ಶೇ.25 ಅನುದಾನ ಇತರೆ ಸೌಲಭ್ಯಕ್ಕೂ ಬಳಸಿ


Team Udayavani, Jul 31, 2018, 12:09 PM IST

has-1.jpg

ಸಕಲೇಶಪುರ/ಆಲೂರು: ಅಧಿಕಾರಿಗಳು ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸಬೇಕೆಂದು ಎಂದು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಸಲಹೆ ನೀಡಿದರು.

ಆಲೂರು ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿ, ಪಂಗಡ ಹಿತರಕ್ಷಣಾ ಸಮಿತಿ ತ್ತೈಮಾಸಿಕ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶೇ.25ರ ಅನುದಾನವನ್ನು ಕೇವಲ ಸೀಮಿತ ಕೆಲಸಗಳಿಗೆ ಮಾತ್ರ ವಿನಿಯೋಗಿಸದೇ, ಗ್ರಾಮೀಣ ಪ್ರದೇಶ ಗಳಲ್ಲಿರುವ ಗುಡಿ ಕೈಗಾರಿಕೆ ಪ್ರೋತ್ಸಾಹಿಸಲು ಉನ್ನತ ಶಿಕ್ಷಣ ಪಡೆಯವವರಿಗೆ, ಕ್ರೀಡಾಪಟುಗಳಿಗೆ ಬಳಸ ಬೇಕು. ಜೊತೆಗೆ ಶವ ಸಂಸ್ಕಾರಕ್ಕೆ ಕಂದಾಯ ಇಲಾಖೆ, ಗ್ರಾಪಂನಲ್ಲಿ ಹಣ ಸಂದಾಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಇಂಟರ್‌ನೆಟ್‌ ಸಿಗದ ಕಾರಣ, ಬಯೋಮೆಟ್ರಿಕ್‌ ಪಡೆಯಲು ವಿನಾಯ್ತಿ ನೀಡಿ ಪಡಿತರ ವಿತರಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಮದ್ಯ ಮಾರಾಟ, ಪೂರೈಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಪಿಡಿಒಗಳು ಶೇ.100 ಕಂದಾಯ ವಸೂಲಿಗೆ ಕ್ರಮ ಕೈಗೊಳ್ಳಬೇಕು. ಗ್ರಾ.ಪಂ.ಸದಸ್ಯರಿಗೆ ಅಂಬೇಡ್ಕರ್‌ ಯೋಜನಯಡಿಯಲ್ಲಿ ಜನತಾ ಮನೆ ಕೊಡಲು ಪ್ರಥಮ ಪ್ರಾಶಸ್ತ ನೀಡಬೇಕು. ಹಾವು ಕಚ್ಚಿ ಮೃತ ಪಟವರಿಗೆ ಸಹಾಯಧನ ನೀಡಬೇಕು, ಶವ ಸಂಸ್ಕಾರಕ್ಕೆ ಹಲವು ವರ್ಷಗಳಿಂದ ಅನುದಾನ ಬಿಡುಗಡೆಯಾಗಿಲ್ಲ, ಕೊಡಗಿಹಳ್ಳಿ ಗ್ರಾಮದಲ್ಲಿರುವ ದಲಿತರು ಸುಮಾರು ಒಂದು ಕಿ.ಮೀ. ದೂರದಿಂದ ಮನೆ ಬಳಕೆಗೆ ನೀರನ್ನು ತರುತ್ತಿದ್ದಾರೆ ಎಂದು ದಲಿತ ಮುಖಂಡ ಬಸವರಾಜು ಆರೋಪ ಮಾಡಿದರು.

ಮಡಬಲು ಗ್ರಾ.ಪಂ.ಗೆ ಒಳಪಡುವ ಮೇಕರವಳ್ಳಿ ಗ್ರಾಮದಲ್ಲಿ ವಿದ್ಯುತ್‌ ಸಂಪರ್ಕ ಹಲವು ದಿನಗಳಿಂದ ಕಡಿದು ಹೋಗಿದೆ. ಕಡದರವಳ್ಳಿ ಗ್ರಾಮದಲ್ಲಿ ಜೆಸಿಬಿ ಬಳಸಿ ಶೌಚಾಲಯ ಗುಂಡಿ ನಿರ್ಮಾಣ ಮಾಡಲಾಗಿದೆ. ಇದರಿಂದ ಮಳೆ ಬಂದು ನೀರು ತುಂಬಿದೆ. ಮುಂದುವರಿದ ಕಾಮಗಾರಿಯಾಗಿಲ್ಲ. ಸಂಬಂಧಿಸಿದ ಬಿಲ್‌ ತಡೆಹಿಡಿಯಬೇಕು ಎಂದು ಜಿ.ಪಂ.ಸದಸ್ಯ ಲೋಕೇಶ್‌ ಹೇಳಿದರು.

ವರದಿ ಪಡೆಯಲಾಗಿದೆ: ತಾಲೂಕಾದ್ಯಂತ ಮಂಜೂ ರಾಗಿರುವ ಶೌಚಾಲಯಗಳ ಬಗ್ಗೆ ವರದಿ ಪಡೆಯಲಾಗಿದೆ. ಹಲವು ಫ‌ಲಾನುಭಗಳಿಗೆ ಮಂಜೂರಾಗಿರುವ ಮನೆ ಈವರೆಗೂ ನಿರ್ಮಾಣ ಮಾಡಿಲ್ಲ. ಅಂತಹವರು ಮುಂದಿನ ದಿನಗಳಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ತಾಪಂ ಇಒ ಚಂದ್ರಶೇಖರ್‌ ಮಾಹಿತಿ ನೀಡಿದರು.

ಹೊಸ ಪಡಿತರ ಕಾರ್ಡು ಪಡೆಯಲು ಫ‌ಲಾನು ಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮನೆಗೆ ಪಡಿತರ ಚೀಟಿ ತಲುಪಿಸಲಾಗುವುದು ಎಂದು ಆಹಾರ ನಿರೀಕ್ಷಕಿ ಬಿ.ಸಿ.ಚಂದ್ರಿಕಾ ತಿಳಿಸಿದರು.

ಟ್ಯಾಂಕರ್‌ ಖರೀದಿಗೆ ಅರ್ಜಿ: ನರೇಗಾ ಯೋಜನೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಫ‌ಲಾನುಭವಿಗಳಿಗೆ ಅರ್ಜಿ ವಿತರಣೆಯನ್ನು ಈ ಕ್ಷಣದಿಂದಲೇ ಆರಂಭಿಸಲಾಗಿದೆ. ಇದನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು. 2018-19ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ನೀರಿನ ಟ್ಯಾಂಕರ್‌ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್‌ ತಿಳಿಸಿದರು.

ಕೃಷಿ ಹೊಂಡ: ಫ‌ಲಾನುಭವಿಗಳು ಸೂಚಿಸಿದ ಜಾಗದಲ್ಲಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗು ವುದು ಎಂದು ಕೃಷಿ ಇಲಾಖೆ ಸಹಾಯಕ ನಿದೇಶಕಿ ಶೈಲಜಾ ತಿಳಿಸಿದರು.

ಸಮರ್ಪಕವಾಗಿ ಬಳಸಿಕೊಳ್ಳಿ: ಸರಕಾರಿ ಇಲಾಖೆಗಳಿಂದ ಪರಿಶಿಷ್ಟ ಜಾತಿ, ಪಂಗಡದವರಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು ಎಂದು ದಲಿತ ಮುಖಂಡ ದೇವರಾಜು ಮನವಿ ಮಾಡಿಕೊಂಡರು. ಸಭೆಯಲ್ಲಿ ತಹಶೀಲ್ದಾರ್‌ ಡಾ. ಎನ್‌.ಕೆ.ಶಾರ ದಾಂಬ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನಕುಮಾರ್‌, ಪೊಲೀಸ್‌ ಇನ್ಸ್‌ಪೆಕ್ಟರ್‌ ವಿನಯ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.