ಉತ್ತಮ ಮಳೆ: ರೈತರ ಮೊಗದಲ್ಲಿ ಮಂದಹಾಸ


Team Udayavani, May 24, 2018, 1:05 PM IST

has-1.jpg

ಅರಸೀಕೆರೆ: ತಾಲೂಕು ಸತತ ಮಳೆಯ ಕೊರತೆಯಿಂದ ಕಳೆದ ನಾಲ್ಕೈದು ವರ್ಷಗಳಿಂದ ಬರದ ಬವಣೆಗೆ ಬೆಂಡಾಗಿ ಹೋಗಿದ್ದು, ಹೀಗಾಗಲೇ ತಾಲೂಕಿನಲ್ಲಿ ಹಲವೆಡೆಗಳಲ್ಲಿ ಪೂರ್ವ ಮುಂಗಾರು ಮಳೆ ಬಿದ್ದಿರುವ ಕಾರಣ ಸಹಜವಾಗಿ ರೈತರ ಮುಖದಲ್ಲಿ ತುಸು ನಿರಾಳತೆಯ ಮಂದಹಾಸ ಕಾಣುತ್ತಿದ್ದು, ತಾಲೂಕಿನ ವಿವಿಧೆಡೆ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

ತಾಲೂಕು ಬಯಲು ಸೀಮೆ ಪ್ರದೇಶವಾಗಿದ್ದು, ಕಳೆದ ಐದಾರು ವರ್ಷಗಳಿಂದ ಉತ್ತಮವಾದ ಮಳೆಯಿಲ್ಲದೇ ಹೊಲ, ಗದ್ದೆಗಳು ಬೆಳೆಯಿಲ್ಲದೆ ಪಾಳು ಬಿದ್ದಿದ್ದು, ತೋಟಗಳಲ್ಲಿನ ತೆಂಗು ಮತ್ತು ಅಡಿಕೆ ಮರಗಳು ತೇವಾಂಶದ ಕೊರತೆ ಹಾಗೂ ವಿವಿಧ ರೋಗಗಳ ಬಾಧೆಯಿಂದ ನರಳುತ್ತಿದ್ದು , ಇತ್ತೀಚೆಗೆ ಬಿರುಗಾಳಿ ಮಿಶ್ರಿತ ಬಿದ್ದ ಪೂರ್ವ ಮುಂಗಾರು ಮಳೆಯಿಂದ ವಾರ್ಷಿಕ ವಾಡಿಕೆ ಮಳೆಯ 110 ಮಿ.ಮಿ ಗಿಂತಲ್ಲೂ ಹೆಚ್ಚಾಗಿ 170 ಮಿ.ಮೀ ಮಳೆಯಾಗಿದ್ದು, ರೈತರ ಕೃಷಿ ಭೂಮಿ ಹಸಿರಿನಿಂದ ಕಂಗೊಳಿಸುವಂತಾಗಿದೆ. 

ಮಳೆಯ ಪ್ರಮಾಣ: ಪ್ರಸ್ತುತ ವರ್ಷದಲ್ಲಿ ಜನವರಿ ತಿಂಗಳಿಂದ ಮೇ 18 ರವರೆಗೆ ಬಿದ್ದಿರುವ ಮಳೆಯ ಪ್ರಮಾಣ ಕಸಬಾ ಹೋಬಳಿಯಲ್ಲಿ ವಾಡಿಕೆ ಮಳೆ ಪ್ರಮಾಣ 117 ಇದ್ದು, 191 ಮಿ.ಮಿ ಮಳೆಯಾಗಿದೆ. ಕಣಕಟ್ಟೆ ಹೋಬಳಿ ವಾಡಿಕೆ ಮಳೆಯ ಪ್ರಮಾಣ 84 ಮಿ.ಮಿ ಇದ್ದು, 149 ಮಿ.ಮೀ ಮಳೆಯಾಗಿದೆ.
 
ಗಂಡಸಿ ಹೋಬಳಿ ವಾಡಿಕೆ ಪ್ರಮಾಣ 122 ಮಿ.ಮೀ ಇದ್ದು, 163 ಮಿ.ಮಿ. ಮಳೆಯಾಗಿದೆ. ಬಾಣಾವರ ಹೋಬಳಿಯಲ್ಲಿ 115 ಮಿ.ಮಿ. ಇದ್ದು, 188 ಮಿ.ಮೀ ಮಳೆಯಾಗಿದೆ. ಜಾವಗಲ್‌ ಹೋಬಳಿಯಲ್ಲಿ ವಾಡಿಕೆ ಮಳೆ 116 ಮಿ.ಮೀ ಮಳೆಗಿಂತಲೂ ಹೆಚ್ಚು 192 ಮಿ.ಮೀ ಮಳೆಯಾಗಿದ್ದು, ಒಟ್ಟಾರೆ ತಾಲೂಕಿನಲ್ಲಿ ಪ್ರಸ್ತುತ ವರ್ಷದ ವಾಡಿಕೆ ಮಳೆ 110 ಮಿ.ಮೀ ಇದ್ದು, 170 ಮಳೆಯಾಗಿದ್ದು ಶೇಕಡ ಸರಾಸರಿ 60 ಮಿ.ಮೀ ಪ್ರಮಾಣದ ಮಳೆಯೂ ಹೆಚ್ಚು ಸುರಿಯದಿರುವುದು ತಾಲೂಕಿನ ರೈತ ಸಮುದಾಯ ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ತಾಲೂಕಿನಲ್ಲಿ ಒಟ್ಟು 134.800 ಹೆಕ್ಟೇರ್‌ ಸಾಗುವಳಿ ಕೃಷಿಭೂಮಿ ಪೈಕಿಯಲ್ಲಿ ಹೀಗಾಗಲೇ 6412 ಹೆಕ್ಟೇರ್‌ ಕೃಷಿಭೂಮಿಯಲ್ಲಿ ಪೂರ್ವ ಮುಂಗಾರು ಬೆಳೆಗಳಾದ ಜೋಳ, ಹೆಸರು, ಉದ್ದು, ಎಳ್ಳು, ತೊಗರಿ, ಹಲಸಂದೆ, ಮುಸುಕಿನ ಜೋಳ, ಸೂರ್ಯಕಾಂತಿ ಹಾಗೂ ಹರಳು ಬೆಳೆಗಳನ್ನು ಬೆಳೆಯಲಾಗುತ್ತಿದ್ದು ಜೋಳ 1400 ಹೆಕ್ಟೇರ್‌ ಗುರಿಯಿದ್ದು, 211 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ದ್ವಿದಳ ದಾನ್ಯಗಳಾದ ಹೆಸರು ಗುರಿ 9500 ಹೆಕ್ಟೇರ್‌ ಗುರಿಯಿದ್ದು 1330 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. 

ಉದ್ದು, ಗುರಿ 950 ಹೆಕ್ಟೇರ್‌ ಇದ್ದು, 360 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ತೊಗರಿ 1200 ಹೆಕ್ಟೇರ್‌ ಇದ್ದು, 50 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಹಲಸಂದೇ ಗುರಿ 5000 ಹೆಕ್ಟೇರ್‌ ಇದ್ದು, 1080 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಹುರುಳಿ ಗುರಿ 2350 ಹೆಕ್ಟೇರ್‌ ಹಾಗೂ ಅವರೆ 1700 ಹೆಕ್ಟೇರ್‌ ಹಾಗೂ ಮುಸುಕಿನ ಜೋಳ, 13500 ಹೆಕ್ಟೇರ್‌ ಗುರಿಯಿದ್ದು, ಬಿತ್ತನೆ ಯಾಗಿಲ್ಲ, ಎಳ್ಳು 1000 ಹೆಕ್ಟೇರ್‌ ಗುರಿ ಇದ್ದು, 350 ಹೆಕ್ಟೇರ್‌ ಬಿತ್ತನೆಯಾಗಿದೆ ಎಣ್ಣೆಕಾಳುಗಳಾದ ಸೂರ್ಯಕಾಂತಿ, ಹರಳು ನೆಲಗಡಲೆ, ಸಾಸಿವೆ, ಹುಚ್ಚೇಳು ಬೆಳೆಗಳನ್ನು ರೈತರು ಬಿತ್ತನೆ ಮಾಡಬೇಕಾಗಿದೆ. ಈ ಬಾರಿ ವರುಣನ ಕೃಪೆಯಿಂದ ರೈತನ ಕೈ ಹಿಡಿಯುವ ಹಂತದಲ್ಲಿದೆ. ಇದರಿಂದ ಆತ್ಮವಿಶ್ವಾಸದಲ್ಲಿರುವ ಬಯಲುಸೀಮೆಯ ರೈತರು ಮುಂಗಾರಿನ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ
ಜೋಳ, ಜೋಳ ಮತ್ತಿತರ ಬೆಳೆಗಳನ್ನು ಬೆಳೆಯಲು ತಮ್ಮ ಜಮೀನನ್ನು ಹದಮಾಡಿಕೊಳ್ಳುತ್ತಿದ್ದಾರೆ.

 ಅರಸೀಕೆರೆ ರಾಮಚಂದ್ರ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.