ಪ್ರಾಕೃತಿಕ ಸವಾಲಿಗೆ ಜಿಲ್ಲಾಡಳಿತ ಕಾರ್ಯೋನ್ಮುಖ: ಡೀಸಿ
Team Udayavani, May 11, 2019, 10:04 AM IST
ಹಾಸನ: ಮುಂಬರುವ ಮುಂಗಾರಿನಲ್ಲಿ ಭಾರೀ ಮಳೆ ಹಾಗೂ ನೈಸರ್ಗಿಕ ವಿಕೋಪ ಸಂಭವಿಸಿದ್ದಲ್ಲಿ ಅದನ್ನು ನಿಭಾಯಿಸಲು ಜಿಲ್ಲಾಡಳಿತ ಮುಂಜಾ ಗ್ರತಾ ಕ್ರಮ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.
ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರ ರೊಂದಿಗೆ ಮಾತ ನಾಡಿದ ಅವರು, ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತರು, ಹಾಗೂ ಮೈಸೂರು ವಲಯದ ಐಜಿಪಿ ಜಂಟಿ ಸಭೆ ನಡೆಸಿ ಜಿಲ್ಲೆಯಲ್ಲಿ ಮುಂಗಾರು ಮಳೆ ಹಾಗೂ ನೈಸರ್ಗಿಕ ವಿಕೋಪ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಿ ಹಲವು ಸಲಹೆ-ಸೂಚನೆ ಹಾಗೂ ನಿರ್ದೇಶನ ನೀಡಿದ್ದಾರೆ ಅವರ ಸಲಹೆಗಳನ್ನು ಜಿಲ್ಲಾಡಳಿತ ಅನುಸರಿಸಲಿದೆ ಎಂದರು.
ಸೂಚನೆ:ಅತಿವೃಷ್ಟಿ ನಿರ್ವಹಣೆಗಾಗಿ ಜಿಲ್ಲೆಗೆ 32.2 ಕೋಟಿ ರೂ., ಅನುದಾನ ಬಿಡುಗಡೆಯಾಗಿತ್ತು. ಅದನ್ನು ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡ ಲಾಗಿದೆ. ಈಗಾಗಲೇ ಶೇ.75 ವೆಚ್ಚವಾಗಿದ. ಪ್ರತಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯ ಗೊಳಿಸಲು ಸೂಚಿಸಲಾಗಿದೆ ಎಂದರು.
ಸಮಸ್ಯಾತ್ಮಕವಾಗಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳ ಸ್ಥಾಪನೆಗೆ ಪೂರ್ವ ಯೋಜನೆ ರೂಪಿಸಲಾಗಿದೆ. ಹೋಬಳಿ ಹಾಗೂ ತಾಲೂಕು ಮಟ್ಟದ ಅಧಿಕಾರಿ ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಎಲ್ಲಾ ತಾಲೂಕುಗಳಲ್ಲಿಯೂ ಕಂಟ್ರೋಲ್ ರೂಂಗಳ ಸ್ಥಾಪನೆಯಾಗಿದ್ದು ದಿನದ 24 ಗಂಟೆ ಕಾರ್ಯಪ್ರವೃತ್ತಿ ಯಲ್ಲಿರುತ್ತವೆ ಎಂದು ತಿಳಿಸಿದರು.
ಪ್ರವಾಹ, ಭೂ ಕುಸಿತ ಮತ್ತಿತರ ಅಪಾಯದ ಸಂದರ್ಭ ಬಳಸಲು ಬೇಕಾಗುವ ಸಾಧನ ಸಲಕರಣೆ ಸಂಗ್ರಹಿಸಲಾಗುತ್ತಿದೆ. ಯಂತ್ರೋಪಕರಣ ಈಜು ಗಾರರು, ವೈದ್ಯಕೀಯ ಸೌಲಭ್ಯಗಳ ಬಗ್ಗೆಯೂ ಪಟ್ಟಿ ಮಾಡಿಕೊಳ್ಳಲಾಗಿದೆ. ಔಷಧಿ ದಾಸ್ತಾನಿಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ ಎಂದರು. ಅಪರ ಡೀಸಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು ಇದ್ದರು.