ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳ ಸಹಿಸಲ್ಲ: ಶಾಸಕ
Team Udayavani, Jul 11, 2020, 6:54 AM IST
ಅರಸೀಕೆರೆ: ತಾಲೂಕಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕೆಲವು ರಾಜಕಾರಣಿಗಳಿಂದ ಕಿರುಕುಳ ಉಂಟಾಗುತ್ತಿರುವ ಕಾರಣ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದ್ದು ಇದಕ್ಕೆ ಕಾರಣಕರ್ತರು ಯಾರು ಎಂಬುವುದನ್ನು ಅಧಿಕಾರಿಗಳೇ ಬಹಿರಂಗಪಡಿಸಬೇಕೆಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.
ತಾಲೂಕಿನಲ್ಲಿ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳು ಆಡಳಿತ ನಡೆಸುತ್ತಿದ್ದಾರೆ. ಆದರೆ ಕೆಲವು ರಾಜಕಾರಣಿಗಳು ತಮ್ಮ ಪ್ರಭಾವ ಬಳಸಿ ಪ್ರಾಮಾಣಿಕ ಅಧಿಕಾರಿಗಳ ವಿರುದಟಛಿ ಸುಳ್ಳು ಆರೋಪ ಮಾಡುತ್ತಾ ಕರ್ತವ್ಯ ನಿರ್ವಹಿಸಲು ತೊಂದರೆ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ. ಆದ್ದರಿಂದ ತಾವು ಯಾವುದೇ ಸರ್ಕಾರಿ ಅಧಿಕಾರಿಗಳ ಪರವಾಗಿ ಅಥವಾ ವಿರುದವಾಗಿ ಉಳಿಸಿಕೊಳ್ಳಲು ಮಂತ್ರಿಗಳ ಜೊತೆಯಲ್ಲಿ ವರ್ಗಾವಣೆ ಲಾಬಿ ನಡೆಸಿಲ್ಲ.
ಆದರೆ ತಮ್ಮದೆ ಪಕ್ಷದ ಸರ್ಕಾರ ಇದೇ ಎಂದು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗ ಮಾಡಿಸಿ ತಮ್ಮ ಮಾತು ಕೇಳುವ ಅಧಿಕಾರಿಗಳನ್ನು ಇಲ್ಲಿಗೆ ವರ್ಗಾವಣೆ ಮಾಡಿಸಿಕೊಳ್ಳುವ ದುರುದ್ದೇಶದಿಂದ ಕೆಲವರು ಇತಂಹ ರಾಜಕಾರಣ ನಡೆಸುತ್ತಿದ್ದಾರೆ. ತಾವು ಈ ಬೆಳೆವಣಿಗೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕರು ಎಚ್ಚರಿಸಿದರು.
ಆದರೆ ಕೆಲವು ಅಧಿಕಾರಿಗಳು ಮಧ್ಯವರ್ತಿಗಳ ಮಾತಿಗೆ ಮರುಳಾಗಿ ಇಲ್ಲಿಂದ ವರ್ಗಾವಣೆ ಮಾಡಿಸಿಕೊಂಡು ಹೋಗುವುದಾದರೇ ತಮ್ಮ ಅಭ್ಯಂತರವಿಲ್ಲ.ಆದರೆ ಪ್ರಾಮಾಣಿಕ ಅಧಿಕಾರಿಗಳನ್ನು ಉಳಿಸಿಕೊಳ್ಳಲು ತಾವು ಯಾವುದೇ ಹೋರಾಟಕ್ಕೂ ಸಿದನಾಗಿದ್ದೇನೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್