ಜಲಶಕ್ತಿ, ಜಲಾಮೃತ ಯೋಜನೆಗೆ ಉತ್ತಮ ಪ್ರತಿಕ್ರಿಯೆ
ಶ್ರಮದಾನ ಮೂಲಕ ಪುರಾತನ ಕಲ್ಯಾಣಿ ಸ್ವತ್ಛತೆಗೆ ಮುಂದಾದ ಸಾರ್ವಜನಿಕರು,ಅಧಿಕಾರಿಗಳ ಇಚ್ಛಾಶಕ್ತಿಯಿಂದ ತಾಲೂಕು ರಾಜ್ಯಕ್ಕೆ ಪ್ರಥಮ
Team Udayavani, Aug 7, 2019, 4:09 PM IST
ಚನ್ನರಾಯಪಟ್ಟಣ: ಜಲಶಕ್ತಿ ಹಾಗೂ ಜಲಾಮೃತ ಯೋಜನೆಯಿಂದ ಪ್ರೇರಣೆ ಪಡೆದ ಬೆಳಗಿಹಳ್ಳಿ ಗ್ರಾಮದ ಜನತೆ ತಮ್ಮ ಗ್ರಾಮದಲ್ಲಿ ಹೂಳು ತುಂಬಿರುವ ಕಲ್ಯಾಣಿಯನ್ನು ಪುನರುಜ್ಜೀವನ ಮಾಡಲು ಮುಂದಾಗುವ ಮೂಲಕ ತಾಲೂಕು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ.
ಮಳೆ ಕೊರತೆಯಿಂದ ಕೃಷಿ ಮಾಡಲು ನೀರಿನ ಅಭಾವ ಉಂಟಾಗುತ್ತಿರುವುದಲ್ಲದೇ ಸಾವಿರಾರು ಅಡಿಗಳ ವರೆಗೆ ಅಂತರ್ಜಲ ಕುಸಿದ ಪರಿಣಾಮ ಕೇಂದ್ರ ಸರ್ಕಾರ ದೇಶ ವ್ಯಾಪಿ ಜಲಶಕ್ತಿ ಅಭಿಯಾನ ವನ್ನು ಜಾರಿಗೆ ತಂದಿದೆ. ಇದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಲಮೃತ ಯೋಜನೆ ಎಂಬ ಹೆಸರಿನಲ್ಲಿ ಕೆರೆ-ಕಟ್ಟೆ, ಕಲ್ಯಾಣಿ ಹೂಳೆತ್ತುವ ಕೆಲಸಕ್ಕೆ ಮುಂದಾಗಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ.
ಶ್ರಮದಾನ: ತಾಲೂಕಿನ ಪ್ರತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೂಲಕ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಪ್ರತಿ ಗ್ರಾಮವನ್ನು ತಲುಪುವ ಉದ್ದೇಶ ಹೊಂದಿದ್ದು, ತಾಲೂಕಿನಲ್ಲಿ ಹೂಳುಗಳಿಂದ ಮುಚ್ಚಿಕೊಂಡಿರುವ ಪುರಾತನ ಕಲ್ಯಾಣಿಗಳನ್ನು ಪುನರುಜ್ಜೀವನ ಮಾಡಲು ಮುಂದಾ ಗುತ್ತಿದೆ. ಇದಕ್ಕೆ ಈಗಾಗಲೇ ಹಲವು ಗ್ರಾಮಗಳಲ್ಲಿ ಗ್ರಾಮಸ್ಥರೇ ಮುಂದೆ ಬಂದು ಶ್ರಮದಾನ ಮಾಡುವ ಮೂಲಕ ಕಲ್ಯಾಣಿ ಹೂಳು ತೆಗೆಯುತ್ತಿದ್ದಾರೆ.
ಧಾರ್ಮಿಕ ಕಾರ್ಯಗಳಿಗೆ ಉಪಯೋಗ: ಗ್ರಾಮ ದಲ್ಲಿ ನಡೆಯುವ ಧಾರ್ಮಿಕ ಕಾರ್ಯಗಳಿಗೆ ಹಾಗೂ ಗ್ರಾಮದಲ್ಲಿನ ದೇವಾಲಯಗಳಿಗೆ ಕಲ್ಯಾಣಿಗಳ ಮೂಲಕ ನೀರನ್ನು ತೆಗೆದುಕೊಂಡು ಹೋಗುವ ಉದ್ದೇಶದಿಂದ ಶತಮಾನಗಳ ಹಿಂದೆ ಪೂರ್ವಜನರು ಪ್ರತಿ ಗ್ರಾಮದಲ್ಲಿ ಕಲ್ಯಾಣಿಗಳನ್ನು ನಿರ್ಮಿಸಿದ್ದರು. ಆಧುನಿಕತೆ ಬೆಳೆದಂತೆ ಕಲ್ಯಾಣಿಗಳನ್ನು ಮುಚ್ಚಿಹಾಕಿ, ಕೊಳವೆ ಬಾವಿಗಳ ಮೂಲಕ ನೀರು ಉಪಯೋಗಿಸುತ್ತಿದ್ದಾರೆ.
42 ಕಲ್ಯಾಣಿ ಸ್ವಚ್ಛತೆ: ತಾಲೂಕಿನ 41 ಗ್ರಾಮ ಪಂಚಾಯಿತಿಯಿಂದ ಸುಮಾರು 65 ಪುರಾತನ ಕಲ್ಯಾಣಿಯನ್ನು ಗುರುತಿಸಿದ್ದು ಅವುಗಳಲ್ಲಿ 42 ಕಲ್ಯಾಣಿಗಳನ್ನು ಗ್ರಾಮಸ್ಥರ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಾಯೊಂದಿಗೆ ಶ್ರಮದಾನದ ಮಾಡುವ ಮೂಲಕ ಸ್ವಚ್ಛತೆ ಮಾಡಲಾಗಿದೆ. ಉಳಿದ ಕಲ್ಯಾಣಿಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಶ್ರಮದಾನ ಮಾಡುವ ಮೂಲಕ ಶೀಘ್ರದಲ್ಲಿ ಸ್ವಚ್ಛತೆ ಮಾಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ಮುಂದಾಗಲಿದ್ದಾರೆ.
ಪಾಳು ಬಿದ್ದ ಜಲಮೂಲಗಳು: ಶತಮಾನದ ಇತಿಹಾಸ ಹೊಂದಿರುವ ಕಲ್ಯಾಣಿಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಈ ನೀರನ್ನು ಗ್ರಾಮಸ್ಥರು ಕುಡಿಯಲು, ಧಾರ್ಮಿಕ ಕಾರ್ಯಕ್ರಮಗಳ ಬಳಕೆಗೆ ಉಪಯೋಗಿಸುತ್ತಿದ್ದರು. ಮಳೆಗಾಲದಲ್ಲಿ ಕಲ್ಯಾಣಿಯ ತುಂಬಾ ನೀರು ಶೇಖರಣೆಯಾಗಿ ಅಂತರ್ಜಲ ವೃದ್ಧಿ ಆಗುತ್ತಿದ್ದರಿಂದ ಕಲ್ಯಾಣಿಗೆ ಸಮೀಪದಲ್ಲಿನ ಕೊಳವೆ ಬಾವಿಗಳಲ್ಲಿ ಉತ್ತಮವಾಗಿ ನೀರು ದೊರೆಯುತ್ತಿತ್ತು. ಕೊಳವೆ ಬಾವಿಯಲ್ಲಿ ನೀರು ದೊರೆಯುತ್ತಿದ್ದರಿಂದ ಗ್ರಾಮಸ್ಥರು ಕಲ್ಯಾಣಿಗಳ ಕಡೆ ಗಮನ ನೀಡದೇ ಇದುದ್ದರಿಂದ ಎಲ್ಲಾ ಕಲ್ಯಾಣಿಗಳು ಪಾಳು ಬಿದ್ದವು.
ಕಸದ ತೊಟ್ಟಿಯಾಗಿವೆ: ಹಲವು ವರ್ಷಗಳಿಂದ ಗ್ರಾಮಗಳಲ್ಲಿರುವ ಪುರಾತನ ಕಲ್ಯಾಣಿಗಳು ಪಾಳು ಬಿದಿದ್ದರಿಂದ ಪಾರ್ಥೇನಿಯಂ ಮೊದಲಾದ ಗಿಡಗಳು ಬೆಳೆಯಲಾರಂಭಿಸಿದವು. ಇದೇ ಕಲ್ಯಾಣಿಗಳಿಗೆ ಕೆಲವರು ಕಸ ಹಾಗೂ ಇತರ ಅನುಪಯುಕ್ತ ವಸ್ತುವನ್ನು ತುಂಬಿದ್ದರಿಂದ ಕಲ್ಯಾಣಿಗಳು ಸಂಪೂರ್ಣ ವಾಗಿ ಹಾಳಾದವು. ಮಳೆಗಾಲದಲ್ಲಿ ನೀರು ಶೇಖರಣೆ ಆಗಬೇಕಿದ್ದ ಕಲ್ಯಾಣಿಗಳು ಗ್ರಾಮದ ಕಸದ ತೊಟ್ಟಿಗಳಾಗಿ ಮಾರ್ಪಟ್ಟವು.
ಅಂತರ್ಜಲ ವೃದ್ಧಿಗೆ ಶ್ರಮಿಸಿ: ಯಾವಾಗ ಮಳೆ ಕಡಿಮೆಯಾಯಿತೋ ಅಂತರ್ಜಲದ ಕೊರೆತೆಯಿಂದ ಯಾವಾಗ ಕೊಳವೆ ಬಾವಿಗಳು ನೀರು ದೊರೆ ಯುವುದು ಸ್ಥಗಿತವಾಯಿತು. ಆಗ ಕಲ್ಯಾಣಿಗಳ ಕಡೆ ಗ್ರಾಮಸ್ಥರು ಮುಖ ಮಾಡಿದರು. ಇದೇ ವೇಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾಗಳು ಜಲಸಂರಕ್ಷಣಾ ಅಭಿಯಾನ ಪ್ರಾರಂಭಿಸಿ ಕಲ್ಯಾಣಿಗಳು ಕೊಳವೆ ಬಾವಿಗೆ ಪೂರಕವಾಗಿ ನೀರಿನ ಸೆಲೆ ನೀಡುತ್ತವೆ ಇವುಗಳನ್ನು ಉಳಿಸದಿದ್ದರೆ ಮುಂದೆ ಗಂಡಾಂತರ ಕಾದಿದೆ ಎಂದು ತಿಳಿಸಿದ್ದರಿಂದ ಎಚ್ಚೆತ್ತ ಸಾರ್ವಜನಿಕರು ಮುಂದೆ ಬಂದು ಶ್ರಮದಾನ ಮೂಲಕ ಕಲ್ಯಾಣಿ ಸ್ವಚ್ಛತೆಗೆ ಮುಂದಾಗುತ್ತಿದ್ದಾರೆ.
● ಶಾಮಸುಂದರ್ ಕೆ.ಅಣ್ಣೇನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ