ಯೋಗ, ಕ್ರೀಡೆಯಿಂದ ಉತ್ತಮ ಆರೋಗ್ಯ


Team Udayavani, Aug 5, 2019, 3:00 AM IST

yoga-kri

ಚನ್ನರಾಯಪಟ್ಟಣ: ಯಾವ ವ್ಯಕ್ತಿ ನಿತ್ಯ ಪ್ರಾಣಯಾಮ, ಯೋಗ ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಾನೋ ಆತ ಆರೋಗ್ಯವಂತನಾಗಿರುತ್ತಾನೆ ಎಂದು ವಿಧಾನ ಸರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು.

ತಾಲೂಕಿನ ಶ್ರವಣಬೆಳಗೊಳ ಹಡೇನಹಳ್ಳಿ ಗ್ರಾಮದ ಗುಡ್‌ ಸಿಟಿಜನ್‌ ಶಾಲೆಯಲ್ಲಿ ಕ್ರೀಡಾ ಭಾರತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಹ ದಂಡನೆ ಇಲ್ಲದೇ ಹೋದರೆ ರೋಗಕ್ಕೆ ತುತ್ತಾಗಬೇಕಾಗುತ್ತದೆ. ಇದನ್ನು ಮನಗಂಡು ಪ್ರತಿಯೋರ್ವ ವಿದ್ಯಾರ್ಥಿ ನಿತ್ಯ ದೇಹ ದಂಡಣೆಯ ಕೆಲಸ ಮಾಡಬೇಕು ಎಂದು ಹೇಳಿದರು.

ಕ್ರೀಡೆ, ಸಂಗೀತಕ್ಕೆ ಆದ್ಯತೆ ನೀಡಿ: ಪಠ್ಯದಲ್ಲಿ ಕ್ರೀಡೆ, ಸಂಗೀತಕ್ಕೆ ಹೆಚ್ಚು ಒತ್ತು ನೀಡಬೇಕು, ಆದರೆ ಇದನ್ನು ಅಳವಡಿಸುವಲ್ಲಿ ಸರ್ಕಾರಗಳು ವಿಫ‌ಲವಾಗಿವೆ. ಪಠ್ಯದಲ್ಲಿ ಇರುವ ಕ್ರಮವನ್ನು ಮಾತ್ರ ಪೋಷಕರು ಹಾಗೂ ಶಿಕ್ಷಕರು ಹೆಚ್ಚು ಆದ್ಯತೆ ನೀಡುತ್ತಾರೆ. ಮುಂದಿನ ದಿವಸಗಳಲ್ಲಿ ಪ್ರತಿ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕನನ್ನು ನೇಮಕ ಮಾಡುವಂತೆ ಒತ್ತಾಯ ಹೇರುತ್ತೇನೆ. ಯಾವ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇದ್ದಾರೆ ಅವರು ಕ್ರೀಡೆಕಡೆ ಗಮನ ನೀಡಬೇಕು ಎಂದು ತಿಳಿಸಿದರು.

ಕ್ರೀಡಾಚಟುವಟಿಕೆಗೆ ಪ್ರೋತ್ಸಾಹ: ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಕೆ.ಪುಷ್ಪಲತಾ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ಗುರುತಿಸುವ ಕೆಲಸವನ್ನು ಕ್ರೀಡಾ ಭಾರತಿ ಮಾಡುತ್ತಿದೆ, ಯುವ ಸಮುದಾಯ ಕ್ರೀಡೆಯನ್ನು ಮರೆಯುತ್ತಿದ್ದು ಮೊಬೈಲ್‌ ಹಾಗೂ ಕಂಪ್ಯೂಟರ್‌ಗೆ ಅಂಟಿಕೊಂಡಿದ್ದಾರೆ. ಅವರನ್ನು ಕ್ರೀಡಾಂಗಣಕ್ಕೆ ಕರೆಸುವ ಕೆಲಸ ಆಗುತ್ತಿದೆ, ಸರ್ಕಾರಿ ಶಾಲೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿ ಅವುಗಳನ್ನು ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವಂತೆ ಮಾಡಿರುವುದು ಶ್ಲಾಘನೀಯ. ಮುಂದಿನ ಕ್ರೀಡಾ ಕೂಟದಲ್ಲಿ ಪ್ರತಿ ಶಾಲೆಯಿಂದ ಒಂದು ತಂಡ ಪಾಲ್ಗೊಳ್ಳುವಂತೆ ಆದೇಶಿಸುತ್ತೇನೆ ಎಂದು ಭರವಸೆ ನೀಡಿದರು.

ಅಂಕ ಗಳಿಸಲು ಒತ್ತಡ ಹೇರದಿರಿ: ಮಕ್ಕಳ ವಿಷಯದಲ್ಲಿ ಆಲೋಚನೆ ಮಾಡುವ ಪಾಲಕರು ಹಾಗೂ ಶಿಕ್ಷಕರು ವಿಶೇಷವಾಗಿ ಗಮನ ಹರಿಸಬೇಕು. ಮಕ್ಕಳು ಕ್ರೀಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದರೆ ಅವರನ್ನು ಅದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಬೇಕು, ಇದರ ಬದಲಾಗಿ ಹೆಚ್ಚು ಅಂಕ ತೆಗೆಯುವಂತೆ ಒತ್ತಡೆ ಹೇರಿ ಮಗುವಿನ ಪ್ರತಿಭೆಗೆ ತಣ್ಣೀರು ಎರೆಚುವ ಕೆಲಸ ಆಗಬಾರದು, ಪ್ರಸಕ್ತ ವರ್ಷ 30 ಶಾಲೆಗಳಿಂದ ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಮುಂದಿನ ಸಾಲಿನಲ್ಲಿ ಇದು ದ್ವಿಗುಣಗೊಳ್ಳಲಿದೆ ಎಂದರು.

ವಿಜೇತರಿಗೆ ಬಹುಮಾನ ವಿತರಣೆ: ಪಥಸಂಚಲ, ಬ್ಯಾಂಡ್‌ ಸೆಟ್‌ ಹಾಗೂ ಈಜು ಸ್ವರ್ಧೆ ನಡೆಯಿತು ಜಿಲ್ಲೆಯ ವಿವಿಧ ತಾಲೂಕಿನಿಂದ ಸುಮಾರು 20 ಶಾಲೆಗಳಿಂದ 30 ತಂಡಗಳಿದ್ದು 1,082 ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತಂಡಗಳಿಗೆ ಬೆಂಗಳೂರು ಲಯನ್ಸ್‌ ರಾಯೆಲ್ಸ್‌ ಕ್ಲಬ್‌ ಅಧ್ಯಕ್ಷ ಶಿವಕುಮಾರ ನಾಗರನವಿಲೆ ಇವರಿಂದ ಬಹುಮಾನ ವಿತರಣೆ ಮಾಡಲಾಯಿತು.

ಕ್ರೀಡಾ ಭಾರತಿ ಕ್ಷೇತ್ರೀಯ ಸಂಯೋಜಕ ಚಂದ್ರಶೇಖರ ಜಹಗೀರ್‌ದಾರ್‌, ರಾಜ್ಯ ಕಾರ್ಯದರ್ಶಿ ಎಸ್‌.ಎನ್‌.ಬಸವರಾಜು, ಜಿಲ್ಲಾಧ್ಯಕ್ಷ ವಿಜಯಕುಮಾರಜೈನ್‌, ತಾಲೂಕು ಅಧ್ಯಕ್ಷ ಜಿ.ವಿ.ವಿಜಯಕುಮಾರ, ಅಂತಾರಾಷ್ಟ್ರೀಯ ಕ್ರೀಡಾ ಪಟು ಬರಾಳು ಪ್ರಕಾಶ, ರಾಜಕೀಯ ಮುಖಂಡ ಶಿವನಂಜೇಗೌಡ, ಗುಡ್‌ ಸಿಟಿಜನ್‌ ಶಾಲೆ ಅಧ್ಯಕ್ಷ ಗೇಣಿಧರ್‌, ಪ್ರಾಂಶುಪಾಲ ಅಂಟನಿ ಜೋಸೆಫ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.