ಅಭಿವೃದ್ಧಿಗಾಗಿ ಹೋರಾಟ,ಚಿಲ್ಲರೆ ರಾಜಕಾರಣ ಮಾಡಲ್ಲ


Team Udayavani, Oct 10, 2020, 4:02 PM IST

Hasan-tdy-2

ಹಾಸನ: “ನಾನು 8 ವರ್ಷ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಹಾಸನ ಅಷ್ಟೇ ಅಲ್ಲ. ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆಯೂ ಮಾತನಾಡುವ ನೈತಿಕತೆ ಇದೆ’ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ತಿರುಗೇಟು ನೀಡಿದರು.

ಜನತೆಗೆ ಗೊತ್ತಿದೆ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನ ದೇವೇಗೌಡರು ಮತ್ತು ತನಗೆ ಅಧಿಕಾರ ಮತ್ತು ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಜನರ ಋಣ ತೀರಿಸುವ ಹೊಣೆಗಾರಿಕೆ ತನ್ನ ಮೇಲಿದೆ. ಹೊಣೆಗಾರಿಕೆ ನಿರ್ವಹಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಹಾಸನದ ಅಭಿವೃದ್ಧಿಗೆ ಏನೇನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ ಎಂದರು.

ಹೊಣೆಯಾರು?: ತಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾದಾಗಿದ್ದಾಗಲೇ ಹಾಸನದ ರೈಲ್ವೆ ಮೇಲ್ಸೇತುವೆನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ಹಾಗೂ ಸೌಂದರ್ಯಿಕರಣಕ್ಕೆ 144ಕೋಟಿ ರೂ. ಯೋಜನೆ ರೂಪಿಸಿದ್ದೆ.ಕಾಮಗಾರಿ ಆರಂಭದ ಸಮಯದಲ್ಲಿ ಆ ಯೋಜನೆ ತಡೆ ಹಿಡಿಯಲು ಕಾರಣ ಯಾರು?. ಸಣ್ಣ – ಪುಟ್ಟ ಕೆಲಸಗಳಿಗೆಲ್ಲಾ ಹೆಸರು ಹಾಕಿಕೊಳ್ಳುವ ಚಿಲ್ಲರೆ ರಾಜಕಾರಣ  ಮಾಡುವುದಿಲ್ಲ ಎಂದು ಪ್ರೀತಂ ಜೆ.ಗೌಡ ಅವರ ಹೆಸರು ಹೇಳದೆ ತರಾಟೆಗೆ ತೆಗೆದುಕೊಂಡರು.

ಜನ ತೀರ್ಮಾನಿಸಲಿ: 2500 ಕೋಟಿ ರೂ. ವೆಚ್ಚದಲ್ಲಿ ಹಾಸನ – ಬೆಂಗಳೂರು ಚತುಷ್ಪಥ ರಸ್ತೆ ನಿರ್ಮಾಣ ವನ್ನು ತಾನು ಮಾಡಿಸಿದ್ದರಿಂದಲೇ ಈ ಗಿರಾಕಿ(ಪ್ರೀತಂ ಜೆ.ಗೌಡ) ಈಗ ಅರಾಮವಾಗಿ ಹಾಸನ-ಬೆಂಗಳೂರು ನಡುವೆ ತಿರುಗುತ್ತಿದ್ದಾರೆ. ಹಾಸನ-ಬೆಂಗಳೂರು ರೈಲು ಮಾರ್ಗ, ಹಾಸನದ ಸಾಲಗಾಮೆ ರಸ್ತೆ, ಹಾಸನ – ದುದ್ದ ಚತುಷ್ಪಥ ರಸ್ತೆ ಮತ್ತು ಹಲವು ಉನ್ನತ ಶೈಕ್ಷಣಿಕ ಸಂಸ್ಥೆಗಳನ್ನು ಹಾಸನದಲ್ಲಿ ಸ್ಥಾಪನೆ ಮಾಡಿಸಿದವರು ಯಾರು ಎಂಬುದನ್ನು ಜನರೇ ವಿಮರ್ಶೆ ಮಾಡಲಿ ಎಂದರು.

ಇತ್ತೀಚೆಗೆ ಸಿಎಂ ಯಡಿಯೂರಪ್ಪ ಅವರನ್ನು ಜಿಲ್ಲೆಯ ಎಲ್ಲಾ ಜೆಡಿಎಸ್‌ ಶಾಸಕರು ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಅವರು ಸ್ಪಂದಿಸುವರೆಂಬನಂಬಿಕೆ ಇದೆ. ಸಿಎಂ ಭೇಟಿ ವೇಳೆ ಜಿಲ್ಲೆಯಲ್ಲಿ ಅಧಿಕಾರಿಗಳವರ್ಗಾವಣೆಯಲ್ಲಿದಂಧೆ ನಡೆಸುತ್ತಿರುವ ಬಗ್ಗೆ ಅಧಿಕಾರಿಗಳು, ಎಂಜಿನಿಯರ್‌ಗಳ ವರ್ಗಾವಣೆಗೆ30 ಲಕ್ಷದಿಂದ 1 ಕೋಟಿ ರೂ.ವರೆಗೂ ವಸೂಲಿ ಮಾಡಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರ ಗಮನ ಸೆಳೆದಿದ್ದಾರೆ. ಆದರೆ ನಗರಸಭೆ ಮೀಸಲಾತಿಬಗ್ಗೆ ಮಾತನಾಡಲಿಲ್ಲ. ನಾವು ಅಂತಹ ಆತ್ಮಸಾಕ್ಷಿವಿರೋಧಿ ಕೆಲಸ ಮಾಡವುದಿಲ್ಲ ಎಂದರು. ಮಾಜಿ ಶಾಸಕ ಬಿ.ವಿ.ಕರೀಗೌಡ ಇದ್ದರು.

ಮೀಸಲಾತಿ ಎಸ್ಟಿಗೆ ಮೀಸಲು ತಂದರೆ ಹೆದರಿ ಓಡುವುದಿಲ್ಲ :  ಹಾಸನ ನಗರಸಭೆ ಮೀಸಲಾತಿಯನ್ನು ಎಸ್ಟಿಗೆ ಮೀಸಲಾಗಿರಿಸಿರುವುದರಿಂದ ನಾವೇನೂ ಹೆದರಿ ಓಡುವುದಿಲ್ಲ. ಹೋರಾಟ ಮಾಡುವುದು ಗೊತ್ತಿದೆ. ನ್ಯಾಯಾಲಯಕ್ಕೂ ಸ್ಪಷ್ಟ ಮಾಹಿತಿ ನೀಡದೆ ಮೋಸ ಮಾಡಿ ಮೀಸಲಾತಿ ನಿಗದಿಮಾಡಿರುವ ಸರ್ಕಾರದಕ್ರಮವನ್ನು ಅಡ್ವೋಕೇಟ್‌ ಜನರಲ್‌ ಅವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ?. ನೈತಿಕತೆ ಇದ್ದರೆ ಅವರು ರಾಜೀನಾಮೆಕೊಟ್ಟು ಹೋಗಬೇಕು. ಮೀಸಲಾತಿ ನಿಗದಿ ಪ್ರಶ್ನಿಸಿ ಈಗಾಗಲೇನ್ಯಾಯಾಲಯದ ಮೆಟ್ಟಿಲು ಹತ್ತಿರುವ ಹಾಸನನಗರಸಭೆ ಸದಸ್ಯರಿಗೆ ನ್ಯಾಯ ಸಿಗುವುದೆಂಬವಿಶ್ವಾಸವಿದೆ ಎಂದೂ ಮಾಜಿ ಸಚಿವ ರೇವಣ್ಣ ಹೇಳಿದರು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.