ಕ್ರಾಫರ್ಡ್ ಆಸ್ಪತ್ರೆ ವೈದ್ಯರಿಗೆ ಸನ್ಮಾನ
Team Udayavani, Jul 2, 2021, 7:54 PM IST
ಸಕಲೇಶಪುರ: ವೈದ್ಯರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿಬಣ) ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ಮಾತನಾಡಿ, ವೈದ್ಯರದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಿಸ್ವಾರ್ಥವಾಗಿ ಸೇವೆಸಲ್ಲಿಸುತ್ತಿರುವ ಕ್ರಾಫರ್ಡ್ ಆಸ್ಪತ್ರೆಯ ವೈದ್ಯರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಗುತ್ತಿದೆ ಎಂದರು.
ಸಂಘಟನೆಯಪ್ರಮುಖರಾದ ರವಿ, ಶಂಕರಪ್ಪ ಪೂಜಾರಿ, ಶರಣ್ ಹಾಜರಿದ್ದರು.