ಲೂಟಿಕೋರ ಸರ್ಕಾರದಿಂದ ಅಭಿವೃದ್ಧಿ ಸ್ಥಗಿತ
Team Udayavani, Aug 8, 2020, 12:41 PM IST
ಹಾಸನ: ಲೂಟಿಕೋರ ಸರ್ಕಾರದಿಂದ ಜಿಲ್ಲೆಯಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಜೆಡಿಎಸ್ ಮುಖಂಡ ಮಾಜಿ ಸಚಿವ ಎಚ್. ಡಿ. ರೇವಣ್ಣ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರಕ್ಕೆ ರೈತರು, ಕಾರ್ಮಿಕರ ಬಗ್ಗೆ ಕಾಳಜಿಯೇ ಇಲ್ಲ. ಎಲ್ಲ ಯೋಜನೆಗಳಲ್ಲೂ ಕಮೀಷನ್ ಪಡೆಯುವ ದಂಧೆ ನಡೆಸುತ್ತಿದೆ. ಗುತ್ತಿಗೆದಾರರು ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿಕೊಳ್ಳಲು ( ಎಲ್ಒಸಿ) ಮುಂಗಡವಾಗಿ ಆರೂವರೆ ಪರ್ಸೆಂಟ್ ಕಮೀಷನ್ ಕೊಡುತ್ತಿದ್ದಾರೆ. ಕಮೀಷನ್ ಕೊಡದ ಗುತ್ತಿಗೆದಾರರ ಬಿಲ್ ಗಳು ವರ್ಷ ಗಳಾ ದರೂ ಪಾವತಿ ಯಾಗು ವುದಿಲ್ಲ ಎಂದು ದೂರಿದರು.
ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಜಲ ಸಂಪನ್ಮೂಲ ಇಲಾಖೆಯಲ್ಲಿ ಯಾವೊಂದು ಕೆಲಸವೂ ನಡೆದಿಲ್ಲ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ದ್ವೇಷದ ರಾಜಕಾರಣವನ್ನು ಸರ್ಕಾರ ಮಾಡುತ್ತಿದೆ. ಇಂಥ ದ್ವೇಷದ ರಾಜಕಾರಣಕ್ಕೆ ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತದೆ ಎಂದ ಅವರು, ನೀರಾವರಿ ಇಲಾಖೆಯಲ್ಲಿ ಹಣ ಕೊಟ್ಟ ಕಡತಗಳಿಗೆ ಸಹಿ ಹಾಕುವ ಪದ್ಧತಿ ಈ ಸರ್ಕಾರದಲ್ಲಿದೆ. ಹಣ ಕೊಡದ ಕಡತಗಳು ಮೂಲೆ ಸೇರುತ್ತಿವೆ. ವಿಧಾನಸಭಾ ಅಧಿವೇಶನ ಕರೆಯಲಿ ಅಂಕಿ ಅಂಶಗಳ ಸಹಿತ ಸರ್ಕಾರದ ಲೋಪ, ಹಾಸನ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿ ರುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದು ಕೊಳ್ಳುವೆ ಎಂದು ರೇವಣ್ಣ ಹೇಳಿದರು.
ಯಗಚಿ , ವಾಟೆಹೊಳೆ ಜಲಾಶಯಗಳು ಭರ್ತಿ ಯಾಗಿ ಒಂದು ವಾರ ಕಳೆದಿದೆ. ಹೇಮಾ ವತಿ ಜಲಾಶಯವೂ ಇನ್ನೆರಡು ದಿನದಲ್ಲಿ ಭರ್ತಿ ಯಾಗಲಿದೆ. ಆದರೂ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಇನ್ನೂ ನೀರು ಬಿಡುವ ತೀರ್ಮಾನ ಮಾಡಿಲ್ಲ. ಹೀಗಾದರೆ ರೈತರು ಬೆಳೆಗೆ ಸಿದ್ಧತೆ ಮಾಡಿಕೊಳ್ಳುವುದು ಯಾವಾಗ ಎಂದ ಅವರು, ತಕ್ಷಣದಿಂದಲೇ ನಾಲೆಗಳಲ್ಲಿ ಬೆಳೆಗಳಿಗೆ ನೀರು ಹರಿಸಬೇಕು. ನೀರಾವರಿ ಸಲಹಾ ಸಮಿತಿ ಸಭೆಯವರೆಗೂ ಕಾಯಕೂಡದು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…