ಗ್ರಾಪಂ ಚುನಾವಣೆ ಮೂರು ಪಕ್ಷಕ್ಕೂ ಪ್ರತಿಷ್ಠೆ


Team Udayavani, Dec 21, 2020, 4:32 PM IST

ಗ್ರಾಪಂ ಚುನಾವಣೆ ಮೂರು ಪಕ್ಷಕ್ಕೂ ಪ್ರತಿಷ್ಠೆ

ಬೇಲೂರು: ತಾಲೂಕಿನ 37 ಗ್ರಾಮ ಪಂಚಾಯ್ತಿಯ 423 ಸ್ಥಾನಗಳಲ್ಲಿ 34 ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 387 ಸ್ಥಾನಗಳಿಗೆಡಿ.27ರಂದುಚುನಾವಣೆನಡೆಯಲಿದೆ.ಹುಲುಗುಂಡಿ ಗ್ರಾಪಂನ ವಡ್ಡರ ‌ಹಟ್ಟಿ, ರಾಜನಶಿರಿಯೂರು ಗ್ರಾಪಂನ ನರಸೀಪುರ ಸಾಮಾನ್ಯ ಕ್ಷೇತ್ರಕ್ಕೆ ಯಾವುದೇ ನಾಮಪತ್ರಸಲ್ಲಿಕೆ ಆಗಿಲ್ಲ. ಅದ್ದರಿಂದ 1092 ಅಭ್ಯರ್ಥಿಗಳು ಚುನಾವಣಾಕಣದಲ್ಲಿದ್ದಾರೆ.

ತಾಲೂಕಿನಲ್ಲಿ ಈ ಬಾರಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿಗೆ ಪ್ರತಿಷ್ಠೆ ಆಗಿದೆ. ಈಗಾಗಲೇ ಮೂರು ಪಕ್ಷದನಾಯಕರು ಪ್ರತಿ ಗ್ರಾಮಕ್ಕೆ ತೆರಳಿ ತಮ್ಮ ಬೆಂಬಲಿತಅಭ್ಯಥಿಗಳ ಪರ ಪ್ರಚಾರ ಆರಂಭಿಸಿದ್ದಾರೆ.ಈಗಾಗಲೇ ಮುಂಬರುವ ವಿಧಾನಸಭೆ  ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌, ಬಿಜೆಪಿಮುಖಂಡರು ತಾಲೂಕಿನಲ್ಲಿ ನಿರಂತರವಾಗಿ ಸಭೆ, ಸಮಾವೇಶ ಹಮ್ಮಿಕೊಂಡು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿದ್ದಾರೆ. ಬಿಜೆಪಿ

ಈಗಾಗಲೇ ಗ್ರಾಮ ಸ್ವರಾಜ್‌ ಸಮಾವೇಶ ನಡೆಸುವ ಮೂಲಕ ರಾಜ್ಯದ ವಿವಿಧ ಮಂತ್ರಿಗಳನ್ನು ಕರೆಯಿಸಿ, ಸರ್ಕಾರದ ಅಭಿವೃದ್ಧಿ ಬಗ್ಗೆ ಪ್ರಚಾರ ಪಡಿಸಿದೆ.ಅಲ್ಲದೆ, ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್‌  ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಅವರೂ ಗ್ರಾಮೀಣ ಭಾಗದಲ್ಲಿಸಂಚರಿಸಿ ತಮ್ಮ ಪಕ್ಷ ಬೆಂಬಲಿಗರ ಗೆಲುವಿಗೆ ಪಣ ತೊಟ್ಟಿದ್ದಾರೆ.ಜೆಡಿಎಸ್‌ ಸಹ ತನ್ನ ಚುನಾವಣೆ ಪ್ರಚಾರ ಆರಂಭಿಸಿದ್ದು, ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಕೆ.ಎಸ್‌.ಲಿಂಗೇಶ್‌ ತಮ್ಮ ಪಕ್ಷದಬೆಂಬಲಿಗರ ಗೆಲುವಿಗೆ ಶ್ರಮಿಸುತ್ತಿದ್ದಾರೆ.

ಕಾಂಗ್ರೆಸ್‌ ಪಕ್ಷ ಸಹ ತಾಲೂಕಿನಲ್ಲಿ ಅತಿ ಹೆಚ್ಚು ಸ್ಥಾನಪಡೆಯುವ ಹಂಬಲದಲ್ಲಿದೆ. ಬೇಲೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್‌ ಅಕಾಂಕ್ಷಿ ಎಂದೇ ಬಿಂಬಿತ ಗೊಂಡಿರುವ ಮಾಜಿ ಸಚಿವ ಬಿ. ಶಿವರಾಂ ನೇತೃ ತ್ವದಲ್ಲಿ ಪ್ರತಿ ಗ್ರಾಮಕ್ಕೆ ತೆರಳಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಬೇಲೂರು ಕ್ಷೇತ್ರದಲ್ಲಿ ತಮ್ಮರಾಜಕೀಯ ಭವಿಷ್ಯ ರೂಪಿಸಿ ಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಈ ವೇಳೆ ಉದಯವಾಣಿಯೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಮೂರೂ ಪಕ್ಷಗಳ ತಾಲೂಕು ಅಧ್ಯಕ್ಷರು ಶೇ.80 ಗ್ರಾಪಂಗಳಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ತಾಲೂಕಿನಲ್ಲಿ ಇದುವರೆಗೂ ಬಿಜೆಪಿ ಬೆಂಬಲಿಗರು ಗ್ರಾಮ ಪಂಚಾಯ್ತಿನಲ್ಲಿಹೆಚ್ಚು ಗೆದ್ದಿಲ್ಲ.ಕಳೆದ ಬಾರಿ ಪಕ್ಷದ ಬೆಂಬಲಿತ ರಾಗಿ 120 ಅಭ್ಯರ್ಥಿಗಳುಮಾತ್ರ ಗೆದ್ದಿದ್ದರು ಅದರೆ, ಈ ಸಾರಿ ಶೇ.80 ಅಭ್ಯರ್ಥಿಗಳನ್ನುಗೆಲ್ಲಿಸಲಾಗುವುದು. ರಾಜ್ಯ ಮತ್ತುಕೇಂದ್ರಸರ್ಕಾರದ ಜನಪರ ಅಭಿವೃದ್ಧಿಯನ್ನು ಮತದಾರರ ಮುಂದೆ ಇಡಲಾಗುತ್ತಿದೆ. ಅತಿಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಅಡಗೂರು ಅನಂದ್‌, ತಾಲೂಕು ಅಧ್ಯಕ್ಷ, ಬಿಜೆಪಿ.

ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 37 ಗ್ರಾಮ ಪಂಚಾಯ್ತಿ ಗಳಲ್ಲಿ 30 ಗ್ರಾಪಂ ಜೆಡಿಎಸ್‌ ಬೆಂಬಲಿ ಗರುಕಳೆದ ತಮ್ಮವಶಕ್ಕೆ ಪಡೆದಿದ್ದರು. ಈಬಾರಿ ಹೆಚ್ಚು ಸ್ಥಾನಗಳಿಸುತ್ತೇವೆ. ಮಾಜಿಸಚಿವ ರೇವಣ್ಣ ಅವರು ತಾಲೂಕಿನಲ್ಲಿಮಾಡಿರುವ ಅಭಿವೃದ್ಧಿಯನ್ನು ನೋಡಿ,ಮತದಾರರು ಪಕ್ಷ ಬೆಂಬಲಿತರನ್ನುಗೆಲ್ಲಿಸಲಿದ್ದಾರೆಂಬ ವಿಶ್ವಾಸ ಇದೆ.- ತೊ.ಚ.ಅನಂತಸುಬ್ಟಾರಾಯ, ತಾಲೂಕು ಅಧ್ಯಕ್ಷ, ಜೆಡಿಎಸ್‌

ತಾಲೂಕಿನಲ್ಲಿಕಾಂಗ್ರೆಸ್‌ ಪಕ್ಷ ಸದೃಢವಾಗಿದೆ. ಗ್ರಾಮ ಪಂಚಾಯಿತಿಚುನಾವಣೆ ಎದುರಿಸಲುಸಿದ್ಧವಿದೆ. ಈಗಾಗಲೇ ಮಾಜಿಸಚಿವ ಬಿ.ಶಿವರಾಂ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ವೈ.ಎನ್‌.ಕೃಷ್ಣೇಗೌಡ ಇಬ್ಬರನೇತೃತ್ವದಲ್ಲಿ ತಾಲೂಕಿನಲ್ಲಿಪ್ರವಾಸಕೈಗೊಂಡು ಪಕ್ಷ ಬೆಂಬಲಿತ ಅಭ್ಯರ್ಥಿಗಳಗೆಲುವಿಗೆ ಶ್ರಮಿಸಲಾಗುತ್ತಿದೆ. ಈ ಬಾರಿ ಶೇ.80 ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಎಂ.ಜೆ.ನಿಶಾಂತ್‌, ತಾಲೂಕು ಅಧ್ಯಕ್ಷ, ಕಾಂಗ್ರೆಸ್‌.

 

-ಡಿ.ಬಿ.ಮೋಹನ್‌ಕುಮಾರ್‌

ಟಾಪ್ ನ್ಯೂಸ್

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.