ಎಪಿಎಂಸಿ ದುರ್ಬಲಗೊಳಿಸೋದು ಸರಿಯಲ್ಲ : ಎಚ್.ಕೆ.ಕುಮಾರಸ್ವಾಮಿ
Team Udayavani, Jul 4, 2021, 8:38 PM IST
ಸಕಲೇಶಪುರ: ರೈತರ ಸಣ್ಣಪುಟ್ಟ ಕಾರ್ಯಕ್ರಮಗಳಿಗೆ ಅನುಕೂಲಮಾಡಿಕೊಡುವ ನಿಟ್ಟಿನಲ್ಲಿ ರೈತಭವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೃಷಿ ಮಾರುಕಟ್ಟೆ ಸಮಿತಿವತಿಯಿಂದ ನಿರ್ಮಾಣ ಮಾಡಲಾಗುತ್ತಿರುವ ರೈತ ಭವನ,ಹೋಟೆಲ್ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲಮಾಡಿಕೊಡಲು ಹಾಗೂ ರೈತರು ಸಣ್ಣಪುಟ್ಟ ಕಾರ್ಯಕ್ರಮ ಮಾಡಿಕೊಳ್ಳಲು ರೈತಭವನವನ್ನು ಸುಮಾರು 72 ಲಕ್ಷ ರೂ. ವೆಚ್ಚದಲ್ಲಿನಿರ್ಮಾಣ ಮಾಡಲಾಗುತ್ತಿದೆ. ರೈತ ಭವನದ ಜತೆ ಹೋಟೆಲ್ಕಟ್ಟಡವನ್ನೂ ನಿರ್ಮಾಣ ಮಾಡಲಾಗುತ್ತಿದ್ದು ಇದರಿಂದ ಎಪಿಎಂಸಿಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಸರ್ಕಾರ ಕಾಯಿದೆ ತರುವ ಮುಖಾಂತರ ರೈತರಿಗೆ ಅನುಕೂಲಮಾಡಿಕೊಡಬೇಕು. ಆದರೆ, ಕೇಂದ್ರ ಸರ್ಕಾರ – ರಾಜ್ಯ ಸರ್ಕಾರ ರೈತರಿಗೆ ಬೆನ್ನುಲು ಬಾಗಿದ್ದಕೃಷಿ ಮಾರುಕಟ್ಟೆಯನ್ನು ದುರ್ಬಲಗೊಳಿಸುತ್ತಿದೆ. ಈ ಹಿನ್ನೆಲೆ ರೈತರ ಅನುಕೂಲಕ್ಕಾಗಿ ಕೃಷಿ ಮಾರುಕಟ್ಟೆಸಮಿತಿ ಕಾಯಿದೆಯನ್ನು ಈ ಹಿಂದಿನಂತೆ ಪುನರ್ ತರಬೇಕು ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಕವನ್ಗೌಡ,ಎಪಿಎಂಸಿ ಸದಸ್ಯರಾದ ಗಗನ್, ನಾಮನಿರ್ದೇಶಿತ ಸದಸ್ಯಷಣ್ಮುಖ, ಜೆಡಿಎಸ್ ಮುಖಂಡರಾದ ಕೆ.ಎಲ್.ಸೋಮಶೇಖರ್,ಸ.ಭಾ.ಭಾಸ್ಕರ್, ಹೆತ್ತೂರುಎಪಿಎಂಸಿ ಮಾಜಿ ಸದಸ್ಯ ಮಲ್ಲೇಶ್,ಹೆತ್ತೂರು ಗ್ರಾಪಂಮಾಜಿಅಧ್ಯಕ್ಷಕೃಷ್ಣಪ್ಪ,ಎಪಿಎಂಸಿ ಕಾರ್ಯದರ್ಶಿಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ