ ದೇಗುಲದ ಅರ್ಚಕರು ಆಮಿಸಿದ ಸರ್ವ ಭಕ್ತರಿಗೆ ಹಾಗೂ ದೇವಾಲಯದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಕ್ಷೀರತೀರ್ಥವನ್ನು ನೀಡಿದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದರು. ದೇಗುಲದ ಪ್ರಧಾನ ಅರ್ಚಕರಾದ ಶ್ರೀನಿವಾಸಸ್ವಾಮಿಭಟ್ಟರ್‌, ಸೂರ್ಯರಶ್ಮಿ ಕಿರಣಗಳು ಬೇಲೂರು ಚನ್ನಕೇಶವ ದೇಗುಲದ ಗರ್ಭಗುಡಿ ಮೂರ್ತಿ ಮೇಲೆ ಪ್ರತಿ ವರ್ಷದ ಉತ್ತರಾಯಣ ಮತ್ತು ದಕ್ಷಿಣಾಯನ ಸಂದರ್ಭದಲ್ಲಿ ಪ್ರವೇಶಿಸುವ ವೇಳೆ ಇಲ್ಲಿನ ಭಕ್ತರು ವಾರ್ಷಿಕ ವಿಸ್ಮಯವೆಂದು ಕರೆಯುತ್ತಾರೆ.

ಉತ್ತರಾಯಣ ಕಾಲದಲ್ಲಿ ಬೇಸಿಗೆ ಹಿನ್ನೆಲೆ ಸೂರ್ಯನ ಕಿರಣಗಳು ಗೋಚರಿಸುತ್ತವೆ. ಆದರೆ ದಕ್ಷಿಣಾಯನ ವೇಳೆ ಮಳೆಗಾಲದ ಸಂದರ್ಭದಲ್ಲಿ ಮೋಡ ಕವಿದ ನಿಟ್ಟಿನಲ್ಲಿ ಕಾಣುವುದಿಲ್ಲ. ಹೊಯ್ಸಳರ ದೇಗುಲಗಳು ಬಹುತೇಕ ಪೂರ್ವಾಭಿಮುಖವಾಗಿದ್ದು, ಸೌರಮಾನದ ಗಣನೆಗಳು ಹಾಗೂ ವಾಸ್ತು ನಿರ್ಮಾಣಗಳಲ್ಲಿನ ಕಾಲ ನಿರ್ಣಯಗಳಿಂದ ನಿಗದಿ ದಿನಾಂಕ ಪತ್ತೆ ಹಚ್ಚಿ ಕೇಶವನ ಭಕ್ತರಿಗೆ ಪ್ರತಿ ವರ್ಷ ಸೂರ್ಯರಶ್ಮಿ ಪ್ರವೇಶೋತ್ಸವಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಸೂರ್ಯ ಕಿರಣ ಪ್ರಕಾಶಿಸಲಿಲ್ಲ: ಕಳೆದ ಎರಡು ವರ್ಷದಿಂದ ಕೋವಿಡ್‌ ಕಾರಣದಿಂದ ಭಕ್ತರಿಗೆ ಪ್ರವೇಶ ಇಲ್ಲದ ಹಿನ್ನೆಲೆ ಈ ಬಾರಿ ಸ್ವಾಮಿಯ ಮೇಲಿನ ಸೂರ್ಯರಶ್ಮಿ ವೀಕ್ಷಿಸಲು ನೂರಾರು ಭಕ್ತರು ದೇಗುಲಕ್ಕೆ ಬಂದಿದ್ದಾರೆ. ಸ್ವಲ್ಪ ಮಟ್ಟಿನ ಮೋಡ ಹಾಗೂ ಮಂಜಿನಿಂದ ಸೂರ್ಯನ ಕಿರಣಗಳು ಅಷ್ಟಾಗಿ ಕಂಡುಬಂದಿಲ್ಲ. ಕಳೆದ ಮೂರು ವರ್ಷದ ಹಿಂದೆ ಸೂರ್ಯ ರಶ್ಮಿಯಿಂದ ಇಡೀ ಕೇಶವನ ವಿಗ್ರಹ ಮೂರ್ತಿ ಚಿನ್ನದ ಬಣ್ಣದಿಂದ ಕಾಣಿಸಿದ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಚನ್ನಕೇಶವಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ಪುರಸಭಾ ಸದಸ್ಯ ಶ್ರೀನಿವಾಸ್‌, ಸಮಿತಿ ಸದಸ್ಯರಾದ ರವಿಶಂಕರ್‌ ಹಾಗೂ ವಿಜಯಲಕ್ಷ್ಮಿ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದು ದೇವರ ಕೃಪೆಗೆ ಪಾತ್ರರಾದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.