ಅರಕಲಗೂಡು: 35 ಗ್ರಾಪಂಗೆ ಶೇ.86.63 ಮತದಾನ


Team Udayavani, Dec 23, 2020, 4:16 PM IST

ಅರಕಲಗೂಡು: 35 ಗ್ರಾಪಂಗೆ ಶೇ.86.63 ಮತದಾನ

ಅರಕಲಗೂಡು: ತಾಲೂಕಿನಲ್ಲಿ 35 ಗ್ರಾಪಂಗಳ ಚುನಾವಣೆ ಬಹುತೇಕ ಶಾಂತಿಯುತವಾಗಿದ್ದು, ಶೇ.846.63 ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ರಾಮನಾಥಪುರ ಹೋಬಳಿ ರುದ್ರಪಟ್ಟಣ ಗ್ರಾಮದ ಮತಗಟ್ಟೆಯ ಹೊರಭಾಗದಲ್ಲಿ ಪೊಲೀಸ್‌ ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದ್ದು ಹೊರತುಪಡಿಸಿ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ.

ಸೋಂಕಿತರಿಗೆ ಮತದಾನಕ್ಕೆ ಅವಕಾಶ: ತಾಲೂಕಿನಲ್ಲಿ ಕೋವಿಡ್ ಸೋಂಕು ದೃಢಪಟ್ಟ 15 ಮಂದಿಗೆ ಸಂಜೆ 4ರಿಂದ 5ರವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಪ್ರತಿ ಸೋಂಕಿತರಿಗೂ ಪಿಪಿಇ ಕಿಟ್‌ಹಾಕಿಸಿ ಮತಗಟ್ಟೆಗೆ ಕರೆತಂದು,ಹಕ್ಕು ಚಲಾಯಿಸುವುದಕ್ಕೆ ಅವಕಾಶ ನೀಡಲಾಗಿತ್ತು. ಪ್ರತಿ ಮತಗಟ್ಟೆಯಲ್ಲೂ ಕೋವಿಡ್‌-19 ಪರೀಕ್ಷಿಸಿ, ಸ್ಯಾನಿಟೈಸರ್‌ ನೀಡುವ ಮೂಲಕ ಪ್ರತಿ ಮತದಾರನಿಗೂ ಮಾಸ್ಕ್ ಕಡ್ಡಾಯವಾಗಿದ್ದು, ಎಲ್ಲಾ ಮತಗಟ್ಟೆಗಳಲ್ಲೂ ಕಂಡು ಬಂದಿತ್ತು.

ಚಿನ್ನ ಬೆಳ್ಳಿ, ಹಣ, ಕೋಳಿ ಹಂಚಿಕೆ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮತದಾರರ ಓಲೈಕೆಗೆ ಸೋಮವಾರ ರಾತ್ರಿ ಚಿನ್ನ ಬೆಳ್ಳಿಯ ವಸ್ತುಗಳನ್ನು ನೀಡಿ ಮತಯಾಚಿಸಿದರೆ, ಇನ್ನೂ ಕೆಲವುಕಡೆ ಒಂದು ಮತಕ್ಕೆ ಸಾವಿರ ರೂ.ನಿಂದ 5 ಸಾವಿರ ರೂ.ವರೆಗೂ ನೀಡಲಾಗಿದೆ.

ಮತಗಟ್ಟೆಗಳ ಸುತ್ತ ವಾಮಾಚಾರ :  ಅರಕಲಗೂಡು ತಾಲೂಕಿನ ಹುಲ್ಲಂಗಾಲದ ಮತಗಟ್ಟೆಯ ಸುತ್ತ ಸೋಮವಾರ ಕುಡಿಕೆ, ನಿಂಬೆಹಣ್ಣು, ಚಪ್ಪಲಿ, ಅರಿಶಿಣ ಕುಂಕುಮ ನೆಲದಲ್ಲಿ ಹೂತು ಗ್ರಾಮಸ್ಥರಿಗೆಭಯಹುಟ್ಟಿಸಿದ ಪ್ರಸಂಗ ಮಾಸುವ ಮುನ್ನವೇ, ಮಂಗಳವಾರ ಮಲ್ಲಿಪಟ್ಟಣಹೋಬಳಿ ಎಚ್‌ ಆರ್‌ಪಿ ಕಾಲೋನಿ ಮತ್ತು ಚೌರಗಲ್ಲು ಗ್ರಾಮದ ರಸ್ತೆ ಮಧ್ಯೆಯಲ್ಲಿ ವಾಮಾಚಾರ

ಕುಡಿಕೆಯೊಳಗೆ ಮೂವರು ಅಭ್ಯರ್ಥಿಗಳ ಭಿತ್ತಿಪತ್ರಗಳ ಜೊತೆಗೆ ಕೋಳಿ ತಲೆ, ಹಂದಿಮುಳ್ಳು, ಪ್ರಾಣಿಗಳ ಹಲ್ಲು ಇನ್ನು ಇತರೆ ಸಾಮಗ್ರಿಗಳನ್ನು ಇಟ್ಟು ವಾಮಾಚಾರ ನಡೆಸಲಾಗಿದೆ.

ಪಿಎಸ್‌ಐ, ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ : 

ರಾಮನಾಥಪುರ ಹೋಬಳಿ ರುದ್ರಪಟ್ಟಣ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಯಲ್ಲಿಮತಗಟ್ಟೆಯ ಬಳಿ ಅಭ್ಯರ್ಥಿ ಸಾಗರ ಮತ್ತು ಇತರರು ಮತದಾರರಿಗೆ ಮದ್ಯ,ಊಟವನ್ನು ಹಂಚುತ್ತಿದ್ದಾರೆ ಎಂಬ ವಿಷಯ ತಿಳಿದ ಪಿಎಸ್‌ಐ, ಸ್ಥಳಕ್ಕೆ ತೆರಳಿ ಮತಗಟ್ಟೆಯ ಸುತ್ತಮುತ್ತ ಈ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ, ಮದ್ಯ, ಊಟ ಹಂಚದಂತೆ, ಇಲ್ಲಿಂದ ತೆರಳುವಂತೆ ಗದರಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಭ್ಯರ್ಥಿ ಸಾಗರ ಮತ್ತು ಇತರರು ಪಿಎಸ್‌ಐಅಜಯಕುಮಾರ ಅವರ ಬಟ್ಟೆ ಹಿಡಿದು ಎಳೆದಾಡಿ, ಪೊಲೀಸ್‌ ಜೀಪಿಗೆ ಬೆಂಕಿ ಹಚ್ಚುವುದಾಗಿ ತಿಳಿಸಿ ಅವಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ. ಪರಿಸ್ಥಿತಿ ಕೈಮೀರುವ ಸ್ಥಿತಿ ತಲೆದೂರಿದ್ದರಿಂದ ಸ್ಥಳದಿಂದ ಹೊರಬರಲು ಯತ್ನಿಸಿದಾಗ, ಪೊಲೀಸ್‌ ಜೀಪಿಗೆ ಅಡ್ಡ ಕುಳಿತು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆನಡೆಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರಿಂದ 30 ಜನರ ಮೇಲೆ ನೀತಿಸಂಹಿತೆ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಕೊಣನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಸ್ಥಳಕ್ಕೆ ಸಿಪಿಐ ಸತ್ಯನಾರಾಯಣ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.