ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ವಿಫ‌ಲ : ಶಾಸಕ ಕೆ.ಎಂ.ಶಿವಲಿಂಗೇಗೌಡ

ಆಂದೋಲನ ರೀತಿಯಲ್ಲಿ ಲಸಿಕೆ ಹಾಕಬೇಕಿತ್ತು! ಲಸಿಕೆ ಮಾರಾಟದಿಂದ ನಮಗೇ ಸಮಸ್ಯೆ

Team Udayavani, May 14, 2021, 3:17 PM IST

13_05_arsp_3_1305bg_2

ಅರಸೀಕೆರೆ: ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಗಳು ಅನಿವಾರ್ಯವಾಗಿ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡು ಕೊರೊನಾ ನಿಯಂತ್ರಿಸಲು ಲಸಿಕೆ ಆಂದೋಲನ ಯಶಸ್ವಿಗೊಳಿಸ ಬೇಕಿತ್ತು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಕೊರೊನಾ ಸೋಂಕು ನಿಯಂತ್ರಿಸಲು ಕೇಂದ್ರ ಸರ್ಕಾರ ಕೊ ವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಎಂಬ ಎರಡು ಕಂಪನಿಗಳ ಲಸಿಕೆಯನ್ನು ದೇಶದ ನಾಗರೀಕರಿಗೆ ಉಚಿತವಾಗಿ ನೀಡಲು ಕಳೆದ 5 ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ ಮೊದಲನೇ ಕೊರೊನಾ ಸೋಂಕಿನಿಂದ ಭಯಭೀತರಾಗಿದ್ದ ದೇಶದ ಜನತೆ ದೇಶಿಯ ಲಸಿಕೆಗಳಿಂದ ಅಡ್ಡ ಪರಿಣಾಮ ಉಂಟಾಗುತ್ತವೆ ಎಂಬ ಊಹಾಪೋಹದ ಸುದ್ದಿಗೆ ಅಂಜಿ ಬಹುತೇಕ ಮಂದಿ ಲಸಿಕೆ ಹಾಕಿಸಿಕೊಳ್ಳಲು ಹೆಚ್ಚಿನ ಆಸಕ್ತಿ ವಹಿಸದ ಪರಿಣಾಮ ಸರ್ಕಾರದ ಲಸಿಕಾ ಆಂದೋಲನ ಯಶಸ್ವಿ ಯಾಗಲು ಸಾಧ್ಯವಾಗಲಿಲ್ಲ. ಬದಲಾಗಿ ನಮ್ಮ ದೇಶಿಯ ಕಂಪನಿಗಳ ಲಸಿಕೆ ವಿದೇಶಗಳಿಗೆ ಮಾರಾಟವಾಗಿದ್ದರಿಂದ ಇಂದು ನಮ್ಮ ದೇಶದ ಜನರಿಗೆ ಅವಶ್ಯಕವಾದ ಲಸಿಕೆ ಸಕಾಲದಲ್ಲಿ ಲಭ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಜನ ತತ್ತರಿಸುತ್ತಿದ್ದಾರೆ:ಸರ್ಕಾರ ಕೊರೊನಾ ಲಸಿಕೆ ಬಿಡುಗಡೆ ಆದ ಸಂದರ್ಭದಲ್ಲಿ ಈ ಮಾರ ಣಾಂತಿಕ ಸೋಂಕನ್ನು ಹೋಗಲಾಡಿಸಲು ಕಡ್ಡಾಯವಾಗಿ ಪ್ರತಿ ಯೊಬ್ಬರೂ ಲಸಿಕೆ ತೆಗೆದುಕೊಳ್ಳಬೇಕು ಎಂಬ ನಿಯಮವನ್ನು ಮಾಡ ಬೇಕಿತ್ತು. ಆದರೆ ಆ ರೀತಿ ಯಾವ ಕಠಿಣ ನಿಯಮಗಳನ್ನೂ ಸರ್ಕಾರ ಮಾಡದ ಕಾರಣ ಕೆಲವರು ಲಸಿಕೆ ಪಡೆದರೆ ಇನ್ನೂ ಅನೇಕರು ಲಸಿಕೆ ಪಡೆಯದೆ ಇದ್ದರಿಂದ ಲಸಿಕೆ ಅಭಿಯಾನ ಪೂರ್ಣವಾಗಿಲ್ಲ. ಈಗ ಜನ ಲಸಿಕೆ ಹಾಕಿಸಿಕೊಳ್ಳಲು ಮುಗಿ ಬೀಳುತ್ತಿದ್ದಾರೆ. ಆದರೆ, ಸರ್ಕಾರದ ಬಳಿ ಅಗತ್ಯವಿರುವಷ್ಟು ಲಸಿಕೆ ಇಲ್ಲದೆ ಪ್ರಾಣ ಭಯದಿಂದ ತತ್ತರಿಸುತ್ತಿದ್ದಾರೆ ಎಂದು ದೂರಿದರು. ತಾಲೂಕಿನಲ್ಲಿ 4800 ಮಂದಿ ಕೊ ವ್ಯಾಕ್ಸಿನ್‌ ಲಸಿಕೆ ತೆಗೆದುಕೊಂಡಿ ದ್ದಾರೆ.

ಅವರಿಗೆ 40ದಿನಗಳ ನಂತರ 2ನೇ ಲಸಿಕೆ ನೀಡಬೇಕಾಯಿತು. ಈ ಪೈಕಿ 300ಮಂದಿ 2ನೇ ಡೋಸ್‌ ಲಸಿಕೆ ತೆಗೆದುಕೊಂಡಿದ್ದು ಇನ್ನುಳಿದ 4500 ಮಂದಿಗೆ ಲಸಿಕೆ ಸಿಗದೆ ಪ್ರತಿ ನಿತ್ಯ ಆಸ್ಪತ್ರೆಗೆ ಅಲೆದು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದನ್ನು ತಯಾರಿಸಿದ ಇಂಡಿಯನ್‌ ಬಯೋಟೆಕ್‌ ಕಂಪನಿ ಲಸಿಕೆಯನ್ನು ಹೊರದೇಶಕ್ಕೆ ಮಾರಾಟ ಮಾಡಿದೆ. 18ವರ್ಷದ ಮೇಲ್ಪಟ್ಟವರಿಗೂ ಲಸಿಕೆ ನೀಡುವುದಾಗಿ ಹೇಳಿದ ಸರ್ಕಾರ ಅದನ್ನು ಹಿಂಪಡೆದಿದೆ. 60 ವರ್ಷದವರಿಗೆ ಲಸಿಕೆ ನೀಡಿ ಈಗ 2ನೇ ಡೋಸ್‌ ನೀಡದೆ ಆತಂಕಕ್ಕೆ ದೂಡಿರುವ ಕೇಂದ್ರ ಸರ್ಕಾರ ಲಸಿಕೆ ನೀಡಲು ಹಣವಿಲ್ಲದಿದ್ದರೆ ಸಾರ್ವಜನಿಕರಿಗೆ ತಾವೇ ಹಣ ನೀಡಿ ಲಸಿಕೆ ಪಡೆಯುವಂತೆ ತಿಳಿಸಬೇಕಿತ್ತು. ಕೊವ್ಯಾಕ್ಸಿನ್‌ 2ನೇ ಡೋಸ್‌ನಲ್ಲಿ 4500 ಜನರಿಗೆ ನೀಡಬೇಕಾದ ಲಸಿಕೆ ಯನ್ನು ತಕ್ಷಣ ನೀಡಿ ಮರ್ಯಾದೆ ಉಳಿಸಿಕೊಳ್ಳಲಿ ಮೂರನೇ ಅಲೆ ಪ್ರಾರಂಭವಾಗುವುದಕ್ಕೆ ಮುನ್ನ ಎಲ್ಲರಿಗೂ ಲಸಿಕೆ ನೀಡಬೇಕು. ಇಲ್ಲ ದಿದ್ದರೆ ಈ ಸರ್ಕಾರದ ವಿರುದ್ಧ ಜನತೆ ಪ್ರತಿಭಟನೆಗೆ ಮುಂದಾಗು ತ್ತಾರೆಂದು ತಿಳಿಸಿದರು.

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು