ಮತದಾರರ ಸೆಳೆಯಲು ಹಣಹಂಚಿಕೆಗೆ ಸಜ್ಜು !


Team Udayavani, Dec 20, 2020, 7:38 PM IST

Hasan-tdy-1

ಹಾಸನ: ಮೊದಲ ಹಂತದಲ್ಲಿ ಡಿ.22 ರಂದು ನಡೆಯಲಿರುವ ಗ್ರಾಮ ಪಂಚಾಯ್ತಿಯ ಚುನಾವಣೆಗೆ ಇನ್ನು ಮೂರು ದಿನ ಬಾಕಿಯಿದ್ದು, ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ಉಡುಗೊರೆಗಳ ಮಾಹಾಪೂರವನ್ನೇ ಹರಿಸುತ್ತಿದ್ದಾರೆ.

ಮುಂಜಾನೆ ಮನೆ, ಮನೆಗೆ ಎಡತಾಕಿ ಮತದಾರರ ಓಲೈಸುತ್ತಿರುವ ಅಭ್ಯರ್ಥಿಗಳು, ಮಧ್ಯಾಹ್ನದ ‌ ವೇಳೆಗೆ ತಮ್ಮ ಬೆಂಬಲಿಗರೊಂದಿಗೆ ನಗರ, ಪಟ್ಟಣ ಪ್ರದೇಶಗಳಿಗೆಬಂದು ಗ್ರಾಮಗಳಲ್ಲಿನ ಬೆಳವಣಿಗೆಗಳನ್ನು ತಮ್ಮ ಮುಖಂಡರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.

ನಗರ, ಪಟ್ಟಣ ಪ್ರದೇಶಗಳಿಗೆ ಅಭ್ಯರ್ಥಿ ‌ ಗಳು ಹಾಗೂ ಅವರ ಬೆಂಬಲಿಗರು ದಂಡು ದಂಡಾಗಿ ಆಗಮಿಸು ತ್ತಿರುವುದರಿಂದ ನಗರ ಮತ್ತು ಪಟ್ಟಣಗಳ ಹೋಟೆಲ್‌ಗಳು ತುಂಬಿ ತುಳುಕುತ್ತಿವೆ. ಮಾಂಸಾಹಾರಿ ಹೋಟೆಲ್‌ ಗಳು ಮತ್ತು ಮದ್ಯದಂಗಡಿಗಳಲ್ಲಿ ಮಧ್ಯಾಹ್ನದಿಂದ ರಾತ್ರಿವರೆಗೂ ಭರ್ಜರಿ ವ್ಯಾಪಾರ ವ್ಯಾಪಾರವಾಗುತ್ತಿವೆ.

ಬಿರಿಯಾನಿ ಪ್ಯಾಕೇಟ್‌ ಹಂಚಿಕೆ: ನಗರ ಮತ್ತು ಪಟ್ಟಣ ಸುತ್ತಮುತ್ತಲಿನ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಸಂಜೆ ವೇಳೆ ಮನೆ, ಮನೆಗೆ ಚಿಕನ್‌ ಬಿರಿಯಾನಿ ಪ್ಯಾಕೇಟ್‌ಗಳ ಹಂಚಲಾಗುತ್ತಿದೆ. ಪಟ್ಟಣಗಳಿಂದ ದೂರದ ಗ್ರಾಮಗಳಲ್ಲಿ ಕೋಳಿ ಮತ್ತು ದಿನಸಿ ಕಿಟ್‌ಗಳನ್ನು ಅಭ್ಯರ್ಥಿಗಳು ಹಂಚುತ್ತಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆ ಪಕ್ಷಾತೀತ ಎಂದು ಹೇಳುತ್ತಿದ್ದರೂ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಬೆಂಬಗಲಿಗರನ್ನು ಗೆಲ್ಲಿಸಿಕೊಂಡು ಗ್ರಾಮ ಮಟ್ಟದಲ್ಲಿ ತಮ್ಮ ರಾಜಕೀಯ ನೆಲೆ ಭದ್ರ ಮಾಡಿ ಕೊಳ್ಳಲು ಲಕ್ಷಾಂತರ ರೂ. ವೆಚ್ಚ ಮಾಡುತ್ತಿದ್ದಾರೆ. ಹಾಗಾಗಿ ಈಗ ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಾಗಿವೆ.

ಚುನಾವಣಾ ಮುನ್ನಾದಿನ ಹಣ ಹಂಚಿಕೆ: ಗ್ರಾಮ ಮಟ್ಟದಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಹಟಕ್ಕೆ ಬಿದ್ದು ಹೋರಾಡುತ್ತಿರುವ ಅಭ್ಯರ್ಥಿಗಳು ಚುನಾವಣೆಯ ಮುನ್ನಾ ದಿನದವರೆಗೂ ಮತದಾರರಿಗೆ ವಿವಿಧ ಉಡುಗೊರೆ ನೀಡಿದರೂ ಮತದಾನದ ಮುನ್ನಾ ದಿನ ಈ ಬಾರಿ ಹಣ ಹಂಚಿಕೆ ನಡೆಯುವುದು ಖಚಿತ. ಉಡುಗೊರೆಗಳೆಲ್ಲಾ ಈಗ ಹಳೆಯ ಮಾದರಿ. ಈಗ ಏನಿದ್ದರೂ ನೇರಾನೇರಾ ವ್ಯವಹಾರವಾಗಿದ್ದು ಹಣ ಹಂಚದಿದ್ದರೆ ಗೆಲ್ಲುವುದು ಕಷ್ಟ ಎಂದು ಅಭ್ಯರ್ಥಿಯೊಬ್ಬರು ಹೇಳುತ್ತಾರೆ.  ತಮ್ಮ ಎದುರಾಳಿಯ ಎಲ್ಲ ತಂತ್ರಗಳನ್ನೂ ಗಮನಿಸಿದ ನಂತರ ತಮಗೆ ಬರಬೇಕಾದ ಇಂತಿಷ್ಟು ಮತಗಳನ್ನು ಲೆಕ್ಕ ಹಾಕಿ ಮತದಾರರಿಗೆ ಹಣ ಹಂಚಿಯಾದರೂ ಗೆಲ್ಲಲೇ ಬೇಕು ಎಂಬ ಹಟ ಅಭ್ಯರ್ಥಿಗಳದ್ದು.

ಹಾಸನ ಕ್ಷೇತ್ರದಲ್ಲಿ ಹಣದ ವ್ಯವಹಾರ: ಪ್ರತಿ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ – ಕಾಂಗ್ರೆಸ್‌ನಡುವೆ ಹಣಾಹಣಿ ನಡೆಯುತ್ತಿತ್ತು. ಈ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ವಾುಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್‌ – ಬಿಜೆಪಿ ನಡುವೆ ಹಣಾಹಣಿ ಏರ್ಪಟ್ಟಿದೆ. ಕೇವಲ 6 ಗ್ರಾಮ ಪಂಚಾಯ್ತಿಗಳಷ್ಟೇ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಎರಡೂ ಪಕ್ಷಗಳ ಮುಖಂಡರಿಗೂ ಈಗ ರಾಜಕೀಯ ಪ್ರತಿಷ್ಠೆಯಾಗಿದೆ. ಹಾಗಾಗಿ ಎದುರಾಳಿ ಪಕ್ಷದ ಪ್ರಭಾವಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸದಂತೆ ಹಾಗೂ ನಾಮಪತ್ರ ವಾಪಸ್ಸಾತಿಯ ಸಂದರ್ಭದಲ್ಲಿಯೂ ಲಕ್ಷಾಂತರ ರೂ ವ್ಯವಹಾರ ನಡೆದಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳಿಗೂ ಲೆಕ್ಕ ಹಾಕದೆ ಚುನಾವಣಾ ವೆಚ್ಚ ಮಾಡುತ್ತಿದ್ದಾರೆ. ಅಯಾಯ ಪಕ್ಷಗಳ ಮುಖಂಡರಿಂದಲೂ ಸಂಪನ್ಮೂಲ ಅಭ್ಯರ್ಥಿಗಳಿಗೆ ಹರಿದು ಬರುತ್ತಿದೆ.

 

-ನಂಜುಂಡೇಗೌಡ.ಎನ್‌

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.