ಹಾಸನಾಂಬ ಜಾತ್ರಾ ಮಹೋತ್ಸವ ಸಂಪನ್ನ


Team Udayavani, Oct 30, 2019, 3:00 AM IST

hasanmba

ಹಾಸನ: ಕಳೆದ 12 ದಿನಗಳಿಂದ ನಡೆದ ಹಾಸನದ ಅಧಿ ದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಮಂಗಳವಾರ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ 1.16ಗಂಟೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಜಿಲ್ಲಾಧಿಕಾರಿ ಆರ್‌.ಗಿರೀಶ್‌, ದೇವಾಲಯದ ಆಡಳಿತಾಧಿಕಾರಿ ಎಚ್‌.ಎಲ್‌.ನಾಗರಾಜ್‌ ಅವರ ಸಮ್ಮುಖದಲ್ಲಿ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಅರ್ಚಕರು, ದೇವಾಲಯದ ಬಾಗಿಲು ಮುಚ್ಚುವ ಧಾರ್ಮಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು. ನಂತರ ದೇವಾಲಯದ ಬಾಗಿಲು ಮುಚ್ಚಿ ಬೀಗ ಮುದ್ರೆ ಹಾಕಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸ್ಥಳೀಯ ಶಾಸಕ ಪ್ರೀತಂ ಜೆ.ಗೌಡ, ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ, ತಿಪಟೂರು ಶಾಸಕ ನಾಗೇಶ್‌, ಜಿಲ್ಲಾಧಿಕಾರಿ ಆರ್‌. ಗಿರೀಶ್‌, ಜಿಲ್ಲಾ ರಕ್ಷಣಾಧಿಕಾರಿ ರಾಮ್‌ ನಿವಾಸ್‌ ಸೆಪಟ್‌, ಎಎಸ್ಪಿ ಬಿ.ಎನ್‌. ನಂದಿನಿ, ಜಿಪಂ ಸಿಇಒ ಬಿ.ಎ.ಪರಮೇಶ್‌, ಹಾಸನ ಉಪ ವಿಭಾಗಾಧಿಕಾರಿ ನವೀನ್‌ ಭಟ್‌, ತಹಶೀಲ್ದಾರ್‌ ಮೇಘನಾ ಮತ್ತಿತರರು ಹಾಜರಿದ್ದರು.

ಅ.17ರಿಂದ ದರ್ಶನ ಆರಂಭ: ಅ.17ರಿಂದ ಹಾಸನಾಂಬೆ ದೇಗುಲದ ಬಾಗಿಲು ತೆರೆದು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬಾಗಿಲು ತೆರೆದ ಪ್ರಥಮ ದಿನ ಅಧಿಕೃತವಾಗಿ ಸಾರ್ವಜನಿಕರಿಗೆ ದೇವಿಯ ದರ್ಶನವಿಲ್ಲವೆಂದು ಜಿಲ್ಲಾಡಳಿತ ಘೋಷಣೆ ಮಾಡಿದ್ದರೂ ಅಂದಿನಿಂದಲೇ ಭಕ್ತರು ದೇವಿಯ ದರ್ಶನ ಪಡೆದು. ಹಾಗೆಯೇ ಕೊನೆಯ ದಿನವೂ ಕೆಲವು ಭಕ್ತರು ದೇವಿಯ ದರ್ಶನಕ್ಕೆ ಕಾದು ನಿಂತಿದ್ದರು. ದರ್ಶನಕ್ಕೆ ಬಿಡುವುದಿಲ್ಲ ಎಂಬ ಸೂಚನೆ ಅರಿತ ಭಕ್ತರು ಘೋಷಣೆ ಕೂಗಲಾರಂಭಿಸಿದರು.

ಆನಂತರ ಬಾಗಿಲು ಮಚ್ಚುವ ಎರಡು ಗಂಟೆಗಳಿರುವವರೆಗೂ ಅಂದರೆ 11 ಗಂಟೆವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಆನಂತರ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಧಾರ್ಮಿಕ ವಿಧಿ ವಿಧಾನಗಳನ್ನು ಅರಂಭಿಸಲಾಯಿತು. ಮೊದಲಿಗೆ ದೇವಿಯ ಆಭರಣಗಳನ್ನು ತೆಗೆದು ಅವುಗಳನ್ನು ಜಿಲ್ಲಾ ಖಜಾನೆಗೆ ರವಾನಿಸಲಾಯಿತು, ದೇವಿಯ ಅಭರಣಗಳನ್ನು ಸಾಗಿಸುವಾಗ ಅಭರಣಗಳ ಗಂಟಿನ ಮೇಲೆ ಎರಚಿದ ಕಾಳು ಮೆಣಸುಗಳನ್ನು ಭಕ್ತರು ಪ್ರಸಾದವೆಂದು ಭಾವಿಸಿ ಸಂಗ್ರಹಿಸಿದರು.

ಹಾಸನಾಂಬೆ ದರ್ಶನೋತ್ಸವ ಯಶಸ್ವಿ: ದೇವಾಲಯದ ಬಾಗಿಲು ಮಚ್ಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಯಾವುದೇ ಅಡಚಣೆಗಳಿಲ್ಲದೆ ಹಾಸನಾಂಬೆಯ ದರ್ಶನೋತ್ಸವ ಸುಸೂತ್ರವಾಗಿ ಪೂರ್ಣಗೊಂಡಿದೆ. ಒಟ್ಟು 11 ದಿನಗಳ ಕಾಲ ವಿವಿಧ ಇಲಾಖಾಧಿಕಾರಿಗಳು, ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದ್ದಾರೆ. ಹಾಸನಾಂಬ ಜಾತ್ರಾ ಮಹೋತ್ಸವ ಯಶಸ್ವಿಯಾಗಿದೆ.

ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಮುಂದಿನ ವರ್ಷವೂ ಇದೇ ರೀತಿ ಉತ್ತಮ ಮಳೆ, ಬೆಳೆಯಾಗಲಿ, ಹಾಸನಾಂಬೆಯು ಸರ್ವರಿಗೂ ಒಳಿತು ಮಾಡಲಿ ಪ್ರಾರ್ಥಿಸಿದರು. ಭಕ್ತಾದಿಗಳು ಸುಲಲಿತವಾಗಿ ಹಾಸನಾಂಬ ದೇವಿಯ ದರ್ಶನ ಮಾಡಲು ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಮಾಡಿ ಸಹಕರಿಸಿದ ಜಿಲ್ಲಾಡಳಿತಕ್ಕೆ, ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಸಾವಧಾನವಾಗಿ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದ ಭಕ್ತರನ್ನು ಸಚಿವರ ಅಭಿನಂದಿಸಿದರು.

ಈ ವರೆಗೆ 1.6 ಕೋಟಿ ರೂ. ಆದಾಯ: ಜಿಲ್ಲಾಧಿಕಾರಿ ಆರ್‌ ಗಿರೀಶ್‌ ಮಾತನಾಡಿ, ಹಾಸನಾಂಬೆಯ ದರ್ಶನ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಸಚಿವರ ಮಾರ್ಗದರ್ಶನದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ದೇವಿಯ ನೇರ ದರ್ಶನಕ್ಕೆ ನಿಗದಿಪಡಿಸಿದ್ದ 300 ರೂ. ಹಾಗೂ 1000 ರೂ. ಟಿಕೆಟ್‌ ಮಾರಾಟ ಹಾಗೂ ಪ್ರಸಾದದ ಲಾಡು ಮಾರಾಟದಿಂದ ಸುಮಾರು 1.6 ಕೋಟಿ ರೂ. ಸಂಗ್ರಹವಾಗಿದೆ. ಈ ವರ್ಷ 3 ರಿಂದ 4 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿರುವ ಅಂದಾಜಿದೆ ಎಂದು ಹೇಳಿದರು.

ಇಂದು ಹುಂಡಿ ಎಣಿಕೆ: ದೇವಸ್ಥಾನದ ಹುಂಡಿಗಳನ್ನು ಬುಧವಾರ(ಅ.30) ಎಣಿಕೆ ಮಾಡಲಾಗುವುದು. ಆನಂತರವಷ್ಟೇ ಈ ವರ್ಷ ಹಾಸನಾಂಬ ದೇಗುಲಕ್ಕೆ ಬಂದಿರುವ ಆದಾಯದ ಮಾಹಿತಿ ಸಿಗಲಿದೆ ಎಂದ ಅವರು, ಹಾಸನಾಂಬ ದೇಗುಲದ ಬಾಗಿಲು ತೆರೆದ ದಿನದಿಂದ ದೇವಾಲಯದ ಬಾಗಿಲು ಮಚ್ಚುವ ದಿನದವರೆಗೂ ಭಕ್ತರು, ಅಧಿಕಾರಿಗಳು, ಸಿಬ್ಬಂದಿ ಸಹಕಾರ ನೀಡಿದ್ದಾರೆ. ವಿಶೇಷವಾಗಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳು ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ: ಹಾಸನಾಂಬ ದೇವಾಲಯದ ಬಾಗಿಲು ಮಚ್ಚುವ ಮುನ್ನಾದಿನ ಸೋಮವಾರ ರಾತ್ರಿ ಶ್ರೀ ಸಿದ್ದೇಶ್ವರ ಸ್ವಾಮಿ ಚಂದ್ರಮಂಡಲ ರಥೋತ್ಸವ ನೆರವೇರಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ರಥೋತ್ಸವು ಮಂಗಳವಾರ ಮುಂಜಾನೆ ಹಾಸನಾಂಬಾ ದೇವಾಲಯದ ಆವರಣಕ್ಕೆ ಆಗಮಿಸಿತು. ಆ ಸಂದರ್ಭಲ್ಲಿ ನಡೆದ ಕೆಂಡೋತ್ಸವದದಲ್ಲಿ ಭಕ್ತರು ಕೆಂಡೋತ್ಸವ ಹಾದು ಭಕ್ತಭಾವ ಮೆರೆದರು. ಸಪ್ತ ಮಾತೃಕೆಯರ ಪ್ರತಿ ರೂಪವಾದ ಹಾಸನಾಂಬೆಯು ಸಹೋದರ ಸಿದ್ದೇಶ್ವರ ಸ್ವಾಮಿಯನ್ನು ವರ್ಷಕ್ಕೊಮ್ಮೆ ಭೇಟಿಯಾಗುವ ಸಂದರ್ಭವೇ ಕೆಂಡೋತ್ಸವ ಎಂಬ ನಂಬಿಕೆ ಇದೆ. ಭಕ್ತರು ಕೆಂಡೋತ್ಸವದಲ್ಲಿ ಭಕ್ತಿ ಪರವಶರಾಗಿ ಪಾಲ್ಗೊಳ್ಳುತ್ತಾರೆ.

2020 ರ ನವೆಂಬರ್‌ 5 ರಿಂದ ದರ್ಶನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಭಕ್ತರು ಮುಂದಿನ ವರ್ಷ ನವೆಂಬರ್‌ 5 ರ ವರೆಗೂ ಕಾಯಬೇಕು. 2010ರ ನವೆಂಬರ್‌ 5 ರಿಂದ 17 ರ ವರೆಗೆ ಅಂದರೆ ಮುಂದಿನ ವರ್ಷ 14 ದಿನ ಹಾಸನಾಂಬೆಯ ದರ್ಶನ ಭಕ್ತರಿಗೆ ಸಿಗಲಿದೆ. ಮುಂದಿನ ವರ್ಷ ಬಲಿಪಾಡ್ಯಮಿ ಮತ್ತು ಅಮಾವಾಸ್ಯೆ ನ.16 ರಂದು ಬರಲಿದ್ದು, ನ.17 ರಂದು ಹಾಸನಾಂಬೆಯ ಬಾಗಿಲು ಮುಚ್ಚಲಾಗುವುದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.