ನನ್ನದು ಅಭಿವೃದ್ಧಿ ಸಿದ್ಧಾಂತ, ಲೂಟಿಯದಲ್ಲ: ರೇವಣ್ಣ


Team Udayavani, Sep 5, 2022, 5:29 PM IST

tdy-16

ಹಾಸನ: ನನ್ನದು ಅಭಿವೃದ್ಧಿಯ ಐಡಿಯಾಲಜಿ. ಅವರದು ಲೂಟಿ ಹೊಡೆಯುವ ಐಡಿಯಾಲಜಿ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌. ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ತಿರುಗೇಟು ನೀಡಿದರು.

ರೇವಣ್ಣ ಅವರಹೊಳೆನರಸೀಪುರದ ಐಡಿಯಾ ಲಜಿ ಹಾಸನ ಕ್ಷೇತ್ರಕ್ಕೆ ಹೊಂದಾಣಿಕೆ ಆಗುವುದಿಲ್ಲ. ಅವರು ಹಾಸನ ಕ್ಷೇತ್ರದಿಂದ ಸ್ಪರ್ಧೆಗಿಳಿದರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುವೆ ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದ್ದಕ್ಕೆ ಸುದ್ದಿಗೋಷ್ಠಿಯಲ್ಲಿ ರೇವಣ್ಣ ಅವರು ಪ್ರತಿಕ್ರಿಯಿಸಿದರು.

ಲೂಟಿ ಮಾಡುವ ಐಡಿಯಾಲಜಿ ನನಗೆ ಗೊತ್ತಿಲ್ಲ. ನನಗೆ ಐಡಿಯಾ ಇಲ್ಲದೆಯೇ ಏಷ್ಯಾದಲ್ಲಿಯೇ ಮಾದರಿ ಯಾದ ಬಸ್‌ ನಿಲ್ದಾಣವನ್ನು ಹಾಸನದಲ್ಲಿ ನಾನು ನಿರ್ಮಾಣ ಮಾಡಿಸಿದ್ದೇನೆ. ಹೈಕೋರ್ಟ್‌ ಮಾದರಿಯಲ್ಲಿಯೇ ಜಿಲ್ಲಾ ನ್ಯಾಯಾಲಯದ ಸಂಕಿರ್ಣ ನಿರ್ಮಾಣ, ಹಾಸನ – ಬೆಂಗಳೂರು ರೈಲು ಮಾರ್ಗ, ಹಾಸನ – ಮೈಸೂರು ರೈಲು ಮಾರ್ಗದ ಅಭಿವೃದ್ಧಿ, ಚನ್ನಪಟ್ಟಣ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಹೊಸದಾಗಿ ಬಡಾವಣೆ ನಿರ್ಮಾಣ ಮಾಡಿ ಸಾವಿ ರಾರು ಮನೆಗಳ ನಿರ್ಮಾಣ ಮಾಡಿಸಿದ ಐಡಿಯಾ ಮಾತ್ರ ನನಗೆ ಗೊತ್ತು ಎಂದು ತಿರುಗೇಟು ನೀಡಿದರು.

ಮರ್ಯಾದೆ ಇದ್ದರೆ ಸ್ಥಳೀಯ ಚುನಾವಣೆ ನಡೆಸಿ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹೊಸ ಬಡಾವಣೆ ನಿರ್ಮಾಣದ 1180 ಕೋಟಿ ರೂ. ಯೋ ಜನೆಯಲ್ಲಿ 100ಕೋಟಿ ರೂ. ಕಮಿಷನ್‌ ವಸೂಲಿಯಂತಹ ಐಡಿಯಾಲಿಗಳೆಲ್ಲ ನಮಗೆ ಗೊತ್ತಾಗಲ್ಲ. ಐಡಿಯಾಜಲಿ ಇರುವವರು 10 ವರ್ಷದಿಂದ ಹಾಸನ-ಸಕಲೇಶಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏಕೆ ಪೂರ್ಣಗೊಳಿಸಿಲ್ಲ? ಜಿಲ್ಲಾ ಮತ್ತು ತಾಪಂ ಚುನಾವಣೆಗಳನ್ನು ನಡೆಲು ಬಿಜೆಪಿ ಮುಖಂಡರಿಗೆ ಐಡಿ ಯಾ ಕೊಡಲಿ ಎಂದು ಪ್ರೀತಂ ಜೆ.ಗೌಡ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಜಿಪಂ, ತಾಪಂಗಳಿಗೆ ಚುನಾವಣೆ ನಡೆಸಲಿ ಎಂದು ಆಗ್ರಹಪಡಿಸಿದರು.

ರೈತರ ಸಾಲ ಮನ್ನಾ ಮಾಡಿ: ಅತಿವೃಷ್ಟಿಯಿಂದ ರಾಜ್ಯದ ರೈತರು ಈ ವರ್ಷ ಭಾರೀ ನಷ್ಟ ಅನುಭವಿ ಸಿದ್ದಾರೆ. ಸರ್ಕಾರ ಒಂದು ಬಾರಿ ರಾ ಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿಗಾಗಿ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವ ನ್ನು ಮನ್ನಾ ಮಾಡಲಿ ಎಂದು ರೇವಣ್ಣ ಅವರು ಒತ್ತಾಯಿಸಿದರು.

ಅಪಾರ ಬೆಳೆ ಹಾನಿ: ಹಾಸನ ಜಿಲ್ಲೆಯಲ್ಲಿ ಆಲೂಗಡ್ಡೆ, ಶುಂಠಿ , ತರಕಾರಿ ಬೆಳೆಗಳು ಬಹುತೇಕ ನಾಶವಾಗಿವೆ. ಮೆಕ್ಕೆ ಜೋಳದ ಬೆಳೆ ಹಸಿರಾಗಿದ್ದರೂ ನಿರಂತರ ಮಳೆಯಿಂದಾಗಿ ಕಾಳು ಕಟ್ಟದೆ ಬೆಳೆ ನಾಶವಾಗಿದೆ. ಕಂದಾಯ, ಕೃಷಿ, ತೋಟ ಗಾರಿಕೆ ಹಾಗೂ ಕಾಫಿ ಮಂಡಳಿ ಅಧಿಕಾರಿಗಳು ಪ್ರತಿ ತಾಲೂಕಿಗೂ ತೆರಳಿ ಬೆಳೆ ಹಾನಿಯ ಸಮೀಕ್ಷೆ ಮಾಡಬೇಕು. ಜಿಲ್ಲಾಧಿಕಾರಿಯವರನ್ನೂ ನಿನ್ನೆ ನಾನು ಭೇಟಿಯಾಗಿ ಬೆಳೆ ಹಾನಿ ಸಮೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂ ದು ಮನವಿ ಮಾಡಿದ್ದೇನೆ ಎಂದರು.

ಹಿಂದಿನ ಜಿಲ್ಲಾಧಿಕಾರಿ ಆರ್‌ ಗಿರೀಶ್‌ ಅವರು ಒಂದು ತಿಂಗಳ ಹಿಂದೆಯೇ ಜಿಲ್ಲೆಯಲ್ಲಿ ಮಳೆಯಿಂದಾಗಿ 450 ಕೋಟಿ ರೂ.ಹಾನಿಯಾಗಿದೆ ಎಂದು ಹೇಳಿದ್ದರು. ಆನಂತರವೂ ಭಾರೀ ಪ್ರಮಾಣದ ಮಳೆಯಾಗಿದ್ದು, ನೂರಾರು ಕೋಟಿ ರೂ. ಬೆಳೆ, ಆಸ್ತಿಗೆ ಹಾನಿಯಾಗಿದೆ ಎಂದು ಹೇಳಿದರು.

ನೆರೆ ಹಾನಿ ಪರಿಹಾರ ಬಿಡುಗಡೆ ಮಾಡಲಿ : ರಾಜ್ಯದಲ್ಲಿ ಈ ವರ್ಷ ಹಿಂದೆಂದೂ ಕಾಣದಷ್ಟು ಮಳೆ ಸುರಿದಿದ್ದು, ರೈತರು ಬೆಳೆದಿದ್ದ ಎಲ್ಲ ಬೆಳೆಗಳೂ ಬಹುತೇಕ ನಾಶವಾಗಿವೆ. ಕೆರೆ-ಕಟ್ಟೆಗಳು ಒಡೆಯುವ ಆತಂಕ ಎದುರಾಗಿದೆ. ಮನೆಗಳು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಕುಸಿದು ಬೀಳುತ್ತಿವೆ. ರಸ್ತೆಗಳು ಹಾಳಾಗಿವೆ. ಪರಿಹಾರ ಕಾರ್ಯಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಿಂಗಳಿಗೊಮ್ಮೆ ರಾಜ್ಯಕ್ಕೆ ಬರುವುದಾಗಿ ಹೇಳಿದ್ದಾರೆ. ಅವರು ತಿಂಗಳಿಗಲ್ಲ. 15 ದಿನಕ್ಕೊಮ್ಮೆ ಬರಲಿ. ರೈತರ ಸಂಕಷ್ಟವನ್ನು ಆಲಿಸಲಿ. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಕೇಂದ್ರದಿಂದ ನೆರವು ಬಿಡುಗಡೆ ಮಾಡಲಿ ಎಂದು ರೇವಣ್ಣ ಅವರು ಮನವಿ ಮಾಡಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.