ತುಮಕೂರಿಗೆ ಇಂದಿನಿಂದ ಹೇಮೆ ನೀರು

ಪ್ರತಿದಿನ 2 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆಗೆ ಸೂಚನೆ: ಹಾಸನ ಜಿಲ್ಲೆ ಶಾಸಕರ ವಿರೋಧ

Team Udayavani, May 1, 2020, 2:14 PM IST

ತುಮಕೂರಿಗೆ ಇಂದಿನಿಂದ ಹೇಮೆ ನೀರು

ಸಾಂದರ್ಭಿಕ ಚಿತ್ರ

ಹಾಸನ: ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಮಾತ್ರ ಶುಕ್ರವಾರ ದಿಂದ ನಾಲೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ಹೇಮಾವತಿ ಎಡದಂಡೆ ನಾಲೆಯಲ್ಲಿ ಹಾಸನ, ಮಂಡ್ಯ ಮತ್ತು ತುಮಕೂರು ಜಿಲ್ಲೆಗೆ ನೀರು ಹರಿಯಬೇಕು. ಆದರೆ ಹಾಸನ ಮತ್ತು ಮಂಡ್ಯ ಜಿಲ್ಲೆಗೆ ನೀರು ಹರಿಸದೆ ತುಮಕೂರು ಜಿಲ್ಲೆಗೆ ಮಾತ್ರ ಎಡದಂಡೆ ನಾಲೆಗೆ ನೀರು ಹರಿಸಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಮತ್ತು ಹಾಸನ ತಾಲೂಕು ಗೊರೂರಿನಲ್ಲಿರುವ ಹೇಮಾವತಿ ಯೋಜನೆಯ ಎಂಜಿನಿಯರ್‌ಗಳಿಗೆ ಗುರುವಾರ ಸೂಚನೆ ನೀಡಲಾಗಿದ್ದು, ಶುಕ್ರವಾರದಿಂದ 15 ದಿನಗಳವರೆಗೆ ಪ್ರತಿದಿನ 2ಸಾವಿರ ಕ್ಯೂಸೆಕ್‌ ನಂತೆ 2 ಟಿಎಂಸಿ ನೀರು ಹರಿಯಲಿದೆ.

ಸಚಿವರ ಲಾಬಿ: ತುಮಕೂರು ಜಿಲ್ಲೆಯಲ್ಲಿ ಕುಡಿವ ನೀರಿಗೆ ತೊಂದರೆ ಇದೆ. ಹಾಗಾಗಿ ತುರ್ತಾಗಿ ನೀರು ಹರಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಹಾಸನ ಜಿಲ್ಲಾ ಹೆಚ್ಚುವರಿ ಉಸ್ತುವಾರಿ ಸಚಿವರೂ ಆಗಿರುವ ಜೆ.ಸಿ.ಮಾಧುಸ್ವಾಮಿ ಒತ್ತಡ ಹೇರಿ ನೀರು ಬಿಡಿಸಿಕೊಳ್ಳುವ ಮೂಲಕ ತವರು ಜಿಲ್ಲೆ ತುಮಕೂರಿನ ಪರ ಲಾಬಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೇಮಾವತಿ ಜಲಾಶಯದಿಂದ ನಾಲೆಗಳಲ್ಲಿ ನೀರು ಹರಿಸಿ ಅಚ್ಚುಕಟ್ಟು ಪ್ರದೇಶದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಬೇಸಿಗೆಯಲ್ಲಿ ಕುಡಿಯುವ ನೀರಿನ ಬವಣೆ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಜೆಡಿಎಸ್‌ ಶಾಸಕರಾದ ಎ.ಟಿ. ರಾಮಸ್ವಾಮಿ. ಎಚ್‌.ಡಿ.ರೇವಣ್ಣ, ಸಿ.ಎನ್‌. ಬಾಲಕೃಷ್ಣ ಅವರು ಒತ್ತಾಯಿಸಿದ್ದರು. ಆದರೆ ಈಗ ಹಾಸನ ಜಿಲ್ಲೆಗೆ ನೀರು ಬಿಡದೆ ಹಾಸನ ಜಿಲ್ಲೆಯ ಮೂಲಕವೇ ತುಮಕೂರು ಜಿಲ್ಲೆಗೆ ಮಾತ್ರ ನೀರು ಕೊಂಡೊಯ್ಯಲಾಗುತ್ತಿದೆ. ಈ ಬೆಳವಣಿಗೆಯು ರಾಜಕೀಯ ಸಂಘರ್ಷಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಹೇಮಾವತಿ
ಜಲಾಶಯವು ಹಾಸನ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಯ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಆದರೆ ಮೂರು ಜಿಲ್ಲೆಗೆ ನೀರು ಕೊಡದೆ ತುಮಕೂರು ಜಿಲ್ಲೆಗೆ ಮಾತ್ರ ನೀರು ಹರಿಸಲು ಮುಂದಾಗಿ ರುವುದು ಅನು ಮಾನಕ್ಕೆ ಕಾರಣವಾಗಿದೆ.

ಕುಡಿಯುವ ನೀರಿಗಾಗಿ ಬಿಡುಗಡೆ:
ಹೇಮಾವತಿ ಜಲಾಶಯದಿಂದ ತುಮಕೂರಿಗೆ 15 ದಿನಗಳ ವರೆಗೆ 2000 ಕ್ಯೂಸೆಕ್‌ ನೀರನ್ನು ಶುಕ್ರವಾರದಿಂದ ಬಿಡಲಾಗುತ್ತಿದೆ. ಈ ಸಂಬಂಧ ಸೂಚನೆ ಬಂದಿದೆ. ಅಚ್ಚುಕಟ್ಟು ವ್ಯಾಪ್ತಿಯ ಇನ್ನುಳಿದ ಜಿಲ್ಲೆಗಳಿಗೂ ಅಗತ್ಯವಿದ್ದರೆ ನೀರು ಬಿಡುಗಡೆಗೆ ಅಗತ್ಯದಷ್ಟು ನೀರು ಜಲಾಶಯ ದಲ್ಲಿದೆ. ಎಂದು ಹೇಮಾವತಿ ಯೋಜನೆ ಕಾರ್ಯಪಾಲಕ ಎಂಜಿನಿಯರ್‌ ವೆಂಕಟರ ಮಣಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಐಸಿಸಿ ಸಭೆ ಕರೆದು ತೀರ್ಮಾನಿಸಲಿ: ಶುಕ್ರವಾರದಿಂದ ನೀರು ಬಿಡುತ್ತಿರುವ ವಿಚಾರ ನನ್ನ ಗಮನಕ್ಕೂ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಬೇರೆ ಯಾರೇ ಆಗಲಿ ಏಕ ಪಕ್ಷೀಯ ತೀರ್ಮಾನ ತೆಗೆದುಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ಅಚ್ಚುಕ್ಟ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಕೆರೆಗಳಿಗೂ ನೀರು ಹರಿಸಬೇಕು. ಹೇಮಾವತಿ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಶಾಸಕರನ್ನೊಳಗೊಂಡ ನೀರಾವರಿ ಸಲಹಾ ಸಮಿತಿ ಸಭೆ ( ಐಸಿಸಿ ಸಭೆ) ಕರೆದು ಚರ್ಚಿ ನೀರು ಬಿಡುವ
ತೀರ್ಮಾನ ಕೈಗೊಳ್ಳಬೇಕು. ಈ ಸಂಬಂಧ ಹಾಸನ ಜಿಲ್ಲೆಯ ಅಚ್ಚುಕಟ್ಟು ವ್ಯಾಪ್ತಿಯ ಜೆಡಿಎಸ್‌ ಶಾಸಕರು ಶುಕ್ರವಾರ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಜೆಡಿಎಸ್‌ ಮುಖಂಡ, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಅವರು ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.