ಪಂಚಾಯ್ತಿ ಕದನದಲ್ಲಿ ಮಾಂಸ, ಮದ್ಯದ ಕಮಟು


Team Udayavani, Dec 14, 2020, 6:06 PM IST

ಪಂಚಾಯ್ತಿ ಕದನದಲ್ಲಿ ಮಾಂಸ, ಮದ್ಯದ ಕಮಟು

ಚನ್ನರಾಯಪಟ್ಟಣ: ಮಾಗಿಚಳಿಯಲ್ಲಿ ಗ್ರಾಪಂ ಚುನಾವಣೆ ಕಾವು ರಂಗೇರುತ್ತಿದ್ದು, ಗ್ರಾಮಸೌಧ ಪ್ರವೇಶಕ್ಕಾಗಿ ಕಣದಲ್ಲಿ ಇರುವ ಅಭ್ಯರ್ಥಿಗಳು ಹಲವು ಕಸರತ್ತು ನಡೆಸುತ್ತಿದ್ದಾರೆ. ನಿತ್ಯವೂ ಗುಂಡು ತುಂಡಿನ ಪಾರ್ಟಿ ಯನ್ನು ಜೋರಾಗಿ ಮಾಡುತ್ತಿದ್ದಾರೆ.

ಈಗಾಗಲೇ ತಾಲೂಕಿನ 40 ಗ್ರಾಮ ಪಂಚಾಯ್ತಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ನೇರವಾಗಿ ಪೈಪೋಟಿ ನೀಡುವವರನ್ನು ಬೆಂಬಲಿಗರೊಂದಿಗೆ ತೋಟದ ಮನೆಗೆಕರೆಯಿಸಿ ಗುಂಡಿನ ಮತ್ತಿನಲ್ಲಿ ಅವರನ್ನು ತೇಲಿಸುತ್ತಿರುವು ದಲ್ಲದೆ, ಹಣದ ಆಮಿಷವನ್ನೂ ಒಡ್ಡುತ್ತಿದ್ದಾರೆ. ಇದಕ್ಕೆ ಹಲವು ಮಂದಿ ಒಪ್ಪಿದ್ದು, ನಾಮಪತ್ರ ಹಿಂಡೆಯಲು ಮುಂದಾಗುವ ಮುನ್ಸೂಚನೆಗಳು ಕಾಣುತ್ತಿವೆ. ಇನ್ನು ಕೆಲವರು ಈ ಪಂಚಾಯ್ತಿ ಚುನಾವಣೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಕಣದಿಂದ ಹಿಂದೆ ಸರಿಯದೆ ಮತ ದಾರರ ಸೆಳೆಯುವ ಸಂಬಂಧ ಹಾಗೂ ಸ್ನೇಹದ ಜಾಡು ಹಿಡಿಯುತ್ತಿದ್ದಾರೆ.

ಗುಂಡು ತುಂಡು: ಕಣದಲ್ಲಿ ಉಳಿಯುವುದು ನಿಶ್ಚಯ ಮಾಡಿಕೊಂಡಿರುವವರು ತಮ್ಮ ಬೆಂಬಲಿಗರು, ಸ್ನೇಹಿತರು, ಆಪ್ತರಿಗೆ ಉಭಯ ಕುಶಲೋಪರಿಯಾಗಿ ಪಾರ್ಟಿಯನ್ನು ನೀಡುತ್ತಿದ್ದಾರೆ. ನಾಮಪತ್ರ ಸಲ್ಲಿಗೆಮುಗಿಯುತ್ತಿದ್ದಂತೆ ಹೋಬಳಿ ಕೇಂದ್ರದ ಸಮೀಪದಲ್ಲಿನ ಡಾಬಾಗಳು, ನಗರದಲ್ಲಿನ ಡಾಬಾ, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳು ಭರ್ತಿಯಾಗುತ್ತಿವೆ. ಅಲ್ಲದೆ, ಕೆಲವು ಮಂದಿ ಲಾಡ್ಜ್ಗಳಲ್ಲಿ ರೂಂಗಳನ್ನು ಬಾಡಿಗೆ ಪಡೆದು ಗೌಪ್ಯವಾಗಿ ಪಾರ್ಟಿ ಮಾಡುತ್ತಿದ್ದಾರೆ.

ಟೋಕನ್‌ ವ್ಯವಸ್ಥೆ: ಹಿರೀಸಾವೆ, ಬಾಗೂರು, ಶ್ರವಣಬೆಳಗೊಳ, ಉದಯಪುರ, ನುಗ್ಗೇಹಳ್ಳಿ ಹಾಗೂ ನಗರ ವ್ಯಾಪ್ತಿಯ ಡಾಬಾಗಳು ಬೆಳಗ್ಗೆ11 ಗಂಟೆಗೆ ತುಂಬಿ ತುಳುಕುತ್ತಿವೆ. ಕಿರಿಯ ವಯಸ್ಸಿನವರು ಕಣದಲ್ಲಿ ಇದ್ದು ಅವರೊಟ್ಟಿಗೆ ಪಾರ್ಟಿ ಮಾಡಲು ಮುಜುರವಾಗುತ್ತಿದೆ. ಇನ್ನು ಕಣದಲ್ಲಿ ಇರುವ ಹಿರಿಯರು ತಮ್ಮ ಮಕ್ಕಳ ಹಾಗೂ ಮೊಮ್ಮಕ್ಕಳ ಸರಿ ಸಮನಾದವರು ಜೊತೆ ಸೇರಿ ಗುಂಡಿನ ಅಮಲು ಏರಿಸಕೊಳ್ಳಲು ಸಂಕೋಚ ಆಗುತ್ತಿರು ವುದರಿಂದ ಟೋಕನ್‌ ವ್ಯವಸ್ಥೆಯ ಮೊರೆ ಹೋಗಿದ್ದಾರೆ.ಇನ್ನುಕೆಲವರು ಬಾರ್‌ ಮಾಲಿಕರೊಂದಿಗೆ ನೇರ ಸಂಪರ್ಕ ಹೊಂದಿದ್ದು, ದೂರವಾಣಿ ಕರೆ ಮಾಡಿ ಅಗತ್ಯ ಮದ್ಯದ ವ್ಯವಸ್ಥೆ ಮಾಡುತ್ತಿದ್ದಾರೆ.

ಟೋಕನಿಂದ ದೊರೆಯುವುದೇನು? ಡಾಬಾ ಹಾಗೂ ರೆಸ್ಟೋರೆಂಟ್‌ಗಳ ಪಾರ್ಟಿಗಳಿಗಾಗಿ ಅಭ್ಯರ್ಥಿಗಳುನೀಡುತ್ತಿರುವ ಟೋಕನಿನಲ್ಲಿ ಅಭ್ಯರ್ಥಿ ಹೆಸರು ಹಾಗೂ ಗ್ರಾಮದ ಹೆಸರು ಇರುತ್ತಿದ್ದು, ಅದನ್ನು ಸಂಬಂಧ ಪಟ್ಟ ಹೋಟೆಲ್‌ಗೆ ನೀಡಿದರೆ ಮದ್ಯ, ಬಿರಿಯಾನಿ ಊಟ, ಬಗೆ ಬಗೆಯ ಮಾಂಸಹಾರಿ ತಿನಿಸುಗಳು ಟೇಬಲ್‌ಗೆ ಬರಲಿವೆ. ಆದರೆ, ಕೆಲವು ತಾವು ಉಂಡು ತಮ್ಮ ಮನೆಗೂ ಊಟ ವನ್ನು ಕಟ್ಟಿಸಿಕೊಂಡು ಹೋಗುತ್ತಿರುವುದರಿಂದ ಅಭ್ಯರ್ಥಿ ಗಳಿಗೆ ನುಂಗಲಾರದ ತುತ್ತಾಗಿದೆ.

ಪ್ರವಾಸದ ವ್ಯವಸ್ಥೆ: ಮಹಿಳೆಯರನ್ನು ತಮ್ಮತ್ತ ಸೆಳೆಯಲ್ಲಿ ಧರ್ಮಸ್ಥಳ, ಹೊರನಾಡು, ಕುಕ್ಕೇಸುಬ್ರಹ್ಮಣ್ಯ, ಶೃಂಗೇರಿ, ಮುರುಡೇಶ್ವರ, ಉಡುಪಿ, ಕೊಲ್ಲೂರು, ಸಿಗಂಧೂರು ಹೀಗೆ ಹಲವು ಪುಣ್ಯಕ್ಷೇತ್ರಗಳಿಗೆ ಸ್ತ್ರೀಶಕ್ತಿ ಸಂಘದ ಮೂಲಕ ಪ್ರವಾಸದ ವ್ಯವಸ್ಥೆ ಮಾಡಲಾಗುತ್ತಿದೆ. ಪುಣ್ಯ ಕ್ಷೇತ್ರದಲ್ಲಿಯೇ ಸೀರೆ, ಮೂಗುಬಟ್ಟು, ಬೆಳ್ಳಿ ಕುಂಕುಮದ ಭರಣಿ, ದೀಪ, ಇತರ ಗಿಫ್ಟ್ ನೀಡುವ ಮೂಲಕ ಗ್ರಾಮ ಸೌಧ ಪ್ರವೇಶಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ನಮ್ಮ ಗ್ರಾಮೀಣ ಭಾಗದ ಮುಖಂಡರುಹಾಗೂ ಪರಿಚಯ ಸ್ಥರು ದೂರವಾಣಿ ಕರೆ ಮಾಡಿ ಹತ್ತಾರುಮಂದಿಗೆಊಟ ನೀಡುವಂತೆಹೇಳುತ್ತಾರೆ. ಡಾಬಾಕ್ಕೆ ಬಂದವರಿಗೆ ನಾವು ಊಟ ನೀಡುತ್ತಿದ್ದೇವೆ, ಇನ್ನು ಕೆಲವರು ಟೋಕನ್‌ ನೀಡುತ್ತಿದ್ದಾರೆ, ಅದನ್ನು ಪಡೆದು ಮದ್ಯ ಹಾಗೂ ಊಟದ ವ್ಯವಸ್ಥೆ ಮಾಡುತ್ತಿದ್ದೇವೆ, ಚುನಾವಣೆ ವೇಳೆ ಇದೆಲ್ಲ ಸಾಮಾನ್ಯ. ಆದರೆ, ಈ ವರ್ಷ ಗ್ರಾಮ ಪಂಚಾಯಿತಿ ಚುನಾವಣೆ ಬಹಳ ಜೋರಾಗಿ ನಡೆಯುತ್ತಿದ್ದು ಉತ್ತಮವಾಗಿ ವ್ಯಾಪಾರ ಆಗುತ್ತಿದೆ. ಹೆಸರು ಹೇಳಲಿಚ್ಚಿಸದ ಡಾಬಾ ಮಾಲಿಕ

 

ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.