ಮನೆಗಳಿಗೆ ಕನ್ನ ಹಾಕಿದ್ದ 6 ಖದೀಮರ ಬಂಧನ

7.11 ಲಕ್ಷ ರೂ. ಚಿನ್ನಾಭರಣ ವಶ ! ಹಾಸನ ಗ್ರಾಮಾಂತರ, ಚನ್ನರಾಯಪಟ್ಟಣ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

Team Udayavani, Feb 25, 2021, 7:26 PM IST

Hassan police

ಹಾಸನ: ಒಂಟಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಥಳಿಸಿ ಮಾಂಗಲ್ಯ ಸರ ಮತ್ತು ಮೊಬೈಲ್‌ ದೋಚಿದ್ದ ಐವರು ಆರೋಪಿ, ಮನೆ ಕಳವು ಮಾಡಿದ್ದ ಒಬ್ಬನನ್ನು ಪೊಲೀಸರು ಬಂಧಿಸಿ 7.11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಹಾಸನ ತಾಲೂಕು ಸಾಲಗಾಮೆ ಹೋಬಳಿ ಯಲ್ಲಗೊಂಡನಹಳ್ಳಿ ಗ್ರಾಮದಲ್ಲಿ ಫೆ.11ರಂದು ಸಂಜೆ 7.30ರ ಸಮಯದಲ್ಲಿ ಒಂಟಿ ಮನೆಗೆ ನುಗ್ಗಿ ಮಾಲಿಕರಾದ ಶಾರದಮ್ಮ ಅವರನ್ನು ಥಳಿಸಿ ಅವರ ಕೊರಳಲ್ಲಿದ್ದ 33 ಗ್ರಾಂ ಚಿನ್ನದ ಮಾಂಗಲ್ಯ ಸರ, ಮೊಬೈಲ್‌ ಅನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಹಾಸನ ಗ್ರಾಮಾಂತರ ಪೊಲೀಸರ ವಿಶೇಷ ತಂಡವು ಮಾಹಿತಿ  ಸಂಗ್ರಹಿಸಿದಾಗ ಶಾರದಮ್ಮ ಅವರ ಪತಿ ಪ್ರತಿದಿನ ಸಂಜೆ ಸಂಜೆ 7 ಗಂಟೆಗೆ ಡೇರಿಗೆ ಹಾಲು ಕೊಡಲು ಹೋಗುತ್ತಾರೆ. ಆ ಸಮಯದಲ್ಲಿ ಶಾರದಮ್ಮ ಅವರು ಮನೆಯಲ್ಲಿ ಒಂಟಿಯಾಗಿರುತ್ತಾರೆ ಎಂದು ಅದೇ ಗ್ರಾಮದ ದಿಲ್ಲಿಗೌಡ(53) ಎಂಬಾತ ಹಣದ ಆಸೆಗಾಗಿ ನೀಡಿದ ಮಾಹಿತಿ ಮೇರೆಗೆ ಹಾಸನ ಸಮೀಪದ ಬೂವನಹಳ್ಳಿಯ ಭಾರತಿ ಕಾμ ಕ್ಯೂರಿಂಗ್‌ ಎದುರು ವಾಸಿಯಾದ ಶಶಿ (24), ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ನಿವಾಸಿ, ಕಾರು ಚಾಲಕ ತಿಪ್ಪೇಸ್ವಾಮಿ (32), ಬಳ್ಳಾರಿ ಜಿಲ್ಲೆ, ಕೂಡ್ಲಗಿ ತಾಲೂಕು, ಖಾನಹೊಸಹಳ್ಳಿಯ ಹಣ್ಣಿನ ವ್ಯಾಪಾರಿ ಭಾಷಾ (25) ಮತ್ತು ಚಿಕ್ಕಮಗಳೂರು ತಾಲೂಕು ಅಂಬಳೆ ಗ್ರಾಮದ ಎ.ಆರ್‌ .ಧ್ರುವಪ್ರಸಾದ್‌ (21) ಎಂಬವರು ಶಾರದಮ್ಮ ಅವರ ಮನೆಗೆ ನುಗ್ಗಿ ಮಾಂಗಲ್ಯ ಸರ ಮತ್ತು ಮೊಬೈಲ್‌ ದೋಚಿದ್ದರು.

ಈ ಕುರಿತು ಎಸ್ಪಿ ಶ್ರೀನಿವಾಸಗೌಡ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಈ ಹಿಂದೆಯೂ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದರು. ಆ ಸಮಯದಲ್ಲಿ ಪರಸ್ಪರ ಪರಿಚಯವಾಗಿದ್ದು, ಸುಲಿಗೆ ಕೃತ್ಯವನ್ನು ಮುಂದುವರಿಸಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 33 ಗ್ರಾಂ ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್‌  ಬೈಕ್‌ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆರೋಪಿಗಳನ್ನು ಪತ್ತೆ ಹಚ್ಚಿದ ಇನ್‌ಸ್ಪೆಕ್ಟರ್‌ ಸುರೇಶ್‌, ಪಿಎಸ್‌ಐ ಬಸವರಾಜು, ಸಿಬ್ಬಂದಿ ರವಿಕುಮಾರ್‌,  ಕಾಂತರಾಜಪ್ಪ, ಸುಬ್ರಹ್ಮಣ್ಯ, ದೇವರಾಜು , ಗಿರೀಶ್‌ ಅವರನ್ನು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.