2ನೇ ದಿನ ಭಕ್ತರಿಗೆ ಹಾಸನಾಂಬೆ ಸುಸೂತ್ರ ದರ್ಶನ


Team Udayavani, Oct 19, 2019, 3:00 AM IST

2ne-dinavu

ಹಾಸನ: ಹಾಸನಾಂಬೆಯ ದರ್ಶನದ ಸಂದರ್ಭದಲ್ಲಿ ಪ್ರತಿ ವರ್ಷ ಒಂದಿಲ್ಲೊಂದು ಗೊಂದಲ ಉಂಟಾಗುತ್ತಿದ್ದುದು ಸಹಜ. ಆದರೆ ಈ ವರ್ಷ ಹಾಸನಾಂಬೆ ಬಾಗಿಲು ತೆರೆದ ನಂತರ 2ನೇ ದಿನವಾದ ಶುಕ್ರವಾರದವರೆಗೆ ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಭಕ್ತರಿಗೆ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

ಶುಕ್ರವಾರ ಮುಂಜಾನೆಯಿಂದ ಸಂಜೆವರೆಗೂ ಭಕ್ತರು ಸುಸೂತ್ರವಾಗಿ ದೇವಿ ದರ್ಶನ ಪಡೆದರು. 2 ನೇ ದಿನ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬರದಿದ್ದರೂ ಸಾಧಾರಣ ಸಂಖ್ಯೆಯಲ್ಲಿ ಭಕ್ತರು ಹಾಸನಾಂಬೆ ದರ್ಶನ ಪಡೆದರು. ಸಂಜೆ 5.30ಕ್ಕೆ ಮಳೆ ಆರಂಭವಾಯಿತು.

ಆದರೆ ಸರದಿ ಸಾಲುಗಳಿಗೆ ವಾಟರ್‌ ಪ್ರೂಫ್ ಛಾವಣಿ ಅಳವಡಿಸಿರುವುದರಿಂದ ಭಕ್ತರಿಗೆ ಮಳೆಯಿಂದ ಅಡಚಣೆಯಾಗಲಿಲ್ಲ. ಸರದಿ ಸಾಲಿನಲ್ಲಿ ನಿಂತವರಿಗೆ ನೀರಡಿಕೆಯಾದರೆ ಸ್ಕೌಟ್ಸ್‌, ಗೈಡ್ಸ್‌, ಸೇವಾದಳ ಸ್ವಯಂ ಸೇವಕರು ಕುಡಿವ ನೀರು ಪೂರೈಸುತ್ತಿದ್ದಾರೆ. ಸಾಲುಗಳ ಮಧ್ಯೆ ಅಲ್ಲಲ್ಲಿ ಪ್ಲಾಸ್ಟಿಕ್‌ ಕುರ್ಚಿ ಹಾಕಿರುವುದರಿಂದ ಭಕ್ತರು ನಿರಾಯಾಸವಾಗಿ ದೇವಿ ದರ್ಶನ ಪಡೆದರು.

ನೂಕುನುಗ್ಗಲು ಕಂಡು ಬರಲಿಲ್ಲ: ಸರದಿ ಸಾಲಿನಲ್ಲಿ ನಿಂತು ಧರ್ಮ ದರ್ಶನ ಪಡೆಯಲು ಸಮಯವಿಲ್ಲದವರು ದೇವಿ ನೇರ ದರ್ಶನಕ್ಕೆ 1000 ರೂ. ಮತ್ತು 300 ರೂ. ಟಿಕೆಟ್‌ನ ವ್ಯವಸ್ಥೆ ಮಾಡಲಾಗಿದೆ. ಆದರೆ 2ನೇ ದಿನವಾದ ಶುಕ್ರವಾರ 1000 ರೂ. ಟಿಕೆಟ್‌ಗೆ ಹೆಚ್ಚು ಬೇಡಿಕೆ ಕಂಡು ಬರಲಿಲ್ಲ.

300 ರೂ. ಟಿಕೆಟ್‌ ಮತ್ತು ವಿಶೇಷ ಪಾಸು ಹೊಂದಿರುವವರ ಸಾಲಿನಲ್ಲಿಯೂ ನೂಕು ನುಗ್ಗಲು ಬರಲಿಲ್ಲ. ಶಿಫಾರಸು, ಪ್ರಭಾವ ಬಳಸಿ ಸಾವಿರಾರು ಮಂದಿ ದೇವಸ್ಥಾನದ ಪ್ರಧಾನ ದ್ವಾರದ ಮೂಲಕವೇ ದೇವಾಲಯ ಪ್ರವೇಶಿಸಿ ಹಾಸನಾಂಬೆ ದರ್ಶನ ಪಡೆದರು. ಆದರೆ ಧರ್ಮದರ್ಶನದ ಸಾಲುಗಳಲ್ಲಿ ಮಾತ್ರ ಸಾವಿರಾರು ಭಕ್ತರು ಸಾವಧಾನವಾಗಿ ಸಾಗಿ ದರ್ಶನ ಪಡೆದು ಪುನೀತರಾದರು.

ಪರದೆಗಳ ಮೂಲಕ ಪ್ರದರ್ಶನ: ಹಾಸನಾಂಬೆ ಮಹಿಮೆಯನ್ನು ಸಾರುವ ಮಾಹಿತಿಯನ್ನು ಡಿಜಿಟಲ್‌ ಪರದೆಗಳ ಮೂಲಕ ಪ್ರದರ್ಶಿಸಲಾಗುತ್ತಿದ್ದು ಭಕ್ತರಿಗೆ ಬೇಸರವಾಗದಂತೆ ನೋಡಿಕೊಳ್ಳಲಾಗುತ್ತಿದೆ. ಹೊರಾಂಗಣ ಹಾಗೂ ಒಳಾಂಗಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಭದ್ರತೆಗಾಗಿ ಭಾರೀ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ವರ್ಷ ಹಾಸನಾಂಬೆ ದರ್ಶನಕ್ಕೆ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಗೊಂದಲ, ನೂಕು ನುಗ್ಗಲು ಇಲ್ಲದೆ ಸುಸೂತ್ರವಾಗಿ ಈ ವರ್ಷ ದರ್ಶನ ಪಡೆದೆವು. ದೇವಾಲಯದ ಒಳ ಮತ್ತು ಹೊರ ಆವರಣದಲ್ಲಿಯೂ ಆಕರ್ಷಕ ಅಲಂಕಾರ, ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲಾಗಿದೆ.
-ವೇದಾವತಿ, ಬೀಕನಹಳ್ಳಿ

ರಜೆಯ ದಿನಗಳಲ್ಲಿ ಸಹಜವಾಗಿ ದೇವಿ ದರ್ಶನಕ್ಕೆ ನೂಕು ನುಗ್ಗಲು ಉಂಟಾಗುತ್ತದೆ. ಹಾಗಾಗಿ ಶುಕ್ರವಾರವೇ ನಮ್ಮ ಕುಂಟುಂಬ ಹಾಸನಾಂಬೆ ದರ್ಶನ ಪಡೆದವು. ಈ ವರ್ಷ ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ದರ್ಶನವಾಯಿತು.
-ಗಿರೀಶ್‌, ಹಾಸನ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.