ಜಿಲ್ಲೆಯಲ್ಲಿ ಹೆಚ್ಚಿದ ಮನೆ ಕಳವು ಪ್ರಕರಣ

ಮನೆ ಬೀಗ ಮುರಿದು ನಗದು, ಚಿನ್ನಾಭರಣ ಕಳವು, ವಿವಿಧೆಡೆಗಳಲ್ಲಿ ಪ್ರಕರಣ ದಾಖಲು

Team Udayavani, Mar 10, 2021, 4:43 PM IST

ಜಿಲ್ಲೆಯಲ್ಲಿ ಹೆಚ್ಚಿದ ಮನೆ ಕಳವು ಪ್ರಕರಣ

ಜಿಲ್ಲೆಯಲ್ಲಿ ಹೆಚ್ಚಿದ ಮನೆ ಕಳವು ಪ್ರಕರಣ

ಹಾಸನ: ನಗರ ಸೇರಿದಂತೆ ಜಿಲ್ಲೆಯಲ್ಲಿ ಮನೆ ಕಳವು ಪ್ರಕರಣಗಳ ಸಂಖ್ಯೆಹೆಚ್ಚಿದ್ದು, ಪೊಲೀಸ್‌ ಇಲಾಖೆ ಕಡಿವಾಣಹಾಕಬೇಕಿದೆ. ಭಾನುವಾರ ಮತ್ತುಸೋಮವಾರ ವಿವಿಧೆಡೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದು, ಲಕ್ಷಾಂತರ ರೂ. ನಗದು, ಚಿನ್ನಾಭರಣ ದೋಚಲಾಗಿದೆ.

5.98 ಲಕ್ಷ ರೂ. ಆಭರಣ ಕಳವು: ಮನೆಯ ಬೀಗ ಮುರಿದು 5,98,000ರೂ. ಬೆಲೆಯ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಹಾಸನದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ.

ಹಾಸನದ ವಿಶ್ವೇಶ್ವರಯ್ಯ ಬಡಾವಣೆ ವಾಸಿ ಸಂಕಾಶ್‌ ಎಸ್‌. ಭಾರದ್ವಾಜ್‌ ಎಂಬವರು ಮಾ.5 ರಂದು ಮನಗೆ ಬೀಗ ಹಾಕಿಕೊಂಡು ಬೆಂಗಳೂರಿಗೆಹೋಗಿದ್ದರು. ಅವರು ವಾಪಸ್‌ ಮನೆಗೆ  ಬಂದು ನೋಡಿದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಒಳನುಗ್ಗಿದ್ದ ಕಳ್ಳರು ಬೀರುವಿನಲ್ಲಿಟ್ಟಿದ್ದ 5,98,000ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಆಭರಣಗಳನ್ನು ಕಳವು ಮಾಡಿದ್ದರು.ಈ ಸಂಬಂಧ ಹಾಸನದ ಪೆನ್‌ಷನ್‌ ಮೊಹಲ್ಲಾ ಪೊಲೀಸ್‌ ಠಾಣೆಯಲ್ಲಿಸೋಮವಾರ ಪ್ರಕರಣ ದಾಖಲಾಗಿದೆ.

 ದರೋಡೆ ಅಲ್ಲ, ಮನೆ ಬೀಗ ಮುರಿದು ಚಿನ್ನಾಭರಣ ಕಳವು; ಸ್ಪಷ್ಟನೆ :

ಹಾಸನ: ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಅರಸೀಕೆರೆ ತಾಲೂಕು ಜಾವಗಲ್‌ ಹೋಬಳಿ ಅರಕೆರೆ ಗ್ರಾಮದಲ್ಲಿ ನಡೆದಿದೆ.

ಅರಕೆರೆ ಗ್ರಾಮದ ಸಿದ್ದಲಿಂಗಮ್ಮ ಎಂಬವರು ಸೋಮವಾರ ಬೆಳಗ್ಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಅರಸೀಕೆರೆಗೆ

ಹೋಗಿದ್ದರು. ಅವರು ವಾಪಸ್‌ ಮನೆಗೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ ನುಗ್ಗಿ ಬೀರುವಿನ ಬೀಗ ಮುರಿದು 46 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ನಾಲ್ಕೈದು ಮಂದಿ ದರೋಡೆಕೋರರು ಮನೆಗೆ ನುಗ್ಗಿ ಚಾಕು ತೋರಿಸಿ 50 ಸಾವಿರ ರೂ. ನಗದು ಹಾಗೂ 70 ಗ್ರಾಂ ಚಿನ್ನಾಭರಣ ದೋಚಿದ್ದರು ಎಂದು ವರದಿಯಾಗಿತ್ತು. ಆದರೆ, ದರೋಡೆ ನಡೆದಿಲ್ಲ. ಮನೆಯ ಬೀಗ ಮುರಿದು 46 ಗ್ರಾಂ ಚಿನ್ನಾಭರಣ ಕಳವಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಈ ಸಂಬಂಧ ಜಾವಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಕಲೇಶಪುರ: 98 ಗ್ರಾಂ ಚಿನ್ನಾಭರಣ ಕಳವು :

ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಸಕಲೇಶಪುರದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಬಡಾವಣೆವಾಸಿ ಸಾವಿತ್ರಮ್ಮ ಎಂಬವರು ಭಾನುವಾರ ಮಧ್ಯಾಹ್ನಮನೆಗೆ ಬೀಗ ಹಾಕಿಕೊಂಡು ಸಕಲೇಶಪುರದಚಂಪಕನಗರ ಬಡಾವಣೆಯಲ್ಲಿರುವ ಸಂಬಂಧಿಕರ ಆರಾಧನೆ ಕಾರ್ಯಕ್ಕೆ ಹೋಗಿದ್ದರು. ಅವರು ವಾಪಸ್‌ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿಟ್ಟಿದ್ದ 98 ಗ್ರಾಂ ಚಿನ್ನಾಭರಣಗಳನ್ನು ಕಳವುಮಾಡಿದ್ದರು. ಈ ಸಂಬಂಧ ಸಕಲೇಶಪುರ ನಗರಪೊಲೀಸ್‌ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.