ಹಾಸನ ಮಸ್ಟರಿಂಗ್‌ ಕೇಂದ್ರದಲ್ಲಿ ಅವ್ಯವಸ್ಥೆ


Team Udayavani, May 12, 2018, 3:19 PM IST

has-1.jpg

ಹಾಸನ: ಮಸ್ಟರಿಂಗ್‌ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಚುನಾವಣಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ
ಹಾಸನದಲ್ಲಿ ಶುಕ್ರವಾರ ನಡೆಯಿತು. ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯವಸ್ಥೆ ಮಾಡಿದ್ದ ಹಾಸನ ವಿಧಾನಸಭಾ
ಕ್ಷೇತ್ರದ ಮಸ್ಟರಿಂಗ್‌ ಕೇಂದ್ರದಲ್ಲಿ ಮತಯಂತ್ರಗಳು, ವಿ.ವಿ.ಪ್ಯಾಟ್‌ಗಳನ್ನು ಪಡೆಯಲು ಬಂದಿದ್ದ ಮತಗಟ್ಟೆ
ಅಧ್ಯಕ್ಷಾಧಿಕಾರಿ ಮತ್ತು ಸಿಬ್ಬಂದಿ ಉಪಹಾರ, ಕುಡಿಯುವ ನೀರೂ ಇಲ್ಲದೆ ಪರದಾಡಿದರು.

ಬೆಳಗ್ಗೆ 8 ಗಂಟೆಯಿಂದಲೇ ಮಸ್ಟರಿಂಗ್‌ ಕೇಂದ್ರಕ್ಕೆ ಸಿಬ್ಬಂದಿ ಬರಲಾರಂಭಿಸಿದ್ದರು. ತಮಗೆ ನಿಗದಿಯಾದ ಮತಗಟ್ಟೆ ಮಾಹಿತಿ ಪಡೆದು ಇವಿಎಂ, ವಿ.ವಿ.ಪ್ಯಾಟ್‌ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್‌ ಗಳಿಗಾಗಿ ಕಾಯುತ್ತಿ ಸಿಬ್ಬಂದಿಗೆ ಬೆಳಗ್ಗೆ 11.30ರ ವರೆಗೂ ಉಪಹಾರ ಸಿಗಲಿಲ್ಲ.
 
ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಯವರನ್ನು ಸಿಬ್ಬಂದಿ ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ ನಂತರ 11.30ಕ್ಕೆ ಉಪಹಾರ ಬಂದರೂ ಪ್ಲೇಟ್‌ಗಳ ಕೊರತೆ ಇತ್ತು. ಕೆಲವು ಸಿಬ್ಬಂದಿ ಪ್ಲೇಟ್‌ಗಾಗಿ ಪರದಾಡಿ ಕೊನೆಗೆ ಉಪಹಾರ ತಿಂದು ಬಿಸಾಡಿದ್ದ ಅಡಕೆ ಪ್ಲೇಟ್‌ಗಳನ್ನು ತೊಳೆದುಕೊಂಡು ಉಪಹಾರ ತಿಂದರು. 

ಅವ್ಯವಸ್ಥೆಯ ಬಗ್ಗೆ ಜಿಪಂ ಸಿಇಒ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ವ್ಯವಸ್ಥೆ ಸುಧಾರಿಸುವ ಪ್ರಯತ್ನ ನಡೆಯಿತು. ಮಸ್ಟರಿಂಗ್‌ ಕೇಂದ್ರದಲ್ಲಿನ ಅವ್ಯವಸ್ಥೆಯ
ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾನೆ 5 ಗಂಟೆಗೇ ಮನೆ ಬಿಟ್ಟು ಬಂದಿರುವ ನಮಗೆ 11.30ರ ವರೆಗೂ ಉಪಹಾರ ನೀಡಲಿಲ್ಲ. 

ರಕ್ತದೊತ್ತಡ, ಮಧುಮೇಹ ಇರುವ ಬಹುಪಾಲು ಸಿಬ್ಬಂದಿ ಉಪಹಾರವಿಲ್ಲದೇ ಪರದಾಡುವಂತಾಗಿದೆ. ಮಸ್ಟರಿಂಗ್‌ ಕೇಂದ್ರಕ್ಕೆ ಉಪಹಾರ ಸರಬರಾಜು ಮಾಡುವ ಹೊಣೆ ಹೊತ್ತವರ ನಿರ್ಲಕ್ಷ್ಯದಿಂದ ಸಿಬ್ಬಂದಿ ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಅವ್ಯವಸ್ಥೆಯ ನಡುವೆಯೇ ಇವಿಎಂ, ವಿ.ವಿ.ಪ್ಯಾಟ್‌ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್‌ಗಳಲ್ಲಿ 2 ಗಂಟೆಯ ವೇಳೆಗೆ ಮಸ್ಟರಿಂಗ್‌ ಕೇಂದ್ರದಿಂದ ಮತಗಟ್ಟೆಯತ್ತ ಚುನಾವಣಾ ಸಿಬ್ಬಂದಿ ಹೊರಟರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.