ಹಕ್ಕು ಪತ್ರಕ್ಕಾಗಿ ಹೇಮಾವತಿ ಮುಳುಗಡೆ ಸಂತ್ರಸ್ತರ ಪರದಾಟ


Team Udayavani, Mar 9, 2020, 3:00 AM IST

hakku-patra

ಸಕಲೇಶಪುರ/ಆಲೂರು: ಹೇಮಾವತಿ ಅಣೆಕಟ್ಟಿನಿಂದ ಮುಳುಗಡೆಯಾದ ಸಂತ್ರಸ್ತರಿಗೆ ಸರ್ಕಾರ ಬ್ಯಾಬ ಅರಣ್ಯದಲ್ಲಿ ಜಮೀನು ನೀಡಿದ್ದು, ಹಲವು ವರ್ಷಗಳು ಕಳೆದರು ಜಮೀನಿಗೆ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಕೊಡದಿರುವುದರಿಂದ ಹಲವು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ.

148 ಗ್ರಾಮಗಳ ಮುಳುಗಡೆ ಸಂತ್ರಸ್ತರು: 47 ವರ್ಷಗಳ ಹಿಂದೆ ಗೊರೂರಿನಲ್ಲಿ ಹೇಮಾವತಿ ಜಲಾಶಯ ನಿರ್ಮಾಣ ಮಾಡಲು ಪೊನ್ನಾಥಪುರ, ಬಂಡಿ ಮಲ್ಲೇನಹಳ್ಳಿ, ಮಂದಿರಾ, ಕಾಕನಹಳ್ಳಿ, ಸಿದ್ದಾಪುರ, ಹೊಳೆಮಾರನಹಳ್ಳಿ, ಅಪ್ಪಗೊಡನಹಳ್ಳಿ,ಗಂಜಿಗೆರೆ, ಬಸವನಹಳ್ಳಿ, ಅಜ್ಜಗೊಡನಹಳ್ಳಿ,ಸೇರಿದಂತೆ ಸುಮಾರು 148 ಗ್ರಾಮಗಳು ಮುಳುಗಡೆಯಾಗಿದ್ದರಿಂದ ಅಲ್ಲಿದ ಜನರನ್ನು ಬೇರೆ ಕಡೆ ಸ್ಥಳಾಂತರ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಕೆಲವು ಸಂತ್ರಸ್ತರಿಗೆ ಬ್ಯಾಬ ಅರಣ್ಯ, ಧರ್ಮಾಪುರಿ,ಮಣಿಪುರ, ಶಿವಸಾಗರ, ಮಲ್ಲೇಶ್ವರ ಸೇರಿದಂತೆ ಇತರ ಭಾಗಗಳಲ್ಲಿ ಸುಮಾರು 1,558 ಎಕರೆ ಜಮೀನಿನಲ್ಲಿ ಒಂದು ಸರ್ಟಿಫಿಕೇಟಿಗೆ 4 ಎಕರೆಯಂತೆ ಜಮೀನು ನೀಡಲಾಗಿತ್ತು. ಅದರೆ ಜಮೀನು ನೀಡಿ 5 ದಶಕ ಕಳೆದರೂ ಇದುವರೆಗೂ ಯಾವುದೇ ಹಕ್ಕು ಬಾಧ್ಯತೆ ನೀಡದಿರುವುದರಿಂದ ಜಮೀನಿಗೆ ಸೂಕ್ತ ದಾಖಲೆಗಳನ್ನು ಕೊಡುವಂತೆ ತಾಲೂಕು ಕಚೇರಿಗೆ ಸಂತ್ರಸ್ತರು ದಿನಂಪ್ರತಿ ಅಲೆದಾಡುವುದು ಬಿಟ್ಟರೆ ಯಾವುದೆ ಪ್ರಯೋಜನವಾಗಿಲ್ಲ.

ಸಾಗುವಳಿ ಚೀಟಿ ಬಿಟ್ಟರೆ ಬೇರೇನೂ ಇಲ್ಲ: ಐದು ದಶಕ ಕಳೆದರೂ ಜಮೀನಿನ ಪಕ್ಕಾ ಪೋಡಿ ಆಗದ ಕಾರಣ ಹಲವು ಕುಟುಂಬಗಳು ಜಮೀನಿನ ಆಸೆಯನ್ನು ಬಿಟ್ಟು ಬೇರೆಡೆಗೆ ವಲಸೆ ಹೋಗಿವೆ. ಹಲವು ಸಂತ್ರಸ್ತರ ಬಳಿ ಜಮೀನಿಗೆ ಸಂಬಂಧಪಟ್ಟಂತೆ ಸಾಗುವಳಿ ಚೀಟಿ ಬಿಟ್ಟರೆ ಬೇರೆ ಯಾವ ದಾಖಲೆಗಳು ದೊರೆಯುವುದಿಲ್ಲ. ಕೆಲವು ಅಧಿಕಾರಿಗಳು ಜಮೀನು ದಾಖಲೆಗಳನ್ನು ಮಾಡಿಕೊಡುವುದಾಗಿ ಹಣ ಪಡೆದು ಕೆಲಸ ಮಾಡಿಕೊಡದೇ ದಿನಂಪ್ರತಿ ಕಚೇರಿಗೆ ಅಲೆಸುತ್ತಾ ಸಂತ್ರಸ್ತರನ್ನು ಕತ್ತಲೆ ಕೋಣೆಯಲ್ಲಿ ಇಟ್ಟಿದ್ದರೆಂಬ ಆರೋಪಗಳು ಕೇಳಿ ಬಂದಿದೆ.

ದಶಕಗಳ ಹಿಂದೆ ಹೇಮಾವತಿ ಅಣೆಕಟ್ಟೆ ಕಟ್ಟಲು ಕೆಲವು ಕುಟುಂಬಗಳು ಜಮೀನು ನೀಡಿ ತ್ಯಾಗ ಮಾಡಿದ್ದರಿಂದ ಇಂದು ಕೋಟ್ಯಂತರ ಜನ ನೆಮ್ಮದಿಯಿಂದ ಅನ್ನ ತಿನ್ನುತಿದ್ದಾರೆ. ಆದರೆ ಇಂದು ಜಮೀನಿನ ಸಾಗುವಳಿ ಪತ್ರ ಇದ್ದರೂ ಭೂಮಿ ತಮಗೆ ಸೇರಿದ್ದು ಎಂಬುದರ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ದಾಖಲೆ ನೀಡದೇ ಇರುವುದರಿಂದ ಮುಳುಗಡೆ ಪ್ರದೇಶದ ಸಂತ್ರಸ್ತರು ಕಂಗಾಲಾಗಿದ್ದಾರೆ. ಕೂಡಲೇ ತಾಲೂಕು ಆಡಳಿತದಿಂದ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ನೀಡಿದ್ದ ಭೂಮಿಗೆ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅವರ ಸಮಸ್ಯೆ ಪರಿಹರಿಸುವುದು ಅಗತ್ಯವಾಗಿದೆ.

ಗೊರೂರು ಡ್ಯಾಂ ನಿರ್ಮಾಣಕ್ಕೆ ಭೂಮಿ ನೀಡಿರುವ ಸಂತ್ರಸ್ತರಿಗೆ ಸರ್ಕಾರದಿಂದ ನೀಡಿರುವ ಭೂಮಿಗೆ ಹಕ್ಕು ಪತ್ರ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು
-ಶಿರೀನ್‌ತಾಜ್‌, ತಹಶೀಲ್ದಾರ್‌

ಜಮೀನು ಮಾರಾಟ ಅಥವಾ ಮಕ್ಕಳಿಗೆ ಪಾಲು ಮಾಡಿಕೊಡುವಂತಹ ಸಂದರ್ಭದಲ್ಲಿ ಹಕ್ಕುಪತ್ರವಿಲ್ಲದೇ ಜಮೀನನ್ನು ಪರಭಾರೆ ಮಾಡುವಂತಿಲ್ಲ. ಸಂಬಂಧ ಪಟ್ಟವರು ಕೂಡಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಕೃಷ್ಣೇಗೌಡ, ಮಾಜಿ ಗ್ರಾಪ ಸದಸ್ಯರು

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.