ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಯಶಸ್ಸು


Team Udayavani, Oct 30, 2020, 4:53 PM IST

ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಯಶಸ್ಸು

ಕೋಲಾರ: ಜಿಲ್ಲೆಯ ಒಟ್ಟು 36 ಸರ್ಕಾರಿ ಶಾಲೆಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫ‌ಲಿತಾಂಶದ ಸಾಧನೆಯೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಯಶಸ್ಸನ್ನು ಸಾಧಿಸಿ ಪೋಷಕರ ಖಾಸಗಿ ವ್ಯಾಮೋಹಕ್ಕೆ ಕಡಿವಾಣ ಹಾಕಿವೆ ಎಂದು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.

ಕೋಲಾರ ತಾಲೂಕಿಗೆ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಕ್ಯಾಲನೂರು ಸರ್ಕಾರಿ ಪ್ರೌಢಶಾಲೆಯ ನಿಖೀಲ್‌ ಕುಮಾರ್‌, ಆಶಾ, ಚೈತ್ರಾಬಾಯಿ ಈ ಮೂವರು ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಕೊಡುಗೆಯಾಗಿ ನೀಡಿದ್ದ ಲ್ಯಾಪ್‌ಟಾಪ್‌ ವಿತರಿಸಿ ಮಾತನಾಡಿದರು.

ಸಾಧನೆಯ ಫ‌ಲಿತಾಂಶ: ಈ ಸಾಲಿನಲ್ಲಿ ಸರ್ಕಾರಿ ಶಾಲೆಗಳಿಂದ 7863 ಮಂದಿ ಪರೀಕ್ಷೆಗೆ ಕುಳಿತಿದ್ದು, 6799 ಮಂದಿ ಉತ್ತೀರ್ಣರಾಗಿ ಶೇ.86.47 ಫ‌ಲಿತಾಂಶ ಬಂದಿದೆ. 36 ಶಾಲೆ ಶೇ.100 ಸಾಧನೆ ಮಾಡುವ ಮೂಲಕ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದಿವೆ ಎಂದರು.

ಈ ಫ‌ಲಿತಾಂಶ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೂ ಕಾರಣವಾಗಿದೆ ಎಂದ ಡಿಡಿಪಿಐ, ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಸಿಲುಕಿದ್ದ ಪೋಷಕರ ಮನಸ್ಸಿನಲ್ಲಿ ಸರ್ಕಾರಿ ಶಾಲೆಗಳ ಕುರಿತು ಉತ್ತಮ ಭಾವನೆ ಬಲಗೊಳ್ಳಲು ಕಾರಣವಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಫ‌ಲಿತಾಂಶದಲ್ಲಿ ಸಂತಸದ ವಿಷಯ ಎಂದರೆ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳೇ ಶೇ.80 ರಷ್ಟಿದ್ದಾರೆ. ಗುಣಾತ್ಮಕತೆಗೆ ಇದು ಕನ್ನಡಿಯಾಗಿದೆ. ಸರ್ಕಾರಿ ಲ್ಯಾಪ್‌ಟಾಪ್‌ ನೀಡುತ್ತಿರುವುದು ಇತರೆ ಮಕ್ಕಳಿಗೂ ಪ್ರೇರಣೆಯಾಗಲಿ, ನಿಮ್ಮ ಮುಂದಿನ ಶೈಕ್ಷಣಿಕಜೀವನವೂ ಉತ್ತಮ ಹಾದಿಯಲ್ಲಿ ಸಾಗಲಿ ಎಂದು ಸಾಧಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬಿಇಒ ಕೆ.ಎಸ್‌.ನಾಗರಾಜಗೌಡ, ಕೋಲಾರ ತಾಲೂಕಿನ ಕರ್ನಾಟಕ ಪಬ್ಲಿಕ್‌ ಶಾಲೆ ಕ್ಯಾಲನೂರು ಈ ಶಾಲೆಯ ಮೂವರು ವಿದ್ಯಾರ್ಥಿಗಳು ಮಾಡಿರುವ ಸಾಧನೆ ಶ್ಲಾ ಸಿ, ಇದೇ ಹಾದಿಯಲ್ಲಿಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ಧಿಗೊಳಿಸಿ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಈ ಸಾಲಿನ ಪರೀಕ್ಷೆಯಲ್ಲಿ ಇಡೀ ಕೋಲಾರ ತಾಲೂಕಿಗೆ ಅತೀ ಹೆಚ್ಚಿನ ಅಂಕ ಗಳಿಸಿದ್ದಕ್ಕೆ ಸರ್ಕಾರದ ವತಿಯಿಂದ ಉಚಿತ ಲ್ಯಾಪ್‌ ಟ್ಯಾಪ್‌ ನೀಡಲಾಯಿತು. ವಿದ್ಯಾರ್ಥಿಗಳಾದ ನಿಖೀಲ್‌ಕುಮಾರ್‌, ಚೈತ್ರಾಬಾಯಿ, ತಾಲೂಕಿಗೆ ಮೊದಲ  ಮೂರು ಸ್ಥಾನ ಪಡೆಯುವ ಮೂಲಕ ಲ್ಯಾಪ್‌ಟಾಪ್  ಪಡೆದುಕೊಂಡರು.

ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಹಾಗೂ ಕರ್ನಾಟಕ ಪಬ್ಲಿಕ್‌ ಶಾಲೆ ಮುಖ್ಯ ಶಿಕ್ಷಕಓ.ಮಲ್ಲಿಕಾರ್ಜುನ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಗಂಗಾಧರ್‌, ಮಕ್ಕಳು ಹಾಜರಿದ್ದು ಶುಭ ಕೋರಿದರು.

ಸೌಲಭ್ಯಗಳೆಲ್ಲವೂ ಉಚಿತ : ಕೋವಿಡ್‌ ಸಂಕಷ್ಟದಲ್ಲೂ ಸರ್ಕಾರಿ ಪ್ರೌಢಶಾಲೆ ಶಿಕ್ಷಕರು ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ವಿದ್ಯಾಗಮ ಮಾತ್ರವಲ್ಲ, ಆನ್‌ಲೈನ್‌ ಕಲಿಕೆಗೂ ಒತ್ತು ನೀಡಿದ್ದಾರೆ. ಶಿಕ್ಷಕರ ಪರಿಶ್ರಮದಿಂದ ಜಿಲ್ಲೆಗೆ ಉತ್ತಮ ಫ‌ಲಿತಾಂಶದ ಗೌರವವೂ ಸಿಗುವಂತಾಯಿತು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಪೌಷ್ಟಿಕವಾದ ಬಿಸಿ ಯೂಟ, ಹಾಲು, ಉಚಿತ ಪಠ್ಯಪುಸ್ತಕ, ಸಮ ವಸ್ತ್ರದ ಕೊಡುಗೆ ನೀಡಲಾಗುತ್ತಿದೆ. ಶುಲ್ಕವೂ ಇಲ್ಲ, ಕೋವಿಡ್‌ ಸಂಕಷ್ಟದಲ್ಲಿರುವ ಪೋಷಕರು ಇದೀಗ ಸರ್ಕಾರಿ ಶಾಲೆಗಳತ್ತ ಬರುತ್ತಿದ್ದಾರೆ ಎಂದು ಡಿಡಿಪಿಐ ಜಯರಾಮರೆಡ್ಡಿ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.